ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

Thumbnail image

ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಯಿತು. ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ಮತ್ತು ಚಿತ್ರರಂಗದ ಪ್ರಮುಖರ ವಿರುದ್ಧ ನಿಯಮ ಉಲ್ಲಂಘನೆ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ.

ಇನ್ನು ಕಾಂಗ್ರೆಸ್ ನಾಯಕರು ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದೇ ಬಿಡಿ ಬಿಡಿಯಾಗಿ ತೆರಳಿದ್ದರು ಎಂಬ ಅಪವಾದ ಕೂಡ ಕೇಳಿ ಬಂದಿದೆ. ಮಧ್ಯಾಹ್ನದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ನೀಡಿ ವಾಪಸ್ ಬೆಂಗಳೂರಿಗೆ ತೆರಳಿದ್ದರು. ಈ ಎಲ್ಲ ಕಾರಣಗಳು ಮೊದಲ ದಿನದ ಪಾದಯಾತ್ರೆಯ ಯಶಸ್ಸನ್ನು ಮಂಕಾಗಿಸಿತ್ತು. ದಿನ ಪೂರೈಸಿದ ಮೇಕೆದಾಟು ಪಾದಯಾತ್ರೆ

ಆದರೆ, ಎರಡನೇ ದಿನ ಎಲ್ಲವೂ ಅತ್ಯಂತ ವ್ಯವಸ್ಥಿತವಾಗಿ ನಡೆಯುವ ಮೂಲಕ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿರುವ ಪಾದಯಾತ್ರೆ ಕೇವಲ ರಾಜಕೀಯ ಆಶಯ ಈಡೇರಿಕೆಗೆ ಮಾತ್ರವಲ್ಲದೇ ಬೇರೆ ಬೇರೆ ವಿಧದಲ್ಲೂ ಜನಪ್ರಿಯತೆ ಗಳಿಸಿಕೊಳ್ಳಲಿದೆ ಎಂಬ ಸೂಚನೆ ಲಭಿಸಿತು.

ಮರಳೇಗವಿ ಮಠಕ್ಕೆ ಭೇಟಿ:

ನಿನ್ನೆ ಬೆಳಗ್ಗೆ ಪಾದಯಾತ್ರೆ ನಡೆಯುವ ಮಾರ್ಗದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕನಕಪುರದ ಮರಳೇಗವಿ ಮಠಕ್ಕೆ ಭೇಟಿ ನೀಡಿ, ಡಾ. ಮುಮ್ಮಡಿ ಶಿವರುದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಪಾದಯಾತ್ರೆ ಯಶಸ್ಸಿಗೆ ಶ್ರೀಗಳು ಆಶೀರ್ವದಿಸಿದರು.

ವಿದ್ಯಾರ್ಥಿಗಳಿಗೆ ನೀರಿನ ಮಹತ್ವ ತಿಳಿಹೇಳಿದ ಡಿಕೆಶಿ..

ದೊಡ್ಡಾಲಹಳ್ಳಿ ಸಮೀಪದ ಕೃಷ್ಣಯ್ಯನದೊಡ್ಡಿಯಲ್ಲಿ ಶಾಲಾ ಮಕ್ಕಳು ಡಿಕೆ ಶಿವಕುಮಾರ್ ಅವರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು. ಮಕ್ಕಳ ಜೊತೆ ಕೆಲ ಕಾಲ ಸಮಯ ಕಳೆದ ಡಿಕೆ ಶಿವಕುಮಾರ್ ಅವರ ಜೊತೆ ಉಭಯಕುಶಲೋಪರಿ ನಡೆಸಿದರು.

ಪಾದಯಾತ್ರೆ ಸಂದರ್ಭದಲ್ಲಿ ಒಂದಿಷ್ಟು ವಿಶ್ರಾಂತಿಯನ್ನು ಸಹ ಈ ಮೂಲಕ ಪಡೆದ ಡಿಕೆ ಶಿವಕುಮಾರ್, ಮಕ್ಕಳ ಜೊತೆ ಬೆರೆತು ಅವರೊಂದಿಗೆ ವಿವಿಧ ವಿಚಾರಗಳ ಮಾಹಿತಿ ವಿನಿಮಯ ಮಾಡಿಕೊಂಡರು. ಕುಡಿಯುವ ನೀರಿನ ಮಹತ್ವವನ್ನು ಮಕ್ಕಳಿಗೆ ತಿಳಿ ಹೇಳಿದರು.

ಪರಿಸರ ರಕ್ಷಣೆ ಸಂದೇಶ:

ನಿನ್ನೆ ಬೆಳಗ್ಗೆ ಪಾದಯಾತ್ರೆ ಆರಂಭವಾದ ಸಂಗಮ ಸ್ಥಳದಿಂದ ಸಂಜೆವರೆಗಗೂ ರಸ್ತೆ ಉದ್ದಕ್ಕೂ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಪರಿಸರ ರಕ್ಷಣೆ ಸಂದೇಶ ಸಾರಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಗಮದಿಂದ ದೊಡ್ಡ ಆಲಹಳ್ಳಿವರೆಗೂ ರಸ್ತೆ ಉದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಸಂಗ್ರಹಿಸಿದ್ದಾರೆ.

ಎರಡು ಬಿಂದಿಗೆ ನೀರು ಹೊತ್ತ ಹುಸೇನ್:

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎ. ಹುಸೇನ್ ಅವರು ಮೇಕೆದಾಟು ಪಾದಯಾತ್ರೆ ನಿಮಿತ್ತ ಸಂಗಮದಿಂದ ಬೆಂಗಳೂರಿಗೆ ಎರಡು ಬಿಂದಿಗೆಗಳಲ್ಲಿ ಕಾವೇರಿ ನೀರು ತರುತ್ತಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಅವರು ಒಂದು ಉದ್ದನೆಯ ಬೆತ್ತದ ಕೋಲಿಗೆ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಿಂದಿಗೆಗಳನ್ನು ಕಟ್ಟಿಕೊಂಡು, ಅದರಲ್ಲಿ ಸಂಗಮ ಸ್ಥಳದಿಂದ ತುಂಬಿಸಿಕೊಂಡ ಕಾವೇರಿ ನೀರನ್ನು ತೆಗೆದುಕೊಂಡು ಬರುತ್ತಿದ್ದಾರೆ.

ಪಾದಯಾತ್ರೆಯಲ್ಲಿ ನಿರಂತರ ಎರಡು ಬಿಂದಿಗೆಗಳನ್ನು ಹೊತ್ತುಕೊಂಡು ಆಗಮಿಸುತ್ತಿರುವ ಇವರು ಹತ್ತು ದಿನದ ಪಾದಯಾತ್ರೆ ಉದ್ದಕ್ಕೂ ಈ ಬಿಂದಿಗೆಗಳನ್ನು ಹೊತ್ತುಕೊಂಡು ಸಾಗುವುದಾಗಿ ತಿಳಿಸಿದ್ದು, ಅಂತಿಮವಾಗಿ ಬೆಂಗಳೂರಿಗೆ ಆಗಮಿಸಿದ ನಂತರ ಅದನ್ನು ಏನು ಮಾಡಬೇಕೆಂದು ಪಕ್ಷ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

ಎರಡನೇ ದಿನದ ಪಾದಯಾತ್ರೆಯಲ್ಲಿ ಹಲವು ವಿಶೇಷತೆಗಳು ಜನರ ಗಮನ ಸೆಳೆದವು. ಇನ್ನೂ ಇಂದಿನ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಸಹ ಭಾಗವಹಿಸಲಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *