ಗಣಪತಿ ಉಳ್ವೇಕರ್‌,ಶ್ರೀನಿವಾಸ್‌ ಪೂಜಾರಿ ಸೇರಿ ಬಿ.ಜೆ.ಪಿ.ಯ ೨೦ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

ಡಿ.೧೦ ರಂದು ರಾಜ್ಯದ ೨೫ ವಿ.ಪ.ಕ್ಷೇತ್ರಗಳಿಂದ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿ.ಜೆ.ಪಿ. ಬಿಡುಗಡೆ ಮಾಡಿದೆ. ಉತ್ತರ ಕನ್ನಡದಿಂದ ಕಾರವಾರದ ಗಣಪತಿ ಉಳ್ವೇಕರ್‌, ದ.ಕ. ದಿಂದ ಶ್ರೀನಿವಾಸ್‌ ಪೂಜಾರಿ ಸೇರಿ ಒಟ್ಟೂ ೨೦ ಜನರ ಹೆಸರನ್ನು ಪ್ರಕಟಿಸಿದೆ.

ಸಚಿವರಾಗಿರುವ ಶ್ರೀನಿವಾಸ್‌ ಪೂಜಾರಿ ಬಿ.ಜೆ.ಪಿ. ಟಿಕೇಟ್‌ ಪಡೆಯುವ ಬಗ್ಗೆ ಅನುಮಾನಗಳಿರಲಿಲ್ಲ. ಉತ್ತರ ಕನ್ನಡದಿಂದ ಪಕ್ಷಕ್ಕೆ ಸಲ್ಲಿಕೆಯಾದ ಒಟ್ಟೂ ೨೪ ಹೆಸರುಗಳಲ್ಲಿ ಗಣಪತಿ ಉಳ್ವೇಕರ್‌ ಹೆಸರು ಆಯ್ಕೆಯಾಗಿದೆ. ಅಣ್ಣ ಎಂದೇ ಕರೆಸಿಕೊಳ್ಳುವ ಕಾರವಾರದ ಗಣಪತಿ ಉಳ್ವೇಕರ್‌ ಕಾರವಾರದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ವಸಂತ ಅಸ್ನೋಟಿಕರ್‌ ಅವಧಿಯಿಂದ ಈ ವರೆಗೆ ನಾಲ್ಕೈದು ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ್ದ ಗಣಪತಿ ಕಾರವಾರ ಶಾಸಕಿ ರೂಪಾಲಿ ನಾಯ್ಕರ ಆಪ್ತರಲ್ಲೊಬ್ಬರು.

ಮೀನುಗಾರರ ಮುಖಂಡರಾಗಿ, ಧಾರ್ಮಿಕ, ಸಾಮಾಜಿಕ ಮುಂದಾಳುವಾಗಿ ಉತ್ತರ ಕನ್ನಡದಲ್ಲಿ ಹೆಸರು ಮಾಡಿರುವ ಗಣಪತಿ ಈ ಹಿಂದಿನ ವಿ.ಪ. ಚುನಾವಣೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ೧೦೦೫ ಮತಗಳಿಸಿ ಪರಾಭವಗೊಂಡಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಗಣಪತಿ ಉಳ್ವೇಕರ್‌ ರಿಗೆ ಬಿ.ಜೆ.ಪಿ. ಶಾಸಕರು, ಅರ್ಧದಷ್ಟಿರುವ ಬಿ.ಜೆ.ಪಿ. ಬೆಂಬಲಿತ ಮತದಾರರು ಕೈ ಹಿಡಿಯಬಹುದೆನ್ನುವ ನಂಬಿಕೆ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌, ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ ಪ್ರಮುಖರು ಜೊತೆಗೆ ನಿಲ್ಲದಿದ್ದರೂ ಸ್ವ ಸಾಮರ್ಥ್ಯ, ಉತ್ತಮ ಹೆಸರಿನಿಂದ ಬಿ.ಜೆ.ಪಿ. ಟಿಕೇಟ್‌ ಪಡೆದಿರುವ ಉಳ್ವೇಕರ್‌ ಟಿಕೇಟ್‌ ಪಡೆಯುವ ಸಾಹಸದಲ್ಲಿದ್ದ ಕೆ.ಜಿ.ನಾಯ್ಕ ಹಣಜಿಬೈಲ್‌,ಗೋವಿಂದ ನಾಯ್ಕ, ಸುನಿಲ್‌ ಹೆಗಡೆ,ನಾಗರಾಜ್‌ ನಾಯ್ಕ ತೊರಕೆ ಸೇರಿದ ಅನೇಕ ಘಟಾಘಟಿಗಳನ್ನು ಹಿಂದೆ ಸರಿಸಿ ಟಿಕೇಟ್‌ ಗಳಿಸಿದ್ದಾರೆ.

ಹಣಬಲದ ನಾಗರಾಜ್‌ ನಾಯ್ಕ ತೊರ್ಕೆ ಪರ ಶಿವರಾಮ್‌ ಹೆಬ್ಬಾರ್‌, ವಿಶ್ವೇಶ್ವರ ಹೆಗಡೆ ಕಾಗೇರಿ,ಅನಂತಕುಮಾರ ಹೆಗಡೆ ಲಾಬಿ ಮಾಡಿದ್ದರು ಎನ್ನುವುದು ಬಹಿರಂಗ ಗುಟ್ಟು. ಉತ್ತರ ಕನ್ನಡ ಜಿಲ್ಲೆಯಲ್ಲಿ ದೀವರನ್ನು ಬಿಟ್ಟರೆ ಜನಸಂಖ್ಯೆಯಲ್ಲಿ ಹೆಚ್ಚಿರುವ ಮೀನುಗಾರರ ಪ್ರತಿನಿಧಿಯಾಗಿರುವ ಗಣಪತಿ ಉಳ್ವೇಕರ್‌ ಸಜ್ಜನ,ಮಾನವೀಯ ವ್ಯಕ್ತಿ ಎಂದು ಗುರುತಿಸಿಲ್ಪಟ್ಟಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ ನ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಸ್ಫರ್ಧಿಯಾಗುವುದು ನಿಕ್ಕಿ ಎನ್ನಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *