ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿ

ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

File photo

ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. 

ಕಾರವಾರ ಜೆಎಂಎಫ್‌ಸಿ ನ್ಯಾಯಾಲಯವು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಹರಾಜಿಗೆ ಸಮಯ ನಿಗದಿಪಡಿಸಿದೆ. ಈ ಮೂಲಕ ದಶಕಗಳಿಂದ ಗಾಳಿ ಮಳೆಗೆ ಕೊಚ್ಚಿ ಸಮುದ್ರಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿನ ನೂರಾರು ಮೆಟ್ರಿಕ್ ಟನ್ ಅದಿರನ್ನ ಕರಾವಳಿಯ ಕಾರವಾರ ಮತ್ತು ಬೇಲೇಕೇರಿ ಬಂದರಿನ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಅಂದಿನಿಂದ ಕಬ್ಬಿಣದ ಅದಿರು ಕಾರವಾರ ಹಾಗೂ ಬೇಲೇಕೇರಿ ಬಂದರು ಪ್ರದೇಶದಲ್ಲೇ ಉಳಿದುಕೊಂಡಿದ್ದು ಗಾಳಿ, ಮಳೆಗೆ ಇಲ್ಲಿನ ಸಮುದ್ರ ಸೇರುವಂತಾಗಿತ್ತು. ಬರೋಬ್ಬರಿ 12 ವರ್ಷಗಳ ಬಳಿಕ ಜೆಎಂಎಫ್‌ಸಿ ನ್ಯಾಯಾಲಯ ಕಾರವಾರ ಬಂದರಿನಲ್ಲಿ ದಾಸ್ತಾನಿರುವ  ಅದಿರನ್ನ ಹರಾಜು ಹಾಕಲು ಕಳೆದ ವರ್ಷ 2021ರಲ್ಲಿ ಆದೇಶ ನೀಡಿತ್ತು. ಅದರಂತೆ ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆಗಳನ್ನ ಮಾಡಿಕೊಂಡ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಅದಿರಿನ ಹರಾಜಿಗೆ ಲೈವ್ ಟೆಂಡರನ್ನು ಕರೆದಿದೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂದರು ಪ್ರದೇಶದಲ್ಲಿರುವ ಕಬ್ಬಿಣ ಅದಿರನ್ನು ಸಾಗಾಟ ಮಾಡುವಾಗ ಸಿಸಿಕ್ಯಾಮೆರಾ ಹಾಗೂ ಸಾಗಾಟ ಲಾರಿಗಳಿಗೆ ಜಿಪಿಎಸ್ ಅಳವಡಿಕೆಯಂತಹ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಅಕ್ರಮ ಅದಿರು ಸಾಗಾಟದ ಆರೋಪದ ಮೇಲೆ 2010ರ ಮಾರ್ಚ್‌ನಲ್ಲಿ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು, ಕಾರವಾರದ ಬೈತಖೋಲ್ ಬಂದರಿನಲ್ಲಿ 50 ಸಾವಿರಕ್ಕೂ ಅಧಿಕ ಮೆಟ್ರಿಕ್‌ ಟನ್ ಹಾಗೂ ಬೇಲೇಕೇರಿ ಬಂದರಿನಲ್ಲಿ 8 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನ ಜಪ್ತಿಪಡಿಸಿಕೊಂಡಿದ್ದರು. 

ಕಾರವಾರ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ 50 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಅದಿರಿನಲ್ಲಿ ಅರ್ಧದಷ್ಟು ಕಳುವಾಗಿದ್ದಲ್ಲದೇ, ಬಹುಪಾಲು ಮಳೆಯಲ್ಲಿ ಕೊಚ್ಚಿಹೋಗಿದೆ. ಹರಾಜಿಗಾಗಿ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಕೇವಲ 30 ಸಾವಿರ ಮೆಟ್ರಿಕ್ ಟನ್ ಅದಿರು ಲೆಕ್ಕಕ್ಕೆ ಸಿಕ್ಕಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಈಗ ಹರಾಜು ಹಾಕಲಾಗುತ್ತಿದೆ. 

ಸದ್ಯ ಕಾರವಾರ ಬಂದರಿನಲ್ಲಿದ್ದ ಅದಿರಿನ ಹರಾಜಿಗೆ ಮಾತ್ರ ನ್ಯಾಯಾಲಯ ಅನುಮತಿ ನೀಡಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಹರಾಜಿಗೆ ಅನುಮತಿ ನೀಡಿಲ್ಲ. ಈಗಾಗಲೇ ಬೇಲೇಕೇರಿ ಬಂದರಿನಲ್ಲಿನ ಅದಿರು ಪ್ರತಿವರ್ಷ ಮಳೆಯ ನೀರಿನೊಂದಿಗೆ ಹರಿದು ಸಮುದ್ರ ಸೇರುತ್ತಿದ್ದು ಅಲ್ಲಿನ ಜಲಚರಗಳಿಗೆ ಹಾನಿಯುಂಟು ಮಾಡುತ್ತಿದೆ. ಅಲ್ಲದೇ ಇದರಿಂದ ಮೀನುಗಾರರು ಸಹ ನಷ್ಟ ಅನುಭವಿಸುವಂತಾಗಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಸ್ಥಳಾಂತರಕ್ಕಾದರೂ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 

2010ರಲ್ಲಿ ಜಪ್ತಿ ಆದ 1.15 ಲಕ್ಷ ಮೆಟ್ರಿಕ್‌ ಟನ್‌ ಅದಿರನ್ನು ಕಾರವಾರ ಬಂದರಿನಲ್ಲಿ ದಾಸ್ತಾನು ಇಡಲಾಗಿತ್ತು. ಈ ಅದಿರನ್ನು ಒಂದು ತಿಂಗಳೊಳಗೆ ಹರಾಡು ಮಾಡಲಾಗುತ್ತಿದೆ. 

ಬಂದರಿನ ಮೇಲೆ ದಾಳಿ ನಡೆಸಿದ್ದ ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಅವರು, ಕಬ್ಬಿಣದ ಅದಿರನ್ನು ವಶಪಡಿಸಿಕೊಂಡಿದ್ದರು. ಬಳಿಕ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರಿಗೆ ಈ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದರು. ನಂತರ ಸಂತೋಷ್ ಹೆಗ್ಡೆಯವರು ಅಕ್ರಮ ಗಣಿಗಾರಿಕೆ ಕುರಿತ ತಮ್ಮ ವರದಿಯಲ್ಲಿ ಈ ಕುರಿತು ಮಾಹಿತಿ ಸೇರಿಸಿದ್ದರು.

ಈ ಪ್ರಕರಣದ ತನಿಖೆಯು ದೇಶಾದ್ಯಂತ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಣೆಯನ್ನು ನಿಷೇಧಿಸುವಂತೆ ಸುಪ್ರೀಂಕೋರ್ಟ್ ಆದೇಶಕ್ಕೂ ಕಾರಣವಾಗಿತ್ತು

ತಜ್ಞರ ಪ್ರಕಾರ, 2010 ರಲ್ಲಿ ವಶಪಡಿಸಿಕೊಂಡ ಅದಿರು ಪ್ರತಿ ಮೆಟ್ರಿಕ್ ಟನ್‌ಗೆ 5,000 ರೂ.ಗಳಷ್ಟಿತ್ತು ಎಂದು ತಿಳಿಸಿದ್ದಾರೆ. ಇದೇ ಮೊತ್ತ ಈಗಲೂ ಇದ್ದಿದ್ದರೆ ಒಟ್ಟು ವಶಪಡಿಸಿಕೊಂಡಿರುವ ಅದಿರಿನ ಮೌಲ್ಯ ರೂ.16 ಕೋಟಿ ಆಗಿರುತ್ತಿತ್ತು. ಆದರೆ, ಕಬ್ಬಿಣದ ಅದಿರಿನ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇದರ ಮೌಲ್ಯ ರೂ.4.8 ಕೋಟಿ ಆಗಿದೆ. 

ಬೇಲೆಕೇರಿಯಲ್ಲಿರುವ ಕಬ್ಬಿಣದ ಅದಿರಿನ ಮೌಲ್ಯ 120 ಕೋಟಿ ರೂಪಾಯಿಗಳಾಗಿದ್ದು, ಹಳೆಯ ಬೆಲೆಯೇ ಅನ್ವಯವಾಗುತ್ತಿದ್ದರೆ ಇದರ ಮೌಲ್ಯ 400 ಕೋಟಿ ರೂಪಾಯಿಗಳಾಗಿರುತ್ತಿತ್ತು ಎಂದು ತಿಳಿದುಬಂದಿದೆ.  (ಕಪ್ರಡಾ))

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *