ಮಾದ್ಲಮನೆ ಸಾಯಿ ದೇವಾಲಯಕ್ಕೆ ಬಡಿದ ಸಿಡಿಲು,ಹಾನಿ

ಸಿದ್ಧಾಪುರ ಕಲಕೈ ಗ್ರಾಮದ ಮಾದ್ಲ ಮನೆ ಮಜರೆಯ ಶ್ರೀ ಸಾಯಿಮಂದಿರ ದೇವಸ್ಥಾನಕ್ಕೆ ಸಿಡಿಲು ಬಡಿದು, ದೇವಸ್ಥಾನದ ಮೈಕ್ ಸೆಟ್, ದೇವಸ್ಥಾನದ ವಿದ್ಯುತ್ ಸಂಪರ್ಕ& ಪಾತ್ರೆಗಳು ಹಾಳಾಗಿವೆ. ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು . ಇದರಿಂದ ಅಂದಾಜು ಹಾನಿ 1,50,000 ರೂ ಆಗಿದೆ. ಈ ಘಟನೆಯಿಂದ ಯಾವುದೇ ಜೀವ ಹಾನಿ ಸಂಭವಿಸಿರುವುದಿಲ್ಲ. ಈ ಘಟನೆ 21/10/2021ರಂದು(ಗುರುವಾರ) ಸಂಜೆ 4-45ರ ಹೊತ್ತಿಗೆ ಸಂಭವಿಸಿದೆ.

ದೇಶದಲ್ಲಿ ದೊಡ್ಡದಾದ ಹೊಸ ಕೋವಿಡ್ ಅಲೆ ಬರುವ ಸಾಧ್ಯತೆಯಿಲ್ಲ- ತಜ್ಞರ ಹೇಳಿಕೆ

ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ,  ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.

Covid-19_Casual_Images1

ನವದೆಹಲಿ: ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ,  ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.

ದೀಪಾವಳಿ ಹಬ್ಬ ಮುಂದಿರುವಂತೆ ಪ್ರಕರಣಗಳ ಸಂಖ್ಯೆ ಹೆಚ್ಚಳದ ಮುನ್ನೆಚ್ಚರಿಕೆಯೊಂದಿಗೆ ಭರವಸೆ ನೀಡಿರುವ ತಜ್ಞರು, ಕೋವಿಡ್ ಗ್ರಾಫ್ ಇಳಿಕೆ ಕೇವಲ ಚಿತ್ರದ ಭಾಗವಾಗಿದೆ. ಮರಣ ಪ್ರಮಾಣದಂತಹ ಅಂಶಗಳನ್ನು ನೋಡಿದರೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡುವಿಕೆಯ ಅಗತ್ಯವಿದೆ. ಉದಾಹರಣೆಗೆ ಇಂಗ್ಲೆಂಡ್ ನಂತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


 

ದೇಶದಲ್ಲಿ 100 ಕೋಟಿ ಗೂ ಅಧಿಕ ಡೋಸ್  ಕೋವಿಡ್ ಲಸಿಕೆ ನೀಡಿಕೆ ಸಾಧನೆ ನಂತರ ಹೇಳಿಕೆ ನೀಡಿರುವ ವೈರಾಣು ಶಾಸ್ತ್ರಜ್ಞ ಶಾಹೀದ್ ಜಮೀಲ್, ಲಸಿಕೆ ಪ್ರಮಾಣದಲ್ಲಿ ಗಮನಾರ್ಹ ರೀತಿಯಲ್ಲಿ ಪ್ರಗತಿಯಾಗಿದೆ ಆದರೆ, ಇದು ಮತ್ತಷ್ಟು ಹೆಚ್ಚಾಗಬೇಕಾದ ಅಗತ್ಯಿವಿದೆ ಎಂದಿದ್ದಾರೆ.

ಇನ್ನೂ ಸಾಂಕ್ರಾಮಿಕ ಅಂತ್ಯಗೊಂಡ ಹಂತದಲ್ಲಿರುವುದಾಗಿ ನಾನು ಖಚಿತಪಡಿಸುವುದಿಲ್ಲ, 100 ಕೋಟಿ ಡೋಸ್ ಲಸಿಕೆ ನೀಡಿಕೆಯಲ್ಲಿ ಸಾಧನೆಗಾಗಿ ಸಂಭ್ರಮಿಸುತ್ತಿದ್ದು,ಇನ್ನೂ ಕೆಲವು ದೂರ ತಲುಪಬೇಕಾಗಿದೆ. ಸಾಂಕ್ರಾಮಿಕ ಅಂತ್ಯದತ್ತ ಸಾಗುತ್ತಿದ್ದೇವೆ. ಆದರೆ, ಇನ್ನೂ ನಿಯಂತ್ರಣವಾಗಿಲ್ಲ ಎಂದು ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಅತಿಥಿ ಪ್ರೊಫೆಸರ್ ಜಮೀಲ್ ಹೇಳಿದ್ದಾರೆ.

ದೇಶದ ಕೆಲವು ಭಾಗಗಳಲ್ಲಿ ಸಾಂಕ್ರಾಮಿಕ ಅಂತ್ಯದ ಸನ್ನಿಹದಲ್ಲಿರುವ  ಸಾಧ್ಯತೆಯಿದೆ, ಆದರೆ ಇದನ್ನು ದೃಢೀಕರಿಸಲು ಅಗತ್ಯವಾದ ದತ್ತಾಂಶಗಳು ಸುಲಭವಾಗಿ ಲಭ್ಯವಿಲ್ಲ ಎಂದು ಭಾರತದ ಕೋವಿಡ್ ಗ್ರಾಫ್ ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಯುಕೆಯ  ಮಿಡ್ಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತದ ಹಿರಿಯ ಉಪನ್ಯಾಸಕ ಮುರಾದ್ ಬಣಜಿ ಹೇಳುತ್ತಾರೆ.  

ಉದಾಹರಣೆಗೆ ಲಸಿಕೆ ಪಡೆದ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಅಥವಾ ಅದಕ್ಕೂ ಮುಂಚಿನ ಸೋಂಕು  ಸೇರಿದಂತೆ ಹಲವಾರು ಅಂಶಗಳು ತಮಗೆ ತಿಳಿದಿಲ್ಲ, ಕೋವಿಡ್ -19 ಯಾವಾಗ ನಿರ್ಮೂಲನೆಯಾಗುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಇನ್ನೂ ಅದು ಹರಡದಂತೆ ಮುಂಜಾಗ್ರತೆ ವಹಿಸಬೇಕಾದ ಅಗತ್ಯವಿದೆ ಎಂದು ಬಜಣಿ ತಿಳಿಸಿದ್ದಾರೆ. 

“ಕೋವಿಡ್ -19 ದೇಶಕ್ಕೆ ಭವಿಷ್ಯದಲ್ಲಿ ಮಹತ್ವದ ಬೆದರಿಕೆಯನ್ನುಂಟುಮಾಡುತ್ತದೆಯೇ? ಎಂಬುದನ್ನು ನಿರ್ಧರಿಸಲು ನಾವು ಇನ್ನೂ ಎರಡು ತಿಂಗಳು ಕಾಯಬೇಕು ಎಂದು ನಾನು ನಂಬುತ್ತೇನೆ  ಎಂದು ವಾಷಿಂಗ್ಟನ್‌ನ ಸೆಂಟರ್ ಫಾರ್ ಡಿಸೀಸ್ ಡೈನಾಮಿಕ್ಸ್, ಎಕನಾಮಿಕ್ಸ್  ಅಂಡ್ ಪಾಲಿಸಿಯ ನಿರ್ದೇಶಕ ಲಕ್ಷ್ಮಿನಾರಾಯಣ ಅವರು ಪಿಟಿಐ ಸುದ್ದಿಸಂಸ್ಥೆಗೆ ಇಮೇಲ್ ಸಂದರ್ಶನದಲ್ಲಿ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *