ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?

ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ.

Capsuls1

ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ.

ಮಾಲ್ ಪ್ಲೂ ಮಾತ್ರೆಗಳ ಬೆಲೆ ಕೇವಲ 35 ರೂ. ಆಗಿದೆ ಎಂದು ಹೈದರಾಬಾದ್ ಮೂಲದ ಔಷಧ ತಯಾರಕ ಕಂಪನಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ವಕ್ತಾರರೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಸ್ಟ್ರೀಪ್ ನಲ್ಲಿ 10 ಮಾತ್ರೆಗಳು ಇರಲಿದ್ದು, ಐದು ದಿನಗಳವರೆಗೂ 40 ಮಾತ್ರೆಗಳಿಗೆ ರೂ. 1,400 ವೆಚ್ಚ ತಗುಲಲಿದೆ. ಕೋವಿಡ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಈ ಮಾತ್ರೆಗಳಲ್ಲಿ ತಯಾರಿಸಲಾಗಿದೆ. ಮುಂದಿನ ವಾರ ದೇಶಾದ್ಯಂತ ಔಷಧ ಮಾರುಕಟ್ಟೆಗಳಲ್ಲಿ ಈ ಮಾತ್ರೆಗಳು ದೊರೆಯಲಿವೆ ಎಂದು ಅವರು ಹೇಳಿದ್ದಾರೆ. 

ಭಾರತ ಹಾಗೂ 100 ಕಡಿಮೆ, ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳಿಗೆ ಮೊಲ್ನಪಿರವಿರ್ ಮಾತ್ರೆ ಪೂರೈಸಲು ಎಂಎಸ್ ಡಿ ಕಂಪನಿಯೊಂದಿಗೆ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಕಳೆದ ವರ್ಷ ಒಪ್ಪಂದ ಮಾಡಿಕೊಂಡಿತ್ತು. ಈ ಮಾತ್ರೆಗಳ ಮೂರನೇ ಹಂತದ ಪ್ರಯೋಗವನ್ನು ತಜ್ಞರ ಸಮಿತಿ ಮುಂದೆ ಇಡಲಾಗಿತ್ತು.

ಆಸ್ಪತ್ರೆಯಲ್ಲಿರುವ ಅಥವಾ ಹೆಚ್ಚಿನ ಅಪಾಯವಿರುವ ವಯಸ್ಕ ರೋಗಿಗಳಿಗೆ 200 ಎಂಜಿ  ಮೊಲ್ನಪಿರವಿರ್  ಮಾತ್ರೆಗಳ ತಯಾರಿಕೆ ಹಾಗೂ ಮಾರುಕಟ್ಟೆಗಾಗಿ  ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಕಳೆದ ವಾರ ಅನುಮೋದನೆ ನೀಡಿತ್ತು. (kpc)

ಬಿ.ಜೆ.ಪಿ. ಪ್ರತಿಭಟನೆ,ಮನವಿ- ಸಿದ್ದಾಪುರ: ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ಕಾರ್ಯಕರ್ತರ ಗೂಂಡಾಗಿರಿ ವರ್ತನೆಯನ್ನು ಖಂಡಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಸಿದ್ದಾಪುರ ಮಂಡಲದ ವತಿಯಿಂದ ಮಂಗಳವಾರ ತಹಶೀಲ್ದಾರ ಸಂತೋಷ ಭಂಡಾರಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಮಾತನಾಡಿ, ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹಾಗೂ ಅವರ ಸಹಚರರಾದ ರವಿ ಎಂಬುವರು ವೇದಿಕೆಯಲ್ಲಿ ತೋರಿಸಿದ ವರ್ತನೆಯನ್ನು ಬಿಜೆಪಿ ಸಿದ್ದಾಪುರ ಮಂಡಲ ತೀವ್ರವಾಗಿ ಖಂಡಿಸುತ್ತದೆ. ಈ ಗೂಂಡಾಗಳ ಮೇಲೆ ಸರ್ಕಾರ ತಕ್ಷಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಅವರನ್ನು ಬಂಧಿಸಬೇಕು. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಲ್ಲದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಬಹುದೊಡ್ಡ ಅಪಮಾನ ಎಂದು ಹೇಳಿದರು.



ಮನವಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ ಸಂದರ್ಭದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಸಚಿವರಾದ ಡಾ.ಅಶ್ವತ್ಥ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪುಗೊಂಡಿತ್ತು. ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 2 ಪ್ರತಿಮೆಗಳ ಲೋಕಾರ್ಪಣೆ ಕಾರ್ಯಕ್ರಮ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಿ.ಕೆ ಸುರೇಶ್ ಅವರು ಏಕಾಏಕಿ ತಮ್ಮ ಗೂಂಡಾ ಕಾರ್ಯಕರ್ತರೊಂದಿಗೆ ವೇದಿಕೆಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾರೆ. ಡಾ. ಬಿ. ಅಂಬೇಡ್ಕರ್ ಅವರ ಪ್ರತಿಮೆ ಲೋಕಾರ್ಪಣೆ ಸಂದರ್ಭದಲ್ಲಿ ಅವರಿಗೆ ಮಾಡಿರುವ ಅಪಮಾನವಾಗಿರುತ್ತದೆ ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಎಸ್. ಕೆ. ಮೇಸ್ತ, ಪ.ಪಂ. ಸದಸ್ಯ ಸುಧೀರ ನಾಯ್ಕ್ ಕೊಂಡ್ಲಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣಪ್ಪ ನಾಯ್ಕ ಪ್ರಮುಖರಾದ ಪ್ರಶಾಂತ್ ರೋಖಡೆ, ಸುರೇಶ್ ನಾಯ್ಕ, ರವೀಂದ್ರ ಮಡಿವಾಳ, ಯುವಮೋರ್ಚಾ ಉಪಾಧ್ಯಕ್ಷ ರಾಘವೇಂದ್ರ ರಾಯ್ಕರ್, ಯುವಮೋರ್ಚಾ ಕಾರ್ಯದರ್ಶಿಗಳಾದ ಸುರೇಶ್ ಶೇಟ್ ಹಾಗೂ ಶಿವಕುಮಾರ್ ನಾಯ್ಕ ಕೊಂಡ್ಲಿ, ಮಂಜುನಾಥ ನಾಯ್ಕ, ಕೃಷ್ಣಮೂರ್ತಿ ನಾಯ್ಕ ನಿಡಗೋಡ, ಕೇಶವ ನಾಯ್ಕ ದೊಡ್ಮನೆ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *