ಉಪ ಚುನಾವಣೆ ಫಲಿತಾಂಶ: ಹಾನಗಲ್ ಕ್ಷೇತ್ರದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ತವರು ಜಿಲ್ಲೆಯಲ್ಲಿ ಸಿಎಂಗೆ ಮುಖಭಂಗ! ಸಿಂದಗಿಯಲ್ಲಿ ಬಿಜೆಪಿಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

Srinivas_mane1

ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7,373  ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ. 

ಶ್ರೀನಿವಾಸ ಮಾನೆ 87, 490 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ  80, 117  ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 927 ಮತಗಳನ್ನು ಪಡೆದಿದ್ದಾರೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು, ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾರೀ ಪ್ರಚಾರ ನಡೆಸಿದ್ದರು.

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಪ್ರತಿ ಸುತ್ತಿನಲ್ಲಿಯೂ ಭೂಸನೂರ ತಮ್ಮ ನಿಕಟಸ್ಪರ್ಧಿ ಕಾಂಗ್ರೆಸ್ ನ ಅಶೋಕ್ ಮನಗುಳಿಯವರಿಗಿಂತ 2,500 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ವಿಜಯಪುರದ ವಡೆಯರ್ ಭವನ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. 

ಬಿಜೆಪಿ 93,380 ಮತಗಳನ್ನು ಪಡೆದುಕೊಂಡಿದೆ, ಕಾಂಗ್ರೆಸ್ 62,292 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜೆಡಿಎಸ್ (ಎಸ್) ಕೇವಲ 4,321 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ, ಅಲ್ಲಿ ಅದು ಠೇವಣಿ ಕಳೆದುಕೊಂಡಿತು. ಇದೇ ವೇಳೆ 1,029 ಮಂದಿ ನೋಟಾಕ್ಕೆ ಮತ ನೀಡಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.69.47ರಷ್ಟು ಮತದಾನವಾಗಿದೆ.

ರಮೇಶ ಭೂಸನೂರ ಸಿಂದಗಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾದ ಮೊದಲ ರಾಜಕಾರಣಿಯಾಗಿದ್ದಾರೆ. 

ಈ ಸಂದರ್ಭದಲ್ಲಿ ಜೊತೆ ಮಾತನಾಡಿದ ರಮೇಶ ಭೂಸನೂರ, “ನಾನು 25,000 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ಹೊಂದಿದ್ದೆ ಆದರೆ ಜನರು ನನ್ನನ್ನು 31,088 ಮತಗಳ ಮುನ್ನಡೆಯೊಂದಿಗೆ ಆಯ್ಕೆ ಮಾಡಿದ್ದಾರೆ. ನನ್ನ ಮತ್ತು ನನ್ನ ಪಕ್ಷದ ಮೇಲೆ ವಿಶ್ವಾಸ ತುಂಬಿದ ಮತದಾರರಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗಾಗಿ ಸಚಿವರಾದ ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಗೋವಿಂದ್ ಕಾರಜೋಳ ಸೇರಿದಂತೆ ಹಿರಿಯ ನಾಯಕರು ಮೂರು ವಾರಗಳ ಕಾಲ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸಿದರು ಎಂದು ಹೇಳಿದರು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *