ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!

ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ.

  • ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ.
  • ದೀಪಾವಳಿಯ ಈ ಕಾಯಿ ಒಡೆಯುವ ಆಟದಿಂದಾಗಿ ತೆಂಗಿನಕಾಯಿಗಳಿಗೆ ಹೆಚ್ಚಿನ ಬೆಲೆ ಬರುವುದೂ ಉಂಟು.
  • ದೇವರಿಗೆ ಹತ್ತು ಕಾಯಿ- ಆಟಕ್ಕೆ ಹತ್ತು ಕಾಯಿ ಎಂದು ಬೂರೇ ಕಾಯಿ ಸಂಗ್ರಹಿಸುವುದೂ ಇಲ್ಲಿಯ ರೂಢಿ.

ಮಲೆನಾಡಿನ ಜನಜೀವನ,ಜಾನಪದ ಸಂಪ್ರದಾಯ ಆಚರಣೆಗಳೇ ಭಿನ್ನ. ಬೆಳಕಿನ ಹಬ್ಬ ಎಂದು ಆಚರಿಸುವ ದೀಪಾವಳಿಯಲ್ಲಿ ದೇವರಿಗೆ ತೆಂಗಿನಕಾಯಿ ಒಡೆದು ದೇವರನ್ನು ತೃಪ್ತಿ ಪಡಿಸುವುದು ಒಂದು ಸಾಂಪ್ರದಾಯಿಕ ರೂಢಿ.ಇಂಥ ದೇವರಿಗೆ ಒಡೆಯುವ ತೆಂಗಿನ ಕಾಯಿಗಳನ್ನು ಒಡೆಯುವ ಕಾಯಿ ಹೊಡೆಯುವ ಆಟವೊಂದು ಮಲೆನಾಡಿನಲ್ಲಿ ದೀಪಾವಳಿ ವಿಶೇಶ.
ಸುಲಿದ ತೆಂಗಿನ ಕಾಯಿಯನ್ನು ಬಿಗಿಯಾಗಿ ಹಿಡಿದು ಇದೇ ರೀತಿ ಕಾಯಿ ಹಿಡಿದ ಇನ್ನೊಂದು ವ್ಯಕ್ತಿಯ ಕಾಯಿಗೆ ಕಾಯಿಂದ ಹೊಡೆಯುವ ಈ ಕಾಯಿ ಒಡೆಯುವ ಆಟ.ಮಲೆನಾಡಿನಲ್ಲಿ ಲಾಗಾಯ್ತಿನಿಂದಲೂ ಆಚರಣೆಯಲ್ಲಿದೆ. ಇಬ್ಬರು ವ್ಯಕ್ತಿಗಳು ಬಿಗಿಯಾಗಿ ಹಿಡಿದ ಕಾಯಿಗಳಿಂದ ಪರಸ್ಫರ ಹೊಡೆದುಕೊಳ್ಳುತ್ತಾರೆ. ಹೀಗೆ ಕೈಯಲ್ಲಿದ್ದ ಕಾಯಿಗೆ ಹೊಡೆಯುವ ವ್ಯಕ್ತಿಗಳು ತೆಂಗಿನಕಾಯಿಯನ್ನು ಅರ್ಧದಷ್ಟು ಗಟ್ಟಿಯಾಗಿ ಹಿಡಿದು ಒಬ್ಬರು ಇನ್ನೊಬ್ಬರ ಕೈಯಲ್ಲಿರುವ ಕಾಯಿಯನ್ನು ಗುರಿಮಾಡಿ ಹೊಡೆಯಬೇಕು.

ಹೀಗೆ ಕಾಯಿಯಿಂದಲೇ ಕಾಯಿಯನ್ನು ಹೊಡೆದು ಒಡೆದ ಕಾಯಿಯನ್ನು ಒಡೆಯದ ಕಾಯಿ ಹಿಡಿದ ವ್ಯಕ್ತಿಗೆ ಕೊಡಬೇಕು.

ಕಾಯಿ ಹೊಡೆಯುವ ನೈಪುಣ್ಯ ಇರುವವರು ಕೆಲವು ಕಾಯಿಗಳಿಂದ ನೂರಾರು ಕಾಯಿಗಳನ್ನು ಗೆಲ್ಲುತ್ತಾರೆ. ತನ್ನ ತೆಂಗಿನಕಾಯಿಯಿಂದ ಎದುರಾಳಿಯ ತೆಂಗಿನಕಾಯಿ ಒಡೆಯಲು ಪ್ರಯತ್ನಿಸುವ ಈ ಕಾಯಿ ಒಡೆಯುವ ಆಟದಲ್ಲಿ ಒಡೆಯುವ ಕಾಯಿ ಹಿಡಿದ ವ್ಯಕ್ತಿ ಒಡೆಯದ ಕಾಯಿ ಮಾಲಿಕನಿಗೆ ಒಡೆದ ಕಾಯಿಯನ್ನು ಕೊಡಬೇಕು. ತೆಂಗಿನ ಕಾಯಿ ಗಟ್ಟಿಯಾಗಿರುತ್ತೋ? ಕಾಯಿ ಒಡೆಯುವ ಸ್ಫರ್ಧಿ ಜಟ್ಟಿಯಾಗಿರುತ್ತಾನೋ ಎನ್ನುವುದು ಪ್ರಮುಖವಲ್ಲ ಆದರೆ ಎದುರಾಳಿಯ ತೆಂಗಿನ ಕಾಯಿ ಒಡೆಯುವವನಿಗೆ ಒಡೆದ ತೆಂಗಿನಕಾಯಯನ್ನು ಕೊಡಬೇಕು ಎನ್ನುವುದು ನಿಯಮ.


ದೀಪಾವಳಿಯಲ್ಲಿ ಸ್ಫರ್ಧೆ-ಮನೋರಂಜನೆಯಾಗಿ ರೂಢಿಗತವಾಗಿ ಆಡುವ ಈ ಕಾಯಿಹೊಡೆಯುವ ಆಟ ದೀಪಾವಳಿ ಕೆಲವು ದಿವಸ ಮಾತ್ರ ಆಡಲಾಗುತ್ತದೆ. ಹಗಲುರಾತ್ರಿ ಎನ್ನದೆ ಸಾಮೂಹಿಕವಾಗಿ ಕಾಯಿ ಒಡೆಯುವ ಆಟದ ದೀಪಾವಳಿಯ ಈ ಸ್ಫರ್ಧೆ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಸಾಂಪ್ರದಾಯಿಕ ಕ್ರೀಡೆ.
ಯುವಕರು ಗ್ರಾಮೀಣ ಪ್ರದೇಶ, ನಗರಗಳಲ್ಲಿ ಗುಂಪು ಕಟ್ಟಿಕೊಂಡು ಆಡುವ ಕಾಯಿ ಹೊಡೆಯುವ ಆಟವನ್ನು ನೋಡಲು ಕೂಡಾ ಜನ ಸೇರುತ್ತಾರೆ. ದೀಪಾವಳಿಯ ಆಸು-ಪಾಸು ಮುಸ್ಸಂಜೆಯ ಬಿಡುವಿನ ವೇಳೆಯಲ್ಲಿ ಹೆಚ್ಚಾಗಿ ಉಳಿದ ಸಮಯದಲ್ಲಿ ವಿರಳವಾಗಿ ಆಡುವ ಕಾಯಿ ಒಡೆಯುವ ಆಟ ಈಗ ಶಿರಸಿ-ಸಿದ್ಧಾಪುರಗಳಲ್ಲಿ ಈ ವಾರಪೂರ್ತಿ ಕಾಣಸಿಗಲಿದೆ.

ಮಲೆನಾಡಿನ ದೇವರ ಪ್ರೀತಿಯ ತೆಂಗಿನ ಕಾಯಿ ದೇವರಿಗೆ ಒಡೆಯಲು, ಖಾದ್ಯ ತಯಾರಿಸಲು, ಸ್ಫರ್ಧೆಯಲ್ಲಿ ಗೆಲ್ಲಲು ಎಲ್ಲದಕ್ಕೂ ಬಳಕೆ ಆಗುವುದರಿಂದ ತೆಂಗಿನ ಕಾಯಿಯ ಮೌಲ್ಯವರ್ಧನೆ ಕೂಡಾ ನಡೆಯುತ್ತದೆ. ದೀಪಾವಳಿಯ ಈ ಕಾಯಿ ಒಡೆಯುವ ಆಟ ಕೆಲವೇ ಪ್ರದೇಶ, ಪ್ರಾದೇಶಿಕತೆಗಳಿಗೆ ಸೀಮಿತವಾಗಿರುವುದೇ ಈ ಆಟದ ಅನನ್ಯತೆ.  ಕಾಯಿ ಒಡೆಯುವ ಆತುರದಲ್ಲಿ ತೆಂಗಿನ ಕಾಯಿಯ ಗರಟೆ ಕೈಗೆ ಪೆಟ್ಟು ಮಾಡಿದರೆ ಆ ಪೆಟ್ಟನ್ನೂ ಕ್ರೀಡಾಮನೋಭಾವದಿಂದಲೇ ಸ್ವೀಕರಿಸಬೇಕು. ಪುರುಷಪ್ರಧಾನ ವ್ಯವಸ್ಥೆಯ ದೀಪಾವಳಿ ಕ್ರೀಡೆಯಾದ ಕಾಯಿ ಒಡೆಯುವ ಆಟವನ್ನು ಸ್ತ್ರೀಯರು ಕೂಡಾ ಆಡುತ್ತಿರುವುದು ಇತ್ತೀಚಿನ ಟ್ರೆಂಡ್.   – ಕನ್ನೇಶ್ವರ ನಾಯ್ಕ, ಕೋಲಶಿರ್ಸಿ

https://www.youtube.com/watch?v=sUBcpZPV4Bo&t=163s

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *