ಉ.ಪ್ರ.- ಬಿ.ಜೆ.ಪಿ.ಯಿಂದ ಸಮಾಜವಾದಿಗೆ ವಲಸೆ,ಬಿ.ಜೆ.ಪಿ. ಹಿಂದುಳಿದವರು,ದಲಿತರ ವಿರೋಧಿ ಎಂದ ಪರಿತ್ಯಕ್ತರು

ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Swami Prasad Maurya joins Samajwadi Party

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಮಾಜಿ ಸಚಿವ ಹಾಗೂ ರಾಜ್ಯದ ಪ್ರಮುಖ ಓಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಮತ್ತೊಬ್ಬ ಬಂಡಾಯ ಸಚಿವ ಧರಂ ಸಿಂಗ್ ಸೈನಿ ಅವರೊಂದಿಗೆ ಸಮಾಜವಾದಿ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಅಲ್ಲದೆ ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳ (ಸೋನೆಲಾಲ್) ಶಾಸಕ ಅಮರ್ ಸಿಂಗ್ ಚೌಧರಿ ಕೂಡ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಎಸ್‌ಪಿಗೆ ಸೇರ್ಪಡೆಗೊಂಡರು.

ಭಗವತಿ ಸಾಗರ್ (ಕಾನ್ಪುರದ ಬಿಲ್ಹೌರ್), ರೋಷನ್‌ಲಾಲ್ ವರ್ಮಾ (ಶಹಜಹಾನ್‌ಪುರದ ತಿಲ್ಹಾರ್), ವಿನಯ್ ಶಾಕ್ಯಾ (ಔರೈಯಾದ ಬಿಧುನಾ), ಬ್ರಿಜೇಶ್ ಪ್ರಜಾಪತಿ (ಬಹ್ರೈಚ್‌ನಲ್ಲಿ ತಿಂಡವಾರಿ) ಮತ್ತು ಮುಖೇಶ್ ವರ್ಮಾ (ಫಿರೋಜಾಬಾದ್‌ನ ಶಿಕೋಹಾಬಾದ್) ಎಸ್‌ಪಿಗೆ ಸೇರ್ಪಡೆಯಾದ ಐವರು ಬಿಜೆಪಿ ಶಾಸಕರಾಗಿದ್ದಾರೆ.

ಚೌಧರಿ ಶೋಹರತ್‌ಗಢದ ಶಾಸಕರಾಗಿದ್ದು, ಇಲ್ಲಿನ ಕಚೇರಿಯಲ್ಲಿ ಅವರಿಗೆ ಎಸ್‌ಪಿ ಸದಸ್ಯತ್ವ ನೀಡಲಾಯಿತು. ರಾಜ್ಯ ಕಾರ್ಮಿಕ ಸಚಿವರಾಗಿದ್ದ ಮೌರ್ಯ ಅವರ ರಾಜೀನಾಮೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರಿ ಆಘಾತವನ್ನುಂಟು ಮಾಡಿದೆ. 

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳ ಚುನಾವಣೆ ನಡೆಯಲಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *