ಮಾದ್ಲಮನೆ ಸಾಯಿ ದೇವಾಲಯಕ್ಕೆ ಬಡಿದ ಸಿಡಿಲು,ಹಾನಿ

ಸಿದ್ಧಾಪುರ ಕಲಕೈ ಗ್ರಾಮದ ಮಾದ್ಲ ಮನೆ ಮಜರೆಯ ಶ್ರೀ ಸಾಯಿಮಂದಿರ ದೇವಸ್ಥಾನಕ್ಕೆ ಸಿಡಿಲು ಬಡಿದು, ದೇವಸ್ಥಾನದ ಮೈಕ್ ಸೆಟ್, ದೇವಸ್ಥಾನದ ವಿದ್ಯುತ್ ಸಂಪರ್ಕ& ಪಾತ್ರೆಗಳು ಹಾಳಾಗಿವೆ. ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು . ಇದರಿಂದ ಅಂದಾಜು ಹಾನಿ 1,50,000 ರೂ ಆಗಿದೆ. ಈ ಘಟನೆಯಿಂದ ಯಾವುದೇ ಜೀವ ಹಾನಿ ಸಂಭವಿಸಿರುವುದಿಲ್ಲ. ಈ ಘಟನೆ 21/10/2021ರಂದು(ಗುರುವಾರ) ಸಂಜೆ 4-45ರ ಹೊತ್ತಿಗೆ ಸಂಭವಿಸಿದೆ.

ದೇಶದಲ್ಲಿ ದೊಡ್ಡದಾದ ಹೊಸ ಕೋವಿಡ್ ಅಲೆ ಬರುವ ಸಾಧ್ಯತೆಯಿಲ್ಲ- ತಜ್ಞರ ಹೇಳಿಕೆ

ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ,  ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.

Covid-19_Casual_Images1

ನವದೆಹಲಿ: ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ,  ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.

ದೀಪಾವಳಿ ಹಬ್ಬ ಮುಂದಿರುವಂತೆ ಪ್ರಕರಣಗಳ ಸಂಖ್ಯೆ ಹೆಚ್ಚಳದ ಮುನ್ನೆಚ್ಚರಿಕೆಯೊಂದಿಗೆ ಭರವಸೆ ನೀಡಿರುವ ತಜ್ಞರು, ಕೋವಿಡ್ ಗ್ರಾಫ್ ಇಳಿಕೆ ಕೇವಲ ಚಿತ್ರದ ಭಾಗವಾಗಿದೆ. ಮರಣ ಪ್ರಮಾಣದಂತಹ ಅಂಶಗಳನ್ನು ನೋಡಿದರೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡುವಿಕೆಯ ಅಗತ್ಯವಿದೆ. ಉದಾಹರಣೆಗೆ ಇಂಗ್ಲೆಂಡ್ ನಂತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


 

ದೇಶದಲ್ಲಿ 100 ಕೋಟಿ ಗೂ ಅಧಿಕ ಡೋಸ್  ಕೋವಿಡ್ ಲಸಿಕೆ ನೀಡಿಕೆ ಸಾಧನೆ ನಂತರ ಹೇಳಿಕೆ ನೀಡಿರುವ ವೈರಾಣು ಶಾಸ್ತ್ರಜ್ಞ ಶಾಹೀದ್ ಜಮೀಲ್, ಲಸಿಕೆ ಪ್ರಮಾಣದಲ್ಲಿ ಗಮನಾರ್ಹ ರೀತಿಯಲ್ಲಿ ಪ್ರಗತಿಯಾಗಿದೆ ಆದರೆ, ಇದು ಮತ್ತಷ್ಟು ಹೆಚ್ಚಾಗಬೇಕಾದ ಅಗತ್ಯಿವಿದೆ ಎಂದಿದ್ದಾರೆ.

ಇನ್ನೂ ಸಾಂಕ್ರಾಮಿಕ ಅಂತ್ಯಗೊಂಡ ಹಂತದಲ್ಲಿರುವುದಾಗಿ ನಾನು ಖಚಿತಪಡಿಸುವುದಿಲ್ಲ, 100 ಕೋಟಿ ಡೋಸ್ ಲಸಿಕೆ ನೀಡಿಕೆಯಲ್ಲಿ ಸಾಧನೆಗಾಗಿ ಸಂಭ್ರಮಿಸುತ್ತಿದ್ದು,ಇನ್ನೂ ಕೆಲವು ದೂರ ತಲುಪಬೇಕಾಗಿದೆ. ಸಾಂಕ್ರಾಮಿಕ ಅಂತ್ಯದತ್ತ ಸಾಗುತ್ತಿದ್ದೇವೆ. ಆದರೆ, ಇನ್ನೂ ನಿಯಂತ್ರಣವಾಗಿಲ್ಲ ಎಂದು ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅತಿಥಿ ಪ್ರೊಫೆಸರ್ ಜಮೀಲ್ ಹೇಳಿದ್ದಾರೆ.

ದೇಶದ ಕೆಲವು ಭಾಗಗಳಲ್ಲಿ ಸಾಂಕ್ರಾಮಿಕ ಅಂತ್ಯದ ಸನ್ನಿಹದಲ್ಲಿರುವ  ಸಾಧ್ಯತೆಯಿದೆ, ಆದರೆ ಇದನ್ನು ದೃಢೀಕರಿಸಲು ಅಗತ್ಯವಾದ ದತ್ತಾಂಶಗಳು ಸುಲಭವಾಗಿ ಲಭ್ಯವಿಲ್ಲ ಎಂದು ಭಾರತದ ಕೋವಿಡ್ ಗ್ರಾಫ್ ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಯುಕೆಯ  ಮಿಡ್ಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತದ ಹಿರಿಯ ಉಪನ್ಯಾಸಕ ಮುರಾದ್ ಬಣಜಿ ಹೇಳುತ್ತಾರೆ.  

ಉದಾಹರಣೆಗೆ ಲಸಿಕೆ ಪಡೆದ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಅಥವಾ ಅದಕ್ಕೂ ಮುಂಚಿನ ಸೋಂಕು  ಸೇರಿದಂತೆ ಹಲವಾರು ಅಂಶಗಳು ತಮಗೆ ತಿಳಿದಿಲ್ಲ, ಕೋವಿಡ್ -19 ಯಾವಾಗ ನಿರ್ಮೂಲನೆಯಾಗುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಇನ್ನೂ ಅದು ಹರಡದಂತೆ ಮುಂಜಾಗ್ರತೆ ವಹಿಸಬೇಕಾದ ಅಗತ್ಯವಿದೆ ಎಂದು ಬಜಣಿ ತಿಳಿಸಿದ್ದಾರೆ. 

“ಕೋವಿಡ್ -19 ದೇಶಕ್ಕೆ ಭವಿಷ್ಯದಲ್ಲಿ ಮಹತ್ವದ ಬೆದರಿಕೆಯನ್ನುಂಟುಮಾಡುತ್ತದೆಯೇ? ಎಂಬುದನ್ನು ನಿರ್ಧರಿಸಲು ನಾವು ಇನ್ನೂ ಎರಡು ತಿಂಗಳು ಕಾಯಬೇಕು ಎಂದು ನಾನು ನಂಬುತ್ತೇನೆ  ಎಂದು ವಾಷಿಂಗ್ಟನ್‌ನ ಸೆಂಟರ್ ಫಾರ್ ಡಿಸೀಸ್ ಡೈನಾಮಿಕ್ಸ್, ಎಕನಾಮಿಕ್ಸ್  ಅಂಡ್ ಪಾಲಿಸಿಯ ನಿರ್ದೇಶಕ ಲಕ್ಷ್ಮಿನಾರಾಯಣ ಅವರು ಪಿಟಿಐ ಸುದ್ದಿಸಂಸ್ಥೆಗೆ ಇಮೇಲ್ ಸಂದರ್ಶನದಲ್ಲಿ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *