ಉ.ಪ್ರ.- ಬಿ.ಜೆ.ಪಿ.ಯಿಂದ ಸಮಾಜವಾದಿಗೆ ವಲಸೆ,ಬಿ.ಜೆ.ಪಿ. ಹಿಂದುಳಿದವರು,ದಲಿತರ ವಿರೋಧಿ ಎಂದ ಪರಿತ್ಯಕ್ತರು

ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Swami Prasad Maurya joins Samajwadi Party

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಮಾಜಿ ಸಚಿವ ಹಾಗೂ ರಾಜ್ಯದ ಪ್ರಮುಖ ಓಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಮತ್ತೊಬ್ಬ ಬಂಡಾಯ ಸಚಿವ ಧರಂ ಸಿಂಗ್ ಸೈನಿ ಅವರೊಂದಿಗೆ ಸಮಾಜವಾದಿ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಅಲ್ಲದೆ ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳ (ಸೋನೆಲಾಲ್) ಶಾಸಕ ಅಮರ್ ಸಿಂಗ್ ಚೌಧರಿ ಕೂಡ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಎಸ್‌ಪಿಗೆ ಸೇರ್ಪಡೆಗೊಂಡರು.

ಭಗವತಿ ಸಾಗರ್ (ಕಾನ್ಪುರದ ಬಿಲ್ಹೌರ್), ರೋಷನ್‌ಲಾಲ್ ವರ್ಮಾ (ಶಹಜಹಾನ್‌ಪುರದ ತಿಲ್ಹಾರ್), ವಿನಯ್ ಶಾಕ್ಯಾ (ಔರೈಯಾದ ಬಿಧುನಾ), ಬ್ರಿಜೇಶ್ ಪ್ರಜಾಪತಿ (ಬಹ್ರೈಚ್‌ನಲ್ಲಿ ತಿಂಡವಾರಿ) ಮತ್ತು ಮುಖೇಶ್ ವರ್ಮಾ (ಫಿರೋಜಾಬಾದ್‌ನ ಶಿಕೋಹಾಬಾದ್) ಎಸ್‌ಪಿಗೆ ಸೇರ್ಪಡೆಯಾದ ಐವರು ಬಿಜೆಪಿ ಶಾಸಕರಾಗಿದ್ದಾರೆ.

ಚೌಧರಿ ಶೋಹರತ್‌ಗಢದ ಶಾಸಕರಾಗಿದ್ದು, ಇಲ್ಲಿನ ಕಚೇರಿಯಲ್ಲಿ ಅವರಿಗೆ ಎಸ್‌ಪಿ ಸದಸ್ಯತ್ವ ನೀಡಲಾಯಿತು. ರಾಜ್ಯ ಕಾರ್ಮಿಕ ಸಚಿವರಾಗಿದ್ದ ಮೌರ್ಯ ಅವರ ರಾಜೀನಾಮೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರಿ ಆಘಾತವನ್ನುಂಟು ಮಾಡಿದೆ. 

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳ ಚುನಾವಣೆ ನಡೆಯಲಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *