

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ.


ಕೋಯಿಕ್ಕೋಡ್ : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ.
ಕೃಷ್ಣಮೂರ್ತಿ ಅವರು ಕರ್ನಾಟಕದ ಶೃಂಗೇರಿಯವರು. ನಕ್ಸಲ್ ವಲಯದಲ್ಲಿ ಅವರನ್ನು ‘ಬಿಜಿಕೆ’ ಎಂದೇ ಕರೆಯಲಾಗುತ್ತದೆ. ಸಿಪಿಐನ (ಮಾವೊವಾದಿ) ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಮತ್ತು ವಯನಾಡು ಗಡಿ ಪ್ರದೇಶದಲ್ಲಿ ಎಟಿಎಸ್ ನಡೆಸಿದ ಕಾರ್ಯಾಚರಣೆ ವೇಳೆ ಪಶ್ಚಿಮ ಘಟ್ಟವಲಯ ಸಮಿತಿ ಕಾರ್ಯದರ್ಶಿ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿದಳಂ ಕೇಡರ್ನ ಸಾವಿತ್ರಿಯನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದರೆ, ಸಾವಿತ್ರಿ ಚಿಕ್ಕಮಗಳೂರು ಜಿಲ್ಲೆ ಕಳಸಮೂಲದವಳು.
ಕೃಷ್ಣಮೂರ್ತಿ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದವನು. ಶಿವಮೊಗ್ಗದಲ್ಲಿ ನ್ಯಾಯಾಂಗ ಪದವಿ ಪಡೆದಿದ್ದ ಈತ, ಅಲ್ಲಿಯೇ ಸಾಕಷ್ಟುಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಪಶ್ಚಿಮ ಘಟ್ಟ ಉಳಿಸಿ ಹೋರಾಟ, ಕುದುರೆಮುಖ ಉಳಿಸಿ ಮೊದಲಾದ ಹೋರಾಟಗಳ ಮೂಲಕ ಪ್ರವರ್ಧಮಾನಕ್ಕೆ ಬಂದು ಬಳಿಕ ಇದ್ದಕ್ಕಿದ್ದಂತೆ ನಕ್ಸಲ್ ವಲಯದಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಕರ್ನಾಟಕದಲ್ಲಿ ನಕ್ಸಲ್ ಚಳವಳಿಯನ್ನು ಕಾಯ್ದಿಡುವಲ್ಲಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.
ಹೊಸಗದ್ದೆ ಮೂಲದ ಪ್ರಭಾ ಎಂಬ ನಕ್ಸಲ್ ಕಾರ್ಯಕರ್ತೆಯನ್ನು ವಿವಾಹವಾಗಿದ್ದ ಈತ, ಕರ್ನಾಟಕ ಭಾಗದಲ್ಲಿ ನಕ್ಸಲ್ ಸಂಘಟನೆಗೆ ಹಿನ್ನಡೆಯಾದ ಬಳಿಕ ಕೇರಳದತ್ತಮುಖ ಮಾಡಿದ್ದ. ಈತನ ವಿರುದ್ಧ ಚಿಕ್ಕಮಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹತ್ಯೆ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2005ರಲ್ಲಿ ಸಾಕೇತ್ ರಾಜನ್ ಹತ್ಯೆ ನಂತರ ಅವರು ಪಕ್ಷದ ನಾಯಕತ್ವ ವಹಿಸಿಕೊಂಡರು. ಸಾವಿತ್ರಿ ಅವರು ಸಂಘಟನೆಯ ‘ಕಬನಿ ದಳಂ’ನ ಕಮಾಂಡರ್ ಆಗಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
