ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್

ಡೆಲ್ಟಾಗಿಂತಲೂ ವೇಗವಾಗಿ ಹರಡುವ ಕೊರೋನಾದ ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್

ಸಾರ್ಸ್ ಸಿಒವಿ2 ನ ಡೆಲ್ಟಾ ರೂಪಾಂತರಿಯಲ್ಲಿ ಹೊಸ ತಳಿ ಬ್ರಿಟನ್ ಹಾಗೂ ಅಮೆರಿಕದಲ್ಲಿ ಪತ್ತೆಯಾಗಿದ್ದು, ಭಾರತದ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್ ನಲ್ಲಿದೆ. 

For representational purpose. (File Photo | EPS)

ಸಾಹಿತ್ಯ & ಸಾಂಸ್ಕೃತಿಕ ಅಭಿವೃದ್ಧಿ ಮಹತ್ವ

ಸಿದ್ದಾಪುರ : ಸೌಲಭ್ಯಗಳ ಅಭಿವೃದ್ಧಿಯಾದರೆ ಮಾತ್ರ ಸಮಾಜ ಅಭಿವೃದ್ಧಿಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಸಮಾಜದ ಬೆಳವಣಿಗೆಯಲ್ಲಿ ಸಾಂಸ್ಕೃ ತಿಕ ಹಾಗೂ ಸಾಹಿತ್ಯಿಕ ಸಮೃದ್ಧಿಯ ಅಂಶಗಳೂ ಪ್ರಮುಖವಾಗುತ್ತದೆ ಎಂದು ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯ ಪಟ್ಟರು.
ಶಿವಮೊಗ್ಗದ ನಾಟ್ಯಶ್ರೀ ಕಲಾ ತಂಡವು, ಬೆಂಗಳೂರಿನ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ, ಸ್ಥಳೀಯ ಸಂಸ್ಕೃತಿ ಸಂಪದದ ಸಹಯೋಗದಲ್ಲಿ ಪಟ್ಟಣದ ಶಂಕರ ಮಠದಲ್ಲಿ ಬುಧವಾರ ಏರ್ಪಡಿಸಿದ್ದ ‘ನಾಟ್ಯಶ್ರೀ ಯಕ್ಷ ಹೃದಯಾಂತರಂಗ-2021’ ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಾಂಸ್ಕೃತಿಕವಾಗಿಯೂ ನಾಡನ್ನು ಬೆಳೆಸುವ ಪ್ರಯತ್ನ ನಡೆಯಬೇಕು. ನಮ್ಮ ಸುಸಂಸ್ಕೃತವಾದ ಸಂಸ್ಕಾರ ಬೆಳೆಸುವಲ್ಲಿ ಯಕ್ಷಗಾನದ ಕೊಡುಗೆ ದೊಡ್ಡದುʼ ಎಂದರು.
ಯಲ್ಲಾಪುರದ ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ‘ ಯಕ್ಷಗಾನದ ಸಂಘಟಕರ ಬಗ್ಗೆ ಕೂಡ ವಿಚಾರ ಸಂಕಿರಣಗಳು ನಡೆಯಬೇಕು. ಸಂಘಟಕ ಇಲ್ಲದಿದ್ದರೆ ಕಲೆ, ಕಲಾವಿದ ಇರಲು ಸಾಧ್ಯವಿಲ್ಲʼ ಎಂದರು.
ಶಂಕರ ಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಅಧ್ಯಕ್ಷತೆ ವಹಿಸಿದ್ದರು. ಆದಿಚುಂಚನಗಿರಿಯ ಮಿರ್ಜಾನ ಶಾಖಾ ಮಠದ ನಿಶ್ಚಲಾನಂದ ಸ್ವಾಮೀಜಿ,ವೈದ್ಯ ಡಾ. ಎಂ.ಕೆ.ಭಟ್ಟ ಸೊರಬ ಮೊದಲಾದವರು ಇದ್ದರು.


ಪ್ರಶಸ್ತಿ ಪ್ರದಾನ : ಶ್ರೀಪಾದ ಜೋಷಿ ಬಾಡಲಕೊಪ್ಪ(ಹೊಸ್ತೋಟ ಮಂಜುನಾಥ ಭಾಗವತರ ಸ್ಮರಣೆಯಲ್ಲಿ ಯಕ್ಷ ಬಸವ ಪ್ರಶಸ್ತಿ), ಮಂಜುನಾಥ ಗೌಡ ಹಕ್ಕಲಕೇರಿ(ಎಂ.ಎ.ಹೆಗಡೆ ಸ್ಮರಣೆಯಲ್ಲಿ ಯಕ್ಷ ಭೈರವ ಪ್ರಶಸ್ತಿ), ವಿದ್ವಾನ್ ಗಣಪತಿ ಭಟ್ ಮಟ್ಟೆಗದ್ದೆ( ಮಹಾಬಲೇಶ್ವರ ಭಟ್ಟ ದಾಸನಹುಡಿಲು ಸ್ಮರಣೆಯಲ್ಲಿ ವಿದ್ವತ್ ಸನ್ಮಾನ), ವಿದ್ವಾನ್ ಸೂರ್ಯನಾರಾಯಣ ಶಾಸ್ತ್ರಿ ನೆಲೆಮಾವು(ಗುರುವಂದನೆ), ಎಂ.ಚಂದ್ರಶೇಖರ ಹೆಬ್ಬಾರ(ಮಿತ್ರ ಕೃತಜ್ಞತೆ) ಅವರನ್ನು ಸನ್ಮಾನಿಸಲಾಯಿತು. ಗಣಪತಿ ಭಟ್ಟ ಮಟ್ಟೆಗದ್ದೆ ಅನಿಸಿಕೆ ವ್ಯಕ್ತಪಡಿಸಿದರು.
ನಾಟ್ಯಶ್ರೀ ಕಲಾತಂಡದ ಸಂಚಾಲಕ ವಿದ್ವಾನ್ ದತ್ತಮೂರ್ತಿ ಭಟ್ಟ ಸ್ವಾಗತಿಸಿದರು. ಎಂ.ಕೆ.ನಾಯ್ಕ ನಿರೂಪಿಸಿದರು.

ಸಂಸ್ಕೃತಿ ಪ್ರತಿಪಾದನೆ-


ಸಿದ್ದಾಪುರ : ನಮಗೆ ನಮ್ಮ ಸಂಸ್ಕೃ ತಿಯೇ ಆಶ್ರಯ ನೀಡುತ್ತದೆ. ನಮಗೆ ಪಾಶ್ಚಾತ್ಯ ಸಂಸ್ಕೃತಿಯ ಅರಿವು ನಮಗೆ ಸಾಕು. ಅದನ್ನೇ ಅನುಸರಿಸಬೇಕಾಗಿಲ್ಲ ಎಂದು ಶಿವಮೊಗ್ಗ ಬಸವಕೇಂದ್ರದ ಡಾ.ಬಸವಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಶಿವಮೊಗ್ಗದ ನಾಟ್ಯಶ್ರೀ ಕಲಾ ತಂಡದ ಆಶ್ರಯದಲ್ಲಿ, ಬೆಂಗಳೂರಿನ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ಸಂಸ್ಕೃತಿ ಸಂಪದದ ಸಹಯೋಗದಲ್ಲಿ, ದೀವಗಿಯ ರಾಮಾನಂದ ಅವಧೂತರು, ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತ ಹಾಗೂ ವಿದ್ವಾಂಸ ಎಂ.ಎ.ಹೆಗಡೆ ದಂಟ್ಕಲ್ ಅವರ ಸ್ಮರಣೆಯಲ್ಲಿ, ಪಟ್ಟಣದ ಶಂಕರ ಮಠದಲ್ಲಿ ಏರ್ಪಡಿಸಿರುವ ‘ನಾಟ್ಯಶ್ರೀ ಯಕ್ಷ ಹೃದಯಾಂತರಂಗ-2021ʼ ಕಾರ್ಯಕ್ರಮವನ್ನುಮಂಗಳವಾರ ಉದ್ಘಾಟಿಸಿ ಅವರುಮಾತನಾಡಿದರು.
ಮೈಲಾರ ಕ್ಷೇತ್ರದ ಧರ್ಮಕರ್ತ ಗುರೂಜಿ ವೆಂಕಪ್ಪಯ್ಯ ಒಡೆಯರ್ ಸ್ವಾಮೀಜಿ ಮಾತನಾಡಿ, ಎಲ್ಲ ಗಾನಗಳಲ್ಲಿ ಯಕ್ಷಗಾನವೇ ಶ್ರೇಷ್ಟವಾದುದು ಎಂದರು.
ಯಲ್ಲಾಪುರದ ಸಂಕಲ್ಪ ಸಂಸ್ಥೆಯ ಮುಖ್ಯಸ್ಥರಾದ ಪ್ರಮೋದ ಹೆಗಡೆ, ಯಕ್ಷಗಾನ ಇಂದಿನ ಯುವಜನರಿಗೆ ಇಷ್ಟವಾಗುತ್ತಿದೆ. ನಗರ ಸೇರಿರುವ ಯುವಕರು ಈಗಿನ ಪರಿಸ್ಥಿತಿಯಲ್ಲಿ ಹಳ್ಳಿಗಳಿಗೆ ಬಂದು, ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರ ಯಕ್ಷಗಾನದ ಪ್ರೀತಿ ಇಲ್ಲಿ ಪ್ರಕಟವಾಗುತ್ತಿದ್ದು, ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನಗಳಿಗೆ ಬರುತ್ತಿದ್ದಾರೆ. ಇದು ಬದಲಾಗಿರುವ ಮುಂದಿನ ಪೀಳಿಗೆ ಕೂಡ ಯಕ್ಷಗಾನವನ್ನು ಬಿಡುವುದಿಲ್ಲ ಎಂಬುದನ್ನು ತೋರಿಸುತ್ತದೆ ಎಂದರು.
ತಾಲ್ಲೂಕು ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆ ವಹಿಸಿದ್ದರು.ಆಶಾಕಿರಣ ಟ್ರಸ್ಟ್ ಅಧ್ಯಕ್ಷ ಡಾ.ರವಿ ಹೆಗಡೆ ಹೂವಿನಮನೆ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಡಾ. ಎಂ.ಪ್ರಭಾಕರ ಜೋಷಿ, ಶಂಕರ ಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿದರು. ʼಕೋವಿದʼಪುಸ್ತಕಬಿಡುಗಡೆಗೊಳಿಸಲಾಯಿತು.
ಕೇಶವ ಹೆಗಡೆ ಕೊಳಗಿ ಸಂಗಡಿಗರು ಪ್ರಾರ್ಥನಾಗೀತೆ ಹಾಡಿದರು. ನಾಟ್ಯಶ್ರೀ ಕಲಾ ತಂಡದ ಸಂಚಾಲಕ ವಿದ್ವಾನ್ ದತ್ತಮೂರ್ತಿ ಭಟ್ಟ ಸ್ವಾಗತಿಸಿದರು. ಗಣಪತಿ ಹೆಗಡೆ ಗುಂಜಗೋಡು ನಿರೂಪಿಸಿದರು.

ನವದೆಹಲಿ: ಸಾರ್ಸ್ ಸಿಒವಿ2 ನ ಡೆಲ್ಟಾ ರೂಪಾಂತರಿಯಲ್ಲಿ ಹೊಸ ತಳಿ ಬ್ರಿಟನ್ ಹಾಗೂ ಅಮೆರಿಕದಲ್ಲಿ ಪತ್ತೆಯಾಗಿದ್ದು, ಭಾರತದ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್ ನಲ್ಲಿದೆ. 

ಹೊಸ ರೂಪಾಂತರಿ ವೈರಾಣು ಡೆಲ್ಟಾ ರೂಪಾಂತರಿಗಿಂತಲೂ ವೇಗವಾಗಿ ಹರಡಬಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

https://imasdk.googleapis.com/js/core/bridge3.485.1_en.html#goog_757264284

ಹೊಸ ರೂಪಾಂತರಿಯನ್ನು ಎ.ವೈ 4.2 ಎಂದು ಗುರುತಿಸಲಾಗಿದ್ದು, ಬ್ರಿಟನ್ ನಲ್ಲಿ ಈ ಹೊಸ ತಳಿಯನ್ನು “ವೇರಿಯೆಂಟ್ ಅಂಡರ್ ಇನ್ವೆಸ್ಟಿಗೇಷನ್” ಎಂದು ಘೋಷಿಸಲಾಗಿದೆ. ಈ ವರೆಗೂ ಭಾರತದಲ್ಲಿ ಈ ರೂಪಾಂತರಿ ತಳಿಯ ಸೋಂಕು ಪತ್ತೆಯಾಗಿಲ್ಲ. 68,000 ಸ್ಯಾಂಪಲ್ ಗಳನ್ನು ಕೋವಿಡ್-19 ಸೋಂಕಿತರಿಂದ ಸಂಗ್ರಹಿಸಲಾಗಿದ್ದು, ಜಿನೋಮ್ ಸೀಕ್ವೆನ್ಸಿಂಗ್ ಗೆ ಒಳಪಟ್ಟಿದೆ.

ಎವೈ.4.2 ತಳಿ ಪತ್ತೆಯಾಗಿರುವುದರಿಂದ ಭಾರತದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಹೆಚ್ಚು ಮಾದರಿಗಳನ್ನು ಸಂಗ್ರಹಿಸಲಾಗುವುದು ಈ ಮೂಲಕ ಎವೈ 4.2 ನಿಂದ ಬರುವ ಸೋಂಕುಗಳ ಪತ್ತೆ ಸಾಧ್ಯತೆಯನ್ನು ತಪ್ಪಿಸುವುದಿಲ್ಲ ಇದರಿಂದ ಸೋಂಕಿತರಾದವರನ್ನು ತ್ವರಿತವಾಗಿ ಗುರುತಿಸಲಾಗುತ್ತದೆ ಎಂದು  ಐಎನ್ ಎಸ್ಎ ಸಿಒಜಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ ವಾರ ಬ್ರಿಟನ್ ಆರೋಗ್ಯ ಭದ್ರತಾ ಏಜೆನ್ಸಿ ಡೆಲ್ಟಾ ರೂಪಾಂತರಿಯ ಸಬ್ ಟೈಪ್ ಕೊರೋನಾ ವೈರಾಣು ದೇಶದಲ್ಲಿ ಹರಡುತ್ತಿರುವುದನ್ನು ಘೋಷಿಸಿತ್ತು. ಅಮೆರಿಕಾದ ಬಳಿಕ ಬ್ರಿಟನ್ ಜಾಗತಿಕವಾಗಿ ಅತಿ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳನ್ನು ವರದಿ ಮಾಡುತ್ತಿರುವ ರಾಷ್ಟ್ರವಾಗಿದೆ. ಸೆ.27 ರಂದು ಪ್ರಾರಂಭವಾದ ವಾರದಲ್ಲಿ ಸಾರ್ಸ್ ಸಿಒವಿ2 ನ ಎಲ್ಲಾ ಜೆನೆಟಿಕ್ ಸೀಕ್ವೆನ್ಸ್ ಗಳ ಪೈಕಿ ಹೊಸದಾಗಿ ಪತ್ತೆಯಾಗಿರುವ ವೈರಾಣು ತಳಿ ಶೇ.6 ರಷ್ಟು ಇದೆ.

ಹೊಸ ರೂಪಾಂತರಿ ತಳಿ ಏರುಗತಿಯಲ್ಲಿದ್ದು ಡೆಲ್ಟಾ ರೂಪಾಂತರಿಗಿಂತಲೂ ಶೇ.10 ರಷ್ಟು ವೇಗವಾಗಿ ಇದು ಹರಡಬಲ್ಲದು ಎನ್ನಲಾಗುತ್ತಿದ್ದು ಅಮೆರಿಕದಲ್ಲೂ ಈ ತಳಿಯ ಸೋಂಕು ವರದಿಯಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *