ಉ.ಕ.ದಲ್ಲಿ ಇಸ್ಪೀಟ್‌ ಮಾಫಿಯಾ…! ಭಟ್ಕಳ: ಮುಸುಕುಧಾರಿಗಳಿಂದ ಪತ್ರಕರ್ತನ ಮೇಲೆ ಹಲ್ಲೆ, ವ್ಯಾಪಕ ಖಂಡನೆ

ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ಪತ್ರಕರ್ತ ರಾಘು ಯಾನೆ ಅರ್ಜುನ್ ಮಲ್ಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಸೇರಿದ್ದಾರೆ.

ಭಟ್ಕಳ: ತನ್ನ ಕೆಲಸ ಮುಗಿಸಿ ಮನೆಗೆ ಬೈಕ್​​​ನಲ್ಲಿ ಬರುತ್ತಿದ್ದ ಪತ್ರಕರ್ತನ ಮೇಲೆ ಹಿಂದಿನಿಂದ ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ರಸ್ತೆಗೆ ತಳ್ಳಿ, ಹಲ್ಲೆ ನಡೆಸಿದ ಘಟನೆ ಭಟ್ಕಳದಲ್ಲಿ ನಡೆಯಿತು.

ರಾಘು ಯಾನೆ ಅರ್ಜುನ್ ಮಲ್ಯ (30) ಹಲ್ಲೆಗೊಳಗಾದ ಪತ್ರಕರ್ತ. ದುಷ್ಕರ್ಮಿಗಳು ಮರದ ರೀಪು ಹಾಗು ರಾಡ್​​​ಗಳಿಂದ ಹಲ್ಲೆ ಮಾಡಿದ್ದಾರೆ. ಅರ್ಜುನ್ ಅವರ ಎಡಗೈ‌ನ ನಾಲ್ಕು ಕಡೆಗಳಲ್ಲಿ ಮೂಳೆ ಮುರಿತಗೊಂಡಿದೆ. ಅಲ್ಲದೇ ಎಡಗಾಲು ಸಹ ಮುರಿದಿದೆ. ರಾಡ್​​​ನಿಂದ ತಲೆಗೆ ಹಲವು ಬಾರಿ ಹಲ್ಲೆ ಮಾಡಿದ್ದು, ಅರ್ಜುನ್ ಹೆಲ್ಮೆಟ್ ಧರಿಸಿದ್ದರಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಬೆಳಕೆಯ ನಿವಾಸಿ ಅರ್ಜುನ್ ಯಾನೆ ರಾಘು ಕಳೆದ‌ ಕೆಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಭಟ್ಕಳದ ಪುರಸಭೆ ಕಟ್ಟಡದಲ್ಲಿ ಕಚೇರಿ‌ ಹೊಂದಿರುವ ಅರ್ಜುನ್ ‘ಕರಾವಳಿ ಸಮಾಚಾರ್’ ಎನ್ನುವ ವೆಬ್ ಪೋರ್ಟಲ್ ಸಂಪಾದಕರಾಗಿದ್ದಾರೆ. ಕೆಲವು‌ ದಿನಗಳ ಹಿಂದೆ ರಿಕ್ರಿಯೇಷನ್ ಕ್ಲಬ್​​ನಿಂದಾಗುವ ಸಮಸ್ಯೆಗಳ ಬಗ್ಗೆ ನಿಷ್ಪಕ್ಷಪಾತ ವರದಿ ಮಾಡಿದ್ದರು.

ಕಳೆದ ಎರಡು ದಿನಗಳಿಂದ ಕೆಲವು ವ್ಯಕ್ತಿಗಳು ಅರ್ಜುನ್‌ನನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಗುರುವಾರ ಸಂಜೆ ಕೆಲಸ ಮುಗಿಸಿ ಬೈಕ್​​ನಲ್ಲಿ ವಾಪಸ್​​ ಆಗುತ್ತಿದ್ದರು. ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಬರುತ್ತಿದ್ದ ವೇಳೆ, ಹಿಂದಿನಿಂದ ಓವರ್ ಟೇಕ್ ಮಾಡಿ ಬಂದ ಬೈಕ್​​ಗಳಲ್ಲಿ ಹಿಂದೆ ಕುಳಿತವರ ಪೈಕಿ ಒಬ್ಬ ಬಲವಾಗಿ ಅರ್ಜುನ್ ಅವರ ಬೈಕ್​ ಅ​ನ್ನು ತಳ್ಳಿದ್ದಾನೆ.

ನಿಯಂತ್ರಣ ಕಳೆದುಕೊಂಡ ಅರ್ಜುನ್ ಬೈಕ್‌ಸಮೇತ ರಸ್ತೆಗೆ ಬಿದ್ದಿದ್ದಾರೆ. ಆಗ ಆರು ಜನರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬೊಬ್ಬೆ ಕೇಳಿ ಸ್ಥಳೀಯರು ಓಡಿ ಬಂದಾಗ ರಾಡ್, ರೀಪುಗಳನ್ನು ಅಲ್ಲಿಯೇ ಬಿಟ್ಟು ದುಷ್ಕರ್ಮಿಗಳು ಬೈಕ್​​​ನಲ್ಲಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲುಬು ಮತ್ತು ಮೂಳೆ ತಜ್ಞ ದಿನೇಶ್ ಕುಮಾರ್ ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸುವುದಾಗಿ ತಿಳಿಸಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಎಸ್​ಐ ಭರತ್ ಹಾಗು ಸಿಬ್ಬಂದಿ ಮಲ್ಲಿಕಾರ್ಜುನ್ ನಾಯ್ಕ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತ್ರಕರ್ತರಿಂದ ಖಂಡನೆ: ಅರ್ಜುನ್​ ಮಲ್ಯ ಅವರ ಮೇಲಿನ ಹಲ್ಲೆಯನ್ನು ಭಟ್ಕಳ, ಉತ್ತರ ಕನ್ನಡ ಹಾಗು ಕುಂದಾಪುರದ ಪತ್ರಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಪತ್ರಕರ್ತರು ತಮ್ಮ ಕರ್ತವ್ಯವನ್ನು ನಿರ್ಭೀತಿಯಿಂದ ಮಾಡಲು ಅವಕಾಶ ಸಿಗಬೇಕು. ಹೀಗೆ ದುಷ್ಕರ್ಮಿಗಳು ಕಾನೂನನ್ನು ಪದೇ ಪದೇ ಕೈಗೆ ತೆಗೆದುಕೊಂಡು ಹಲ್ಲೆ ನಡೆಸಿದರೆ ಪತ್ರಕರ್ತರಿಗೆ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತದೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಗಮನಹರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. (ಈಟಿಬಿ.ಕೆ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *