ಚುನಾವಣೆ ೨೦೨೩- ಜೆ.ಡಿ.ಎಸ್.‌ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾ ಜೆಡಿಎಸ್?:​ ಯಾರಿಗಿಲ್ಲ ಟಿಕೆಟ್​?

ಮುಂದಿನ ಚುನಾವಣೆಗೆ ಜೆಡಿಎಸ್​ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿ ಇದೆ. ಆದರೆ, ಕೋವಿಡ್ ಹೆಚ್ಚಳದಿಂದ ಸಭೆ ಸಮಾರಂಭ ನಡೆಸುವುದಕ್ಕೆ ನಿರ್ಬಂಧ ಇರುವ ಕಾರಣ ಮತ್ತು ಅಭ್ಯರ್ಥಿಗಳ ಆಯ್ಕೆ ಮಾಡುವ ಕಸರತ್ತು ಅಂತಿಮ ಹಂತದಲ್ಲಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ..

ಬೆಂಗಳೂರು : 2023ಕ್ಕೆ 123 ಕ್ಷೇತ್ರಗಳಲ್ಲಿ ಜಾತ್ಯಾತೀತ ಜನತಾದಳ ಬಾವುಟ ಹಾರಬೇಕು. ಯಾರ ಹಂಗೂ ಇಲ್ಲದ ಪೂರ್ಣ ಜಾತ್ಯಾತೀತ ಜನತಾ ದಳ ಪಟ್ಟಕ್ಕೇರಬೇಕು. ಇದು ಜೆಡಿಎಸ್‍ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕನಸು. ಇದು ಕೇವಲ ಕನಸಷ್ಟೇ ಅಲ್ಲ, ಕರ್ನಾಟಕವನ್ನು ಸಮಗ್ರವಾಗಿ ಸಮೃದ್ಧಗೊಳಿಸುವ ಮಹಾ ಸಂಕಲ್ಪ ಕೂಡ ಹೌದು.

2023ರ ಸಾರ್ವತ್ರಿಕ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಪಕ್ಷ ಚುನಾವಣಾ ತಯಾರಿ ಮಾಡಿಕೊಳ್ಳುತ್ತಿದೆ. ಮುಂದಿನ ಚುನಾವಣೆಯಲ್ಲಿ 123 ಕ್ಷೇತ್ರಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿಯಲು ಈಗಾಗಲೇ ರೂಪುರೇಷೆ ಸಿದ್ಧಪಡಿಸಿರುವ ಜೆಡಿಎಸ್‍ ವರಿಷ್ಠರು, ಸಂಕ್ರಾಂತಿ ಹಬ್ಬಕ್ಕೆ 110 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿದ್ದರು. ಆದರೆ, ಮೊದಲ ಪಟ್ಟಿ ಬಿಡುಗಡೆ ಮಾಡುವುದು ವಿಳಂಬವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿದೆ. ಆದರೆ, ಕೋವಿಡ್ ಹೆಚ್ಚಳದಿಂದ ಸಭೆ, ಸಮಾರಂಭ ನಡೆಸುವುದಕ್ಕೆ ನಿರ್ಬಂಧವಿರುವ ಕಾರಣ ಮತ್ತು ಅಭ್ಯರ್ಥಿಗಳ ಆಯ್ಕೆ ಮಾಡುವ ಕಸರತ್ತು ಅಂತಿಮ ಹಂತದಲ್ಲಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಲು ವರಿಷ್ಠರು ಚಿಂತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಮಿಷನ್ 123 ಹೆಸರಿನಲ್ಲಿ ಚುನಾವಣಾ ತಂತ್ರಗಾರಿಕೆ ಯೋಜನೆಯ ನೀಲಿ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ಜನರ ಸಮಸ್ಯೆಗಳು, ಅದಕ್ಕೆ ಇರುವ ಪರಿಹಾರ, ದೇವೇಗೌಡರು ಸಿಎಂ ಹಾಗೂ ಪ್ರಧಾನಿಯಾಗಿದ್ದ ವೇಳೆ ಜಾರಿಗೆ ತಂದಿದ್ದ ಯೋಜನೆಗಳು.

ಜೆಡಿಎಸ್ ಮೈತ್ರಿ ಸರ್ಕಾರಗಳ ವೇಳೆ ಜಾರಿಗೆ ತಂದ ಯೋಜನೆಗಳು, ಅದರ ಜೊತೆಗೆ ಕೇಂದ್ರ ಸರ್ಕಾರಗಳಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ಪ್ರಾದೇಶಿಕ ಪಕ್ಷದ ಅಸ್ಮಿತೆ, ಅಗತ್ಯತೆ ಮತ್ತು ಅನಿವಾರ್ಯತೆಗಳ ಕುರಿತು ಸಂಭಾವ್ಯ ಅಭ್ಯರ್ಥಿಗಳಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡುವುದು ಮತ್ತು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಟ್ಟು ಮತದಾರರನ್ನು ಸೆಳೆಯುವ ಕುರಿತು ಜೆಡಿಎಸ್ ಪೂರ್ವ ತಯಾರಿ ಮಾಡಿಕೊಂಡಿದೆ.

ಬಿಡದಿಯ ತೋಟದ ಮನೆಯಲ್ಲಿ ಕೆಲ ತಿಂಗಳ ಹಿಂದೆ ನಡೆದ ‘ಜನತಾ ಪರ್ವ 1.0’, ‘ಮಿಷನ್ -123’ ಕಾರ್ಯಾಗಾರದಲ್ಲಿ ಪ್ರಚಲಿತ ರಾಜಕೀಯ ಸನ್ನಿವೇಶದ ಕುರಿತು ಮಾತನಾಡುತ್ತಲೇ ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಪಕ್ಷದ ಅಭ್ಯರ್ಥಿಗಳಿಗೆ ಗುರಿ ನಿಗದಿಪಡಿಸಿ, ಗೆಲುವಿನ ದಾರಿಯನ್ನೂ ತೋರಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲುವು ಸುಲಭವಲ್ಲ. ಹಾಗಂತಾ, ಸುಮ್ಮನಿರುವುದು ಕೂಡ ಸಾಧ್ಯವಿಲ್ಲ ಎನ್ನುತ್ತಲೇ ನಾಯಕರಿಗೆ ದಿಕ್ಸೂಚಿ ನಿಗದಿ ಮಾಡಿ, ಕೆಲ ಎಚ್ಚರಿಕೆಯ ಮಾತುಗಳು ಹಾಗೂ ವಾಸ್ತವ ಸಂಗತಿಗಳನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ.

ಮೂಲಗಳ ಪ್ರಕಾರ, ಜೆಡಿಎಸ್​​ನ ಹಾಲಿ ಮತ್ತು ಮಾಜಿ ಶಾಸಕರ ಪೈಕಿ 10 ರಿಂದ 15 ಮಂದಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಿ ಶಾಸಕರ ಕ್ಷೇತ್ರಗಳಿಗೂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆಯೇ? ಅಥವಾ ಇಲ್ಲವೇ ಯಾರಿಗೆಲ್ಲಾ ಟಿಕೆಟ್ ಕೈ ತಪ್ಪಲಿದೆ ಎಂಬುದು ಮೊದಲ ಪಟ್ಟಿ ಬಿಡುಗಡೆಗೊಂಡ ನಂತರವಷ್ಟೇ ಸ್ಪಷ್ಟವಾಗಲಿದೆ.

ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ತುಮಕೂರು ಗುಬ್ಬಿ ಶಾಸಕ ಶ್ರೀನಿವಾಸ್ ( ವಾಸು), ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಸೇರಿದಂತೆ ಹಲವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಡೆ ಒಲವು ತೋರಿದ್ದಾರೆ. ಈಗಾಗಲೇ ಮಾಜಿ ಶಾಸಕರಾದ ಕೋನರೆಡ್ಡಿ, ಸಿ.ಆರ್. ಮನೋಹರ್ ಕಾಂಗ್ರೆಸ್‌ಗೆ ಸೇರಿದ್ದಾರೆ.

ಪರಿಷತ್‌ನ ಮಾಜಿ ಸದಸ್ಯರಾದ ಸಂದೇಶ್ ನಾಗರಾಜ್, ಕಾಂತರಾಜ್ ಕಾಂಗ್ರೆಸ್ ಸೇರುವ ಸಿದ್ದತೆಯಲ್ಲಿದ್ದಾರೆ. ಇನ್ನೂ ಕೆಲವು ಜೆಡಿಎಸ್‍ ಮಾಜಿ ಶಾಸಕರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿರುವ ಜೆಡಿಎಸ್‍ ವರಿಷ್ಠರು ತಮ್ಮದೇ ಆದ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *