ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

Thumbnail image

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ

ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ.

ಶಿರಸಿ: ಕಾರ್ವಿಂಗ್ ಆರ್ಟ್(ಮರ ಕೆತ್ತನೆ) ನಮ್ಮ ರಾಜ್ಯದ ಅದ್ಭುತ ಕಲೆ. ಈ ಮರಕೆತ್ತನೆಯ ಕುಸುರಿ ಕೆಲಸದ ಹಿಂದೆ ಅದೆಷ್ಟೋ ಪರಿಶ್ರಮ ಇದೆ. ಇಂತಹ ಕಠಿಣ ಕುಸುರಿ ಕೆಲಸವನ್ನು ದತ್ತವಾಗಿಸಿಕೊಂಡಿದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕುಟುಂಬ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಈ ಕುಟುಂಬಸ್ಥರು ತಯಾರಿಸಿದ ಕಲಾಕೃತಿಗಳು ಹೊರ ರಾಜ್ಯಗಳಲ್ಲದೇ, ವಿದೇಶಗಳಿಗೂ ರಫ್ತಾಗಿವೆ. ಈ ಮೂಲಕ ರಾಜ್ಯದ ಕಲೆಯನ್ನು ಸಾಗರದಾಚೆಗೂ ಪ್ರಖ್ಯಾತವಾಗುವಂತೆ ಮಾಡಿದೆ ಯಲ್ಲಾಪುರದ ಕುಟುಂಬ.

ಇವರು ಮಾಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ. ಆದಿತ್ಯ ಗುಡಿಗಾರ್ ಎಂಬುವ ಯುವ ಕೆತ್ತನೆಗಾರ ಇವೆಲ್ಲವುಗಳ ಸಾರಥ್ಯ ವಹಿಸಿಕೊಂಡಿದ್ದಾರೆ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಅಮೆರಿಕದ ದೇವಾಲಯಕ್ಕೂ ಬಾಗಿಲು ತಯಾರಿ

ಅಮೆರಿಕದ ನ್ಯೂ ಜೆರ್ಸಿಯಲ್ಲಿನ ಸ್ವಾಮಿ ನಾರಾಯಣ ದೇವಾಲಯಕ್ಕೆ ಇಲ್ಲಿಂದಲೇ ಬಾಗಿಲುಗಳು ತಯಾರಿಸಿ ಕೊಡಲಾಗಿದೆ. ಇಸ್ಕಾನ್ ಮಂದಿರಕ್ಕೂ ಕೂಡ ಇಲ್ಲಿಂದಲೇ ಬಾಗಿಲುಗಳ ರವಾನೆಯಾಗಿದೆ. ಇನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಮೂಲರಥದ ನಿರ್ಮಾಣ ಮಾಡಿದ್ದು ಕೂಡ ಇವರೇ.

ಸಚಿವ ಆನಂದ್ ಸಿಂಗ್ ಈ ರಥವನ್ನ ನಿರ್ಮಾಣ ಮಾಡಿಕೊಡಲು ಕೋರಿಕೊಂಡಿದ್ದರು. ಇದೀಗ ಗುಜರಾತ್​ನ ಸ್ವಾಮಿ ನಾರಾಯಣ ದೇವಾಲಯಕ್ಕೆ ಸಂಪೂರ್ಣ ಬಾಗಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರ ಬೆಲೆ ಬರೋಬ್ಬರಿ 60 ಲಕ್ಷ ರೂಪಾಯಿ. ಅಂದರೆ ಇವರ ಮರ ಕೆತ್ತನೆಯ ಕುಸುರಿ ಕಲೆಗೆ ಎಷ್ಟು ಬೆಲೆ ಎಂಬುವನ್ನು ಇದು ತೋರಿಸುತ್ತದೆ.

ಮನೆಮಂದಿಯೆಲ್ಲಾ ಸೇರಿ ಕಲಾಕೃತಿಗಳ ರಚನೆ

ಈ ಗುಡಿಗಾರರ ಕುಟುಂಬ ತಯಾರಿಸುವ ಕೆತ್ತನೆಗಳಿಗೆ ವಿಪರೀತ ಬೇಡಿಕೆ ಇರುವ ಕಾರಣ ಮನೆಯ ಯುವಕರು ಹಾಗೂ ಮಹಿಳಾ ಸದಸ್ಯರೂ ಕೂಡ ಕೆತ್ತನೆಯಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 25 ಜನ ಕೆಲಸಗಾರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹಲವರು ಕೆತ್ತನೆಯನ್ನ ಕರಗತ ಮಾಡಿಕೊಳ್ಳುತ್ತಿದ್ದಾರೆ. ಇವರ ಜೀವನ ನಡೆದುಕೊಂಡು ಬಂದಿರೋದು ಕೂಡ ಈ ಕರಕುಶಲ ಕಲೆಯ ಮೂಲಕ. ಸಾಂಪ್ರದಾಯಿಕ ಕಲೆಗಳಿಗೆ ಒತ್ತು ನೀಡುವ ಮೂಲಕ ಉದ್ಯೋಗದ ಸೃಷ್ಟಿಯನ್ನು ಕೂಡ ಮಾಡ್ತಿದೆ ಈ ಕುಟುಂಬ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *