ಪರಿಷತ್ ಗೆ ವಿಪಕ್ಷ ನಾಯಕನ ಆಯ್ಕೆ: ‘ಕೈ’ ಕೊಟ್ಟ ಇಬ್ರಾಹಿಂ- ಬಿ.ಕೆ ಹರಿಪ್ರಸಾದ್ ‘ಕಾಂಗ್ರೆಸ್ ‘ಹಾಟ್ ಫೇವರಿಟ್!

ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

BK Hari prasad

ಬೆಂಗಳೂರು: ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರು ಬೆನ್ಸನ್ ಟೌನ್ ನಲ್ಲಿರುವ ಸಿಎಂ ಇಬ್ರಾಹಿಂ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ ಪಕ್ಷ ತೊರೆಯದಂತೆ ಮನವಿ ಮಾಡಿದ್ದಾರೆ, ಆದರೆ ಇಬ್ರಾಹಿಂ ಅವರ ಮನವಿಗೆ ಕ್ಯಾರೆ ಎಂದಿಲ್ಲ.

ಉತ್ತಮ ವಾಗ್ಮಿ ಎಂದೇ ಗುರುತಿಸಿಕೊಂಡಿರುವ ಸಿಎಂ ಇಬ್ರಾಹಿಂ, ದಿವಂಗತ ಆರ್.ಗುಂಡೂರಾವ್ ಅವರು ಮಖ್ಯಮಂತ್ರಿ ಆಗಿದ್ದ ವೇಳೆ ಸಚಿವರಾಗಿದ್ದರು.  ಅದಾದ ನಂತರ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಇಬ್ರಾಹಿಂ ಜೆಡಿಎಸ್ ಸೇರಿ ದೇವೇಗೌಡರು ಪ್ರಧಾನಿಯಾದಾಗ ಕೇಂದ್ರ ಸಚಿವರಾಗಿದ್ದರು,  2008 ರಲ್ಲಿ ಕಾಂಗ್ರೆಸ್ ಗೆ ಮರಳಿದರು.

ಇಬ್ರಾಹಿಂ ಈಗಾಗಲೇ ಹೆಚ್ಚು ಕಮ್ಮಿ ಕಾಂಗ್ರೆಸ್ ತೊರೆದಿದ್ದಾರೆ, ಎಸ್ ಆರ್ ಪಾಟೀಲ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ, ನಾಸೀರ್ ಅಹ್ಮದ್, ಆರ್ ಬಿ ತಿಮ್ಮಾಪುರ್, ಬಿ.ಕೆ ಹರಿಪ್ರಸಾದ್ ಹಾಗೂ ಎಲ್ಲಂ ವೀರಭದ್ರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ದಶಕಗಳಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಹರಿಪ್ರಸಾದ್ ಅವರಿಗೆ ರಾಜ್ಯ ಸಭೆಯಲ್ಲಿಯೂ ಅನುಭವವಿದೆ,  2004-2014ರವರೆಗೆ  ಯುಪಿಎ ಸರ್ಕಾರದ ಅವಧಿಯಲ್ಲಿ ಅವರು ಯಾವುದೇ ಸಚಿವ ಸ್ಥಾನವನ್ನು ಅಲಂಕರಿಸಿರಲಿಲ್ಲ.ಬದಲಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 30 ವರ್ಷಗಳ ಹಿಂದೆ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿದ್ದೇ ಕೊನೆಯ ಹುದ್ದೆ.

ಇನ್ನೂ ಮೂರು ಅವಧಿಗೆ ಸಚಿವರಾಗಿದ್ದ ಆರ್.ಬಿ.ತಿಮ್ಮಾಪುರ್ ಅವರು ನಿರ್ಧಾರವನ್ನು ಪಕ್ಷದ ನಾಯಕತ್ವಕ್ಕೆ ಬಿಟ್ಟಿದ್ದಾರೆ. ಅಲ್ಲಂ ವೀರಭದ್ರಪ್ಪ ಅವರು ಈ ಹಿಂದೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು ಮತ್ತು ಹಿರಿತನವನ್ನು ಹೊಂದಿದ್ದಾರೆ . 80 ರ ದಶಕದ ಉತ್ತರಾರ್ಧದಲ್ಲಿ ಎಸ್ ಬಂಗಾರಪ್ಪ ಸಂಪುಟದಲ್ಲಿ ನಾಸೀರ್ ಅಹಮದ್ ಸಚಿವರಾಗಿ ಕೆಲಸ ನಿರ್ವಹಿಸಿದ್ದರು

ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಸಾಮರ್ಥ್ಯ ಇದ್ದವರನ್ನು ಮಾತ್ರ ಪರಿಗಣಿಸಲಾಗುವುದು ಎಂದು ಪಕ್ಷ ಸ್ಪಷ್ಟ ಸಂದೇಶ ರವಾನಿಸಿದೆ. ಈ ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್ ಕೂಡ ಸೇರಿದ್ದಾರೆ. ರಾಜ್ಯದ 70 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಬಲ ಹೊಂದಿರುವ ಪ್ರಭಾವಿ ಈಡಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.  

ಇತರ ಹಿಂದುಳಿದ ಜಾತಿಗಳು ಕಾಂಗ್ರೆಸ್‌ನಲ್ಲಿ ಕುರುಬರ ಪ್ರಾಬಲ್ಯದ ಬಗ್ಗೆ ದೂರುತ್ತಿವೆ ಹೀಗಾಗಿ, ಹಿಂದುಳಿದ ವರ್ಗದ ನಾಯಕನನ್ನು ಆಯ್ಕೆ ಮಾಡುವುದರಿಂದ ಸಮುದಾಯದ ಮೇಲೆ ಪಕ್ಷವು ತನ್ನ ಹಿಡಿತವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *