ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

Thumbnail image

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ

ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ ನಟನನ್ನು ನೆನೆದಿದ್ದಾರೆ.

ಕಾರವಾರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನವಾಗಿ ವಾರ ಕಳೆಯುತ್ತಿದ್ದರೂ ಇನ್ನೂ ಕೂಡ ಅವರ ಅಭಿಮಾನಿಗಳಿಗೆ ಈ ಕಹಿ ಘಟನೆಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಕಾರವಾರದ ಪ್ರಾಧ್ಯಾಪಕರೊಬ್ಬರು ಪುನೀತ್ ಅವರ ಮಣ್ಣಿನ ಮೂರ್ತಿಯೊಂದನ್ನು ತಯಾರಿಸುವ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’

ತಾಲೂಕಿನ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ಪುನೀತ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ ನಟನನ್ನು ನೆನೆದಿದ್ದಾರೆ.

ಅಭಿನಂದನ್ ಅವರದ್ದು ಕಲಾವಿದರ ಕುಟುಂಬ. ಕಳೆದ ಹತ್ತು- ಹದಿನೈದು ವರ್ಷಗಳಿಂದ ಅಭಿನಂದನ್ ಅವರ ತಂದೆ ಕಾಜುಬಾಗದ ಸಾರ್ವಜನಿಕ ಗಣಪತಿಯನ್ನು ಮಾಡಿಕೊಡುತ್ತಿದ್ದು, ಅಭಿನಂದನ್ ಕೂಡ ತಂದೆಗೆ ಸಹಾಯ ಮಾಡುತ್ತಾರೆ. ವರ್ಷದ ಹಿಂದೆ ಮೃತಪಟ್ಟಿದ್ದ ಸುಶಾಂತ್ ಸಿಂಗ್ ರಜಪೂತ್ ಅವರ ಮಣ್ಣಿನ ಮೂರ್ತಿಯನ್ನೂ ಅಭಿನಂದನ್ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದರು. ಇದೀಗ ಅಪ್ಪು ಅವರ ಮಣ್ಣಿನ ಮೂರ್ತಿಯನ್ನು ಮೂರು ದಿನಗಳಲ್ಲಿ ನಿರ್ಮಿಸಿ, ಪುನೀತ್ ಅಭಿಮಾನಿಗಳ ಮನ ಗೆದ್ದಿದ್ದಾರೆ.‌

https://samajamukhi.net/2021/10/30/?fbclid=IwAR2pz_SQ8kCjqbZLAWX4ezf_p_2zxEruZU_mHDdIShRjmHXsEegyF5kMFaM

ಸಾಮಾಜಿಕ ಜಾಲತಾಣಗಳಲ್ಲಿ ಮೂರ್ತಿ ನಿರ್ಮಾಣದ ವಿಡಿಯೋ ಹಂಚಿಕೊಂಡಿರುವ ಅವರಿಗೆ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿದೆ. ಜೊತೆಗೆ ಈಗಾಗಲೇ ಚಿತ್ರದುರ್ಗ ಹಾಗೂ ಬೆಂಗಳೂರಿನಿಂದ ತಮಗೂ ಮೂರ್ತಿ ಸಿದ್ಧಪಡಿಸಿಕೊಡುವಂತೆ ಆರ್ಡರ್ ಕೂಡ ಬಂದಿದೆಯಂತೆ.

ಈ ಬಗ್ಗೆ ಮಾತನಾಡಿದ ಅಭಿನಂದನ್, ನಮ್ಮದು ಕೊಂಕಣಿ ಭಾಷಿಗರ ಕುಟುಂಬವಾದರೂ ನಾವು ಕನ್ನಡದ ಅಭಿಮಾನಿಗಳು. ಪುನೀತ್ ರಾಜಕುಮಾರರ ಬಗ್ಗೆ ಅವರು ಬದುಕಿದ್ದಾಗ ಕೇಳಿದ್ದಕ್ಕಿಂತ ಹೆಚ್ಚು ಅವರ ನಿಧನ‌ದ ನಂತರ ತಿಳಿಯಲ್ಪಟ್ಟೆವು. ಅವರ ಸಾಮಾಜಿಕ ಕಾರ್ಯಗಳಿಗೆ ಇಡೀ ಭಾರತವೇ ತಲೆಬಾಗಿದೆ. ಹೀಗಾಗಿ ಅಂಥ ಅಗಲಿದ ಮಹಾಚೇತನಕ್ಕೆ ನನ್ನ ಕೈಲಾದಷ್ಟು ಸೇವೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದೇನೆ ಎಂದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಹಿಳೆಯರಿಗೆ ಸಿಹಿ ಸುದ್ದಿ……

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ...

ಜೋಗದ ಸಿರಿಗೆ ಮುಸುಕಿದ ಮಂಜು!

ವಿಶ್ವ ಪ್ರಸಿದ್ಧ ಜೋಗ ಜಲಪಾತದ ಇತಿಹಾಸ ದೊಡ್ಡದು. ಜೋಗದ ನೀರಸಿರಿ ಬಳಸಿ ವಿದ್ಯುತ್‌ ಉತ್ಪಾದನೆ ಇದಕ್ಕಾಗಿ ಕಟ್ಟಿದ ಆಣೆಕಟ್ಟುಗಳು ಇವುಗಳಿಗೆ ಭಾರತದ ಸ್ವಾತಂತ್ರ್ಯ ಸಂಬ್ರಮದ...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *