ನಮ್ಮನೆ ಹಬ್ಬಕ್ಕೆ ತಾರಾ ಮೆರಗು! ತುಳಸಿ ಬೆರಗು

Thumbnail image

ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’ : ಚಿತ್ರನಟಿ ತಾರಾ ಭಾಗಿ

ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ತಾರಾ ಅವರು ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್​​​ ಬಿಡುಗಡೆಗೊಳಿಸಿದರು.

ಶಿರಸಿ: ಕಲೆ,ಸಾಹಿತ್ಯ,ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ ‘ನಮ್ಮನೆ ಹಬ್ಬ’ ಸಂಭ್ರಮ ಶಿರಸಿಯಲ್ಲಿ ನಡೆಯಿತು. ಚಿತ್ರನಟಿ ತಾರಾ ಅನುರಾಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರಗು ನೀಡಿದರು.

ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ನಟಿ ತಾರಾ ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್​​​ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ನಾವು ಎಲ್ಲೋ ಹೋದರೂ ನಮ್ಮ ಊರಿನಲ್ಲಿ ನಮ್ಮ ಮನೆಯಲ್ಲಿ ಸಿಗುವ ಸಂತಸ ಬೆರೆಲ್ಲೂ ಸಿಗಲು ಸಾಧ್ಯವಿಲ್ಲ. ಶಿರಸಿಯ ನೆಲ ಜಲ ಸಂಸ್ಕೃತಿ, ಸಾಹಿತ್ಯ ಕ್ಷೇತ್ರಗಳ ತವರೂರು. ಕರುನಾಡಿಗೆ ಕಲಾವಿದರನ್ನುನೀಡಿದ ಶ್ರೇಷ್ಠ ಭೂಮಿ ಶಿರಸಿ. ತೆರೆಮರೆ ಕಾಯಂತೆ ಇರುವ ಕಲಾವಿದರನ್ನು, ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುತ್ತೀರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ನಮ್ಮನೆ ಹಬ್ಬ ಇನ್ನಷ್ಟು ಜನಪ್ರಿಯತೆ ಪಡೆಯಲಿ ಎಂದರು.

ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’

ಇದಕ್ಕೂ‌ ಮುನ್ನ ನಮ್ಮನೆ ಪ್ರಶಸ್ತಿಯನ್ನು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಹಾಗೂ ಸೆಲ್ಕೋ ಇಂಡಿಯಾ ಬೆಂಗಳೂರು ಸಿಇಓ ಮೋಹನ್​ ಹೆಗಡೆ ಅವರಿಗೆ ಹಾಗೂ ನಮ್ಮನೆ ಯುವ ಪುರಸ್ಕಾರವನ್ನು ಕಲಾವಿದ ವಿಭವ ಮಂಗಳೂರು ಅವರಿಗೆ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿ.ಉಮಾಕಾಂತ ಭಟ್, ಚಲನಚಿತ್ರ ನಟ ರಾಮಕೃಷ್ಣ ಹೆಗಡೆ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ್​ ಅಶೀಸರ, ಹಿರಿಯ ಪತ್ರಕರ್ತ ರವೀಂದ್ರ ಭಟ್, ಟ್ರಸ್ಟ್ ಅಧ್ಯಕ್ಷೆ ಭುವನೇಶ್ವರಿ ಹೆಗಡೆ ಉಪಸ್ಥಿತರಿದ್ದರು.

ಏಳನೇ ರೂಪಕ: ಸಭಾ ಕಾರ್ಯಕ್ರಮದ ನಂತರ ಅಪರೂಪದ ಪದ್ಯಗಳ ಮೂಲಕ ಶ್ರೀಕೃಷ್ಣನ ಪ್ರೇಮದ ಅಮೃತವನ್ನೇ ಹರಿಸುವ ವಿಶ್ವ ಶಾಂತಿ ಸರಣಿಗೆ ಏಳನೇ ಯಕ್ಷರೂಪಕವಾಗಿ ವಂಶೀ ವಿಲಾಸ ಸೇರ್ಪಡೆಗೊಂಡಿತು.ಪ್ರಸಿದ್ದ ಚಲನಚಿತ್ರತಾರೆ ತಾರಾ ಲೋಕಾರ್ಪಣೆಗೊಳಿಸಿದ ಈ ರೂಪಕ ಒಂದುವರೆ ಗಂಟೆಗಳ‌ ಕಾಲ ‌ತುಳಸಿ ಹೆಗಡೆ ಮೂಲಕ ಅನಾವರಣಗೊಂಡಿತು. ನಾಡಿನ ಹಲವಡೆಯಿಂದ ಐನೂರಕ್ಕೂ ಅಧಿಕ ಕಲಾ ಆಸಕ್ತರು ಪಾಲ್ಗೊಂಡಿದ್ದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *