ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

Thumbnail image

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ

ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ.

ಶಿರಸಿ: ಕಾರ್ವಿಂಗ್ ಆರ್ಟ್(ಮರ ಕೆತ್ತನೆ) ನಮ್ಮ ರಾಜ್ಯದ ಅದ್ಭುತ ಕಲೆ. ಈ ಮರಕೆತ್ತನೆಯ ಕುಸುರಿ ಕೆಲಸದ ಹಿಂದೆ ಅದೆಷ್ಟೋ ಪರಿಶ್ರಮ ಇದೆ. ಇಂತಹ ಕಠಿಣ ಕುಸುರಿ ಕೆಲಸವನ್ನು ದತ್ತವಾಗಿಸಿಕೊಂಡಿದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕುಟುಂಬ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಈ ಕುಟುಂಬಸ್ಥರು ತಯಾರಿಸಿದ ಕಲಾಕೃತಿಗಳು ಹೊರ ರಾಜ್ಯಗಳಲ್ಲದೇ, ವಿದೇಶಗಳಿಗೂ ರಫ್ತಾಗಿವೆ. ಈ ಮೂಲಕ ರಾಜ್ಯದ ಕಲೆಯನ್ನು ಸಾಗರದಾಚೆಗೂ ಪ್ರಖ್ಯಾತವಾಗುವಂತೆ ಮಾಡಿದೆ ಯಲ್ಲಾಪುರದ ಕುಟುಂಬ.

ಇವರು ಮಾಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ. ಆದಿತ್ಯ ಗುಡಿಗಾರ್ ಎಂಬುವ ಯುವ ಕೆತ್ತನೆಗಾರ ಇವೆಲ್ಲವುಗಳ ಸಾರಥ್ಯ ವಹಿಸಿಕೊಂಡಿದ್ದಾರೆ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಅಮೆರಿಕದ ದೇವಾಲಯಕ್ಕೂ ಬಾಗಿಲು ತಯಾರಿ

ಅಮೆರಿಕದ ನ್ಯೂ ಜೆರ್ಸಿಯಲ್ಲಿನ ಸ್ವಾಮಿ ನಾರಾಯಣ ದೇವಾಲಯಕ್ಕೆ ಇಲ್ಲಿಂದಲೇ ಬಾಗಿಲುಗಳು ತಯಾರಿಸಿ ಕೊಡಲಾಗಿದೆ. ಇಸ್ಕಾನ್ ಮಂದಿರಕ್ಕೂ ಕೂಡ ಇಲ್ಲಿಂದಲೇ ಬಾಗಿಲುಗಳ ರವಾನೆಯಾಗಿದೆ. ಇನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಮೂಲರಥದ ನಿರ್ಮಾಣ ಮಾಡಿದ್ದು ಕೂಡ ಇವರೇ.

ಸಚಿವ ಆನಂದ್ ಸಿಂಗ್ ಈ ರಥವನ್ನ ನಿರ್ಮಾಣ ಮಾಡಿಕೊಡಲು ಕೋರಿಕೊಂಡಿದ್ದರು. ಇದೀಗ ಗುಜರಾತ್​ನ ಸ್ವಾಮಿ ನಾರಾಯಣ ದೇವಾಲಯಕ್ಕೆ ಸಂಪೂರ್ಣ ಬಾಗಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರ ಬೆಲೆ ಬರೋಬ್ಬರಿ 60 ಲಕ್ಷ ರೂಪಾಯಿ. ಅಂದರೆ ಇವರ ಮರ ಕೆತ್ತನೆಯ ಕುಸುರಿ ಕಲೆಗೆ ಎಷ್ಟು ಬೆಲೆ ಎಂಬುವನ್ನು ಇದು ತೋರಿಸುತ್ತದೆ.

ಮನೆಮಂದಿಯೆಲ್ಲಾ ಸೇರಿ ಕಲಾಕೃತಿಗಳ ರಚನೆ

ಈ ಗುಡಿಗಾರರ ಕುಟುಂಬ ತಯಾರಿಸುವ ಕೆತ್ತನೆಗಳಿಗೆ ವಿಪರೀತ ಬೇಡಿಕೆ ಇರುವ ಕಾರಣ ಮನೆಯ ಯುವಕರು ಹಾಗೂ ಮಹಿಳಾ ಸದಸ್ಯರೂ ಕೂಡ ಕೆತ್ತನೆಯಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 25 ಜನ ಕೆಲಸಗಾರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹಲವರು ಕೆತ್ತನೆಯನ್ನ ಕರಗತ ಮಾಡಿಕೊಳ್ಳುತ್ತಿದ್ದಾರೆ. ಇವರ ಜೀವನ ನಡೆದುಕೊಂಡು ಬಂದಿರೋದು ಕೂಡ ಈ ಕರಕುಶಲ ಕಲೆಯ ಮೂಲಕ. ಸಾಂಪ್ರದಾಯಿಕ ಕಲೆಗಳಿಗೆ ಒತ್ತು ನೀಡುವ ಮೂಲಕ ಉದ್ಯೋಗದ ಸೃಷ್ಟಿಯನ್ನು ಕೂಡ ಮಾಡ್ತಿದೆ ಈ ಕುಟುಂಬ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *