ವಕೀಲ ಜಿ.ಆಯ್.ನಾಯ್ಕರಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು

ಸಿದ್ಧಾಪುರ ಕಡಕೇರಿಯ ವಕೀಲ ಜಿ.ಆಯ್.‌ ನಾಯ್ಕ ಇಂದು ನಿಧನರಾಗಿದ್ದಾರೆ. ಕೃಷಿಕರು,ವಕೀಲರಾಗಿ ಶಿರಸಿ,ಹಳಿಯಾಳ,ಸಿದ್ಧಾಪುರ ಗಳಲ್ಲಿ ಕಾರ್ಯನಿರ್ವಹಿಸುತಿದ್ದ ಜಿ.ಆಯ್.ನಾಯ್ಕ ಇಂದು ಬಿದ್ರಕಾನ ಬಳಿಯ ಕೊಡ್ಗಿಬೈಲ್ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದಾಗ ಹಠಾತ್‌ ಕುಸಿದು ಬಿದ್ದರು. ದಿಢೀರನೇ ಕುಸಿದು ಬಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ ಸಿದ್ಧಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರುತಿದ್ದಂತೆ ವಕೀಲರು ಮೃತರಾಗಿರುವುದನ್ನು ವೈದ್ಯರು ಖಚಿತಪಡಿಸಿದರು.

ಹೃದಯಾಘಾತವಾಗಿ ನಿಧನರಾದ ಇವರ ಮೃತದೇಹವನ್ನು ಅವರಗುಪ್ಪಾದ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಮೃತ ಜಿ.ಆಯ್.‌ ನಾಯ್ಕರ ಪತ್ನಿ ನ್ಯಾಯಾಲಯದ ಉದ್ಯೋಗಿಯಾಗಿದ್ದು ಇಬ್ಬರು ಹೆಣ್ಣುಮಕ್ಕಳೊಂದಿಗೆ ಅವರು ಹಳಿಯಾಳದಲ್ಲಿ ನೆಲೆಸಿದ್ದರು. ಜನಾನುರಾಗಿ ವಕೀಲರಾಗಿದ್ದ ಜಿ.ಆಯ್.ನಾಯ್ಕರ ಸಾವಿಗೆ ಹಿರಿಯ ವಕೀಲರು, ವಕೀಲರ ಸಂಘದ ಸದಸ್ಯರು,ಎ.ಪಿ.ಪಿ. ನ್ಯಾಯಾಧೀಶರು ಸೇರಿದಂತೆ ಅನೇಕರು ಮರುಗಿದ್ದಾರೆ.

ಹಿರಿಯ ವಕೀಲರಾಗಿದ್ದ ಜಿ.ಆಯ್.‌ ನಾಯ್ಕ ಜಾತ್ಯಾತೀತ ಜನತಾದಳದಲ್ಲಿ ಗುರುತಿಸಿಕೊಂಡಿದ್ದರು. ಇಂದು ಬೆಳಿಗ್ಗೆ ಹಳಿಯಾಳದಿಂದ ಹುಟ್ಟೂರು ಸಿದ್ಧಾಪುರಕ್ಕೆ ಬಂದಿದ್ದ ಅವರು ಖಾಸಗಿ ಕೆಲಸದ ಕಾರಣಕ್ಕೆ ತಮ್ಮ ಸಹೋದರನ ಮನೆಗೆ ತೆರಳಿದ್ದರು ಸಾಯಂಕಾಲ ೪ರ ಸುಮಾರಿಗೆ ಈ ಹೃದಯಸ್ತಂಬನದ ಸಾವು ಸಂಬಂಧಿಸಿದ್ದು ಅಂತಿಮ ವಿಧಿ ವಿಧಾನಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *