ಅಕ್ರಮ ಮದ್ಯ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ

ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್‌ ಕಾಗೇರಿ

ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ…

Kageri

ಬೆಳಗಾವಿ: ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ  ಪ್ರಸಂಗಕ್ಕೆ ಸದನ ಮಂಗಳವಾರ ಸಾಕ್ಷಿಯಾಯಿತು.

ಅಕ್ರಮ ಮದ್ಯ ಮಾರಾಟದ ಬಗ್ಗೆ ಕಾಂಗ್ರೆಸ್‌ ಶಾಸಕ ತುಕರಾಮ್‌ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್‌ ಕಾಗೇರಿ ಅವರು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಆದಾಯವಿದೆ ನಿಜ. ಆದರೆ ಆದಾಯದ ಹೆಚ್ಚಳಕ್ಕಾಗಿ ಹಣಕಾಸು ಇಲಾಖೆ ಹೆಚ್ಚು ಮದ್ಯ ಮಾರಾಟದ ಗುರಿಯನ್ನು ನಿಗದಿಪಡಿಸುವುದರಿಂದಲೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗಲು ಕಾರಣವಾಗಿದೆ ಎಂದು ಸಮಸ್ಯೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದರು.

ಮದ್ಯ ಮಾರಾಟದಿಂದಾಗಿ ದಿನೇದಿನೇ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕಳಿಸಿದರೆ ಅವರಿಗೆ ಸಮಸ್ಯೆಯ ಅರಿವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕೆಂದರೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿಪಡಿಸುವುದನ್ನು ಬಿಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣ ಜನತೆಯ ಹಿತದೃಷ್ಟಿಯಿಂದ ವರ್ಷದಿಂದ ವರ್ಷಕ್ಕೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿ ಮಾಡುವುದನ್ನು ಕಡಿಮೆ ಮಾಡುತ್ತಾ ಬರಬೇಕು. ಜನರ ಆರೋಗ್ಯಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯ ದೊಡ್ಡದಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರು ಈ ಸಮಸ್ಯೆ ಬಗ್ಗೆ ಗಮನ ಹರಿಸಬೇಕೆಂದು ಸ್ಪೀಕರ್‌ ಸಲಹೆ ಮಾಡಿದರು.

ಮದ್ಯ ಮಾರಾಟದಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿ ಹಣ ಗಳಿಸೋದು ಸರಿಯಲ್ಲ ಎಂದು ಶಾಸಕ ತುಕಾರಾಂ ಅಭಿಪ್ರಾಯಪಟ್ಟರು. ಇವರ ಪ್ರಶ್ನೆಗೆ ಉತ್ತರ ನೀಡಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ, ಸಂಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡ್ತಿದ್ರು. ನಮ್ಮ ಇಲಾಖೆಯ ಆಧಿಕಾರಿಗಳು ರೇಡ್ ಮಾಡಿದ್ದಾರೆ. ಮದ್ಯದ ಜೊತೆಗೆ ಅಕ್ರಮ ವಾಹನಗಳನ್ನು  ವಶ ಪಡಿಸಿಕೊಂಡಿದ್ದಾರೆ. ನಾಳೆ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಕ್ರಮ ಮದ್ಯ ಮಾರಾಟ ಕಡಿವಾಣದ ಬಗ್ಗೆ ಸೂಚನೆ ಕೊಡ್ತೇನೆ ಎಂದರು.

ಅಬಕಾರಿ ಸಚಿವರ ಉತ್ತರ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಲಿ, ಶಾಸಕ ತುಕಾರಾಂ ಅವರಿಗಾಗಲಿ ಸಮಾಧಾನ ನೀಡಲಿಲ್ಲ. ಹೆಚ್ಚು ಮದ್ಯ ಮಾರಾಟ ಮಾಡಿ ಎಂದು ಹಣಕಾಸು ಇಲಾಖೆ ಗುರಿ ನಿಗದಿ ಮಾಡದಿದ್ದಾಗ ಮಾತ್ರ ಗೋಪಾಲಯ್ಯ ಅವರು ಸಮಂಜಸವಾದ ಉತ್ತರ ಕೊಡಲು ಸಾಧ್ಯವಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *