ಕಾಗೇರಿಗೆ ಸನ್ಮಾನ, ಅರಗ ಜ್ಞಾನೇಂದ್ರರಿಗೆ ಅಭಿಮಾನ

ಮುರುಡೇಶ್ವರದ ಮೂರ್ತಿಯ ವಿಚಾರವಿರಲಿ ರಾಜ್ಯದ ಕಾನೂನು ಸು ವ್ಯವಸ್ಥೆಯ ವಿಷಯವಿರಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವುದನ್ನು ಸಹಿಸುವುದಿಲ್ಲ ಎಂದು ದೃಢಪಡಿಸಿರುವ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಐಸಿಸ್‌ ಅಥವಾ ಆಂತರಿಕ ಸವಾಲುಗಳ ಬಗ್ಗೆ ನಿಗಾ ಇಡಲು ಕರಾವಳಿ ಕಾವಲು ಪಡೆ ಜೊತೆಗೆ ಇತರ ವಿಭಾಗಗಳನ್ನು ಬಲಪಡಿಸಲಾಗಿದೆ ಎಂದು ತಿಳಿಸಿದ್ದಾರೆ.


ಉತ್ತರ ಕನ್ನಡ ಜಿಲ್ಲೆಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅರಗಜ್ಞಾನೇಂದ್ರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದಲ್ಲಿ ಸರ್ಕಾರ ಅಸ್ಥಿರಗೊಳಿಸುವ ಜೊತೆಗೆ ಆಂತರಿಕ ಕ್ಷೋಭೆ ಹುಟ್ಟಿಸಲು ಕೆಲವು ಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ. ಅಂತಹ ಪ್ರಯತ್ನ ತಡೆಯಲು ಸರ್ಕಾರ ಸಮರ್ಥವಾಗಿದ್ದು ರಾಜ್ಯದ ಜನರ ಹಿತಾಸಕ್ತಿ, ಶಾಂತಿ-ಸುವ್ಯವಸ್ಥೆ ವಿಚಾರದಲ್ಲಿ ಯಾರೊಂದಿಗೂ ರಾಜಿ ಇಲ್ಲ ಎಂದರು.


ಮುರುಡೇಶ್ವರದಲ್ಲಿ ಶಿವ ಪ್ರತಿಮೆ ಧ್ವಂಸದ ಬಗ್ಗೆ ಐಸಿಸ್‌ ಪತ್ರಿಕೆಯಲ್ಲಿ ಬಂದ ಚಿತ್ರ-ವರ್ತಮಾನಗಳ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ವೈರಲ್‌ ವಿಷಯದ ಬಗ್ಗೆ ಮಾತನಾಡಿಡುವ ಗೃಹ ಸಚಿವ ಅರಗಜ್ಞಾನೇಂದ್ರ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುತಿದ್ದೇವೆ. ರಾಷ್ಟ್ರೀಯವಾದಿಗಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದರ ಪರಿಣಾಮವಾಗಿ ಅನುಚಿತ ಕೆಲಸಗಳು ನಡೆಯುತ್ತಿವೆ. ಇದಕ್ಕೆಲ್ಲಾ ಬೆದರುವ  ನಾಯಕತ್ವ ನಮ್ಮದಲ್ಲ ಎಲ್ಲಾ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲು ನಾವು ಸಿದ್ಧರಿದ್ದೇವೆ ಎಂದರು.


ಇದೇ ಸಂದರ್ಭದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ರಾಜಮಾನ್ಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಸಚಿವರು ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಸಚ್ಚಾರಿತ್ರ್ಯದಿಂದ ಮಾದರಿ ಸಭಾಪತಿಯಾಗಿ ಹೆಸರುಮಾಡಿದ್ದಾರೆ ಎಂದು ಶ್ಲಾಘಿಸಿದರು. ಒಕ್ಕಲಿಗ ಸಮಾಜದ ಸನ್ಮಾನ ಸ್ವೀಕರಿಸಿದ  ಸಚಿವ ಅರಗಜ್ಞಾನೇಂದ್ರ ಮತ್ತು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಳೆಮೈಸೂರು ಭಾಗ ಬಿಟ್ಟರೆ ಇತರೆಡೆ ಒಕ್ಕಲಿಗರಿಗೆ ನ್ಯಾಯ ಸಿಕ್ಕಿಲ್ಲ ಎಂದು ಪ್ರತಿಪಾದಿಸಿದರು..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *