ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!

ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ!

ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ.

Youngsters_of_Siddi_community_at_a_training_session1

ಬೆಂಗಳೂರು: ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ.

ಈ ಯುವಕರಲ್ಲಿ ದಸ್ತ್ ಗೀರ್ ಸಿದ್ದಿ ಕೂಡಾ ಒಬ್ಬರು.  ಕಾರವಾರ ಸಮೀಪದ  ಗುಂಜಾವತಿ ಗ್ರಾಮದ ದಸ್ತಗೀರ್ ಅಬ್ದುಲ್ ಸಿದ್ದಿ ಹತ್ತನೇ ತರಗತಿ ಓದುತ್ತಿದ್ದಾಗಲೇ ಸೇನೆಗೆ ಸೇರುವ ಕನಸು ಕಂಡಿದ್ದರು.  ಪಡೆಗಳಿಗೆ ಆಯ್ಕೆಯಾಗಲು ವೇಗವಾಗಿ ಓಡಬೇಕು ಎಂದು ಯಾರೋ ಆತನಿಗೆ ಹೇಳಿದ್ರು. ಆದರೆ, ಅವರ ಹಳ್ಳಿಯ ಬಳಿ ಸರಿಯಾದ ಅಥ್ಲೆಟಿಕ್ ಟ್ರ್ಯಾಕ್ ಅಥವಾ ಮೈದಾನವಿಲ್ಲದ ಕಾರಣ, ತಮ್ಮ ಮನೆಯ ಸಮೀಪವಿರುವ ಕೆಲವು ಪೊದೆಗಳನ್ನು ತೆರವುಗೊಳಿಸಿ ಅಭ್ಯಾಸವನ್ನು ಪ್ರಾರಂಭಿಸಿದರು. ಕಾರವಾರದಲ್ಲಿ ಪ್ರಥಮ ಪಿಯು ಸೇರಿದಾಗಲೇ ಆತ ಅಥ್ಲೆಟಿಕ್ ಮೈದಾನಗಳನ್ನು ನೋಡಿದ್ದು, ಅಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದರು.

ಸಿದ್ದಿ ಸಮುದಾಯವ ಮೂಲತಃ ಆಗ್ನೇಯ ಆಫ್ರಿಕಾದವರು ಮತ್ತು ಶತಮಾನಗಳಿಂದ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ನೆಲೆಸಿದ್ದಾರೆ. ಅನೇಕ ಯುವಕರು ಮೊದಲ ತಲೆಮಾರಿನವರಾಗಿ ಶಾಲೆಗೆ ಹೋಗುತ್ತಿದ್ದರೆ, ಅವರ ಪೋಷಕರು ದಿನಗೂಲಿಗಳಾಗಿ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ. ಕಾಲೇಜ್ ಅವಧಿ ಮುಗಿದ ನಂತರ ತರಬೇತುದಾರ ಪ್ರಕಾಶ್ ರೇವಣಕರ್ ಕೆಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಕಾಲೇಜ್ ಮೈದಾನದಲ್ಲಿಯೇ ಓಡಿಸುತ್ತಿದ್ದರು. 

ಸುಮಾರು ಒಂದು ತಿಂಗಳ ಕಾಲ ಅಲ್ಲಿಯೇ ನಿಂತುಕೊಂಡು ತರಬೇತಿ ನೋಡುತ್ತಿದ್ದ ನನ್ನ ನ್ನು ನೋಡಿದ ತರಬೇತುದಾರರು ಒಂದು ದಿನ ನನ್ನ ಬಳಿಗೆ ಬಂದು ಕೇಳಿದಾಗ,  ನನಗೆ ಓಟದಲ್ಲಿ ಆಸಕ್ತಿ ಇರುವುದನ್ನು ತಿಳಿದು ತಂಡಕ್ಕೆ ಸೇರಿಸಿಕೊಂಡಿದ್ದಾಗಿ ದಸ್ತಗೀರ್ ಹೇಳಿದರು.

Image

ಪ್ರತಿಭಾವಂತ ಸಿದ್ದಿ ಹುಡುಗ ಹುಡುಗಿಯರನ್ನು ಗುರುತಿಸಲು ಇಲಾಖೆ ಆಯೋಜಿಸಿದ್ದ ಶಿಬಿರಕ್ಕೆ ಬಂದಿಳಿದಾಗ ದಸ್ತಗೀರ್ , ಕ್ರೀಡಾ ವೇದಿಕೆಗಾಗಿ ಹುಡುಕುತ್ತಿದ್ದರು, ಇಲಾಖೆಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 18 ವರ್ಷದೊಳಗಿನ 500 ಸಿದ್ದಿ ಸಮುದಾಯದ ಮಕ್ಕಳಿಗೆ 18 ವಿವಿಧ ಪರೀಕ್ಷೆಗಳನ್ನು ನಡೆಸಿತು. ಈ ಪೈಕಿ 100 ಮಂದಿ ಆಯ್ಕೆಯಾಗಿ, ನವೆಂಬರ್ ನಲ್ಲಿ ಒಂದು ತಿಂಗಳ ಕಾಲ ತರಬೇತಿ ನೀಡಲಾಗಿದೆ. ಇವರಲ್ಲಿ ಆಯ್ದ 52 ಮಂದಿಯನ್ನು ಬಾಕಿಂಗ್ಸ್, ಈಜು, ಅಥ್ಲೆಟಿಕ್ಸ್ ಮತ್ತಿತರ ಕ್ರೀಡೆಗಳಿಗೆ ತರಬೇತಿ ನೀಡಲು ಆಯ್ಕೆ ಮಾಡಲಾಗಿದೆ.

ಹೀಗೆ ಆಯ್ಕೆಗೊಂಡವರು ಬೆಂಗಳೂರಿನ ಚಿಕ್ಕಜಾಲ ಬಳಿಕ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ತಂಗಿದ್ದಾರೆ. ಅವರ ಸದೃಢ ದೇಹಕ್ಕಾಗಿ ವಿಶೇಷ ಡಯಟ್ ವೊಂದನ್ನು ಕ್ರೀಡಾ ಇಲಾಖೆ ವ್ಯವಸ್ಥೆ ಮಾಡಿದೆ. ಅವರಿಗೆ ಬೆಳಗ್ಗೆ ಉಪಹಾರದೊಂದಿಗೆ ಎರಡು ಮೊಟ್ಟೆ ಮತ್ತು ಎರಡು ಬಾಳೆಹಣ್ಣು ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಚಪಾತಿ, ಅನ್ನ, ಸಬ್ಜಿ ಮತ್ತು ಹಣ್ಣುಗಳನ್ನು ಕೊಡಲಾಗುತ್ತಿದೆ. ರಾತ್ರಿ ಊಟಕ್ಕೆ ಚಿಕ್ಕನ್ ಮತ್ತಿತರ ಪೌಷ್ಠಿಕಾಂಶ ಯುಕ್ತ ಆಹಾರ ಇರುತ್ತದೆ.

ನಾನು ನಮ್ಮ ಹಳ್ಳಿಯಲ್ಲಿದ್ದಾಗ ಇಂತಹ ಮಾಂಸಾಹಾರಿ ಊಟವನ್ನೇ ಮಾಡಿರಲಿಲ್ಲ , ಬೆಂಗಳೂರಿನಲ್ಲಿ ಇಂತಹ ಸ್ಥಳ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಇಲ್ಲಿ ನಮ್ಮ ಕನಸು ನನಸು ಮಾಡಿಕೊಳ್ಳಬಹುದು ಎಂದು ಬಾಕ್ಸಿಂಗ್ ಕಡೆಗೆ ಗಮನ ಹರಿಸಿರುವ   ಉಗ್ಗಿನಕೆರೆ ಗ್ರಾಮದ ಜೋಸೆಫ್ ಬಸ್ತ್ಯ ಸಿದ್ದಿ ಹೇಳಿದರು. ನಾನು ಈಜುವುದನ್ನು ಇಷ್ಟಪಡುತ್ತೇನೆ ಮತ್ತು 30 ಸೆಕೆಂಡುಗಳ ಕಾಲ ನನ್ನ ಉಸಿರನ್ನು ಹಿಡಿದಿಟ್ಟುಕೊಳ್ಳಬಲ್ಲೆ ಎಂದು ದಿನೇಶ್ ಶಂಕರ್ ಸಿದ್ದಿ ತಿಳಿಸಿದರು. 

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಸಿದ್ದಿ ಸಮುದಾಯ ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿಯೇ ವಾಸಿಸುತ್ತಿದೆ. ಅವರಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆಲ್ಲುವ ಸಾಮರ್ಥ್ಯವಿದೆ ಎಂದು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *