ಕೋವಿಡ್-19: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ; ನೈಟ್ ಕರ್ಫ್ಯೂ ಮುಂದುವರಿಕೆ

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ.

Checking of vehicles underway in Bengaluru as weekend curfew is imposed

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ.

ಆದರೆ ಎಂದಿನಂತೆ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ವಾರದ ಏಳು ದಿನಗಳು ಮುಂದುವರೆಯಲಿದೆ. ಮತ್ತೆ ಹೋಟೆಲ್, ರೆಸ್ಟೋರೆಂಟ್ ಚಿತ್ರಮಂದಿರ, ಮಾಲ್ ಗಳ ಮೇಲೆ ವಿಧಿಸಿದ್ದ ಶೇಕಡಾ ೫೦ ರಷ್ಟು ಸಾಮಥ್ರ್ಯದ ಆದೇಶ ಮುಂದುವರೆಯಲಿದೆ. ಇದರಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ.

ಮದುವೆ, ಸಭೆ ಸಮಾರಂಭ,ಜಾತ್ರೆ, ಮೆರವಣಿಗೆ, ಪ್ರತಿಭಟನೆ ರ್ಯಾಲಿಗಳ ಮೇಲೆ ಈ ಹಿಂದಿನ ನಿರ್ಬಂಧವೇ ಮುಂದುವರೆಯಲಿದೆ.

ರಾಜ್ಯದಲ್ಲಿ 2.93,231 ಸಕ್ರೀಯ ಪ್ರಕರಣಗಳಿದ್ದು, 2.86 ಸಾವಿರ ಹೋಮ್ ಐಸೋಲೇಷನ್ ಇದ್ದಾರೆ. 5340 ಆಸ್ಪತ್ರೆಗೆ ದಾಖಲಾಗಿದ್ದಾರೆ. 340 ಐಸಿಯು ನಲ್ಲಿದ್ದಾರೆ. ಪೊಸಿಟಿವ್ ದರ ಶೇ 19% ರಷ್ಟಿದೆ.

ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ  ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ತಜ್ಞರ ಸಲಹೆ ಮೇರೆಗೆ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದ್ದು, ನೈಟ್ ಕರ್ಫ್ಯೂವನ್ನು ಪ್ರತಿದಿನ ಮುಂದುವರೆಸಲು ನಿರ್ಧರಿಸಲಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಶಾಲೆಗಳನ್ನು ತೆರೆಯಬಹುದು
ಇನ್ನು ಸೋಂಕು ಪ್ರಮಾಣ ಹೆಚ್ಚಿರುವ ಬೆಂಗಳೂರು ಹೊರತು ಪಡಿಸಿ ರಾಜ್ಯದಾದ್ಯಂತ ಶಾಲೆಗಳನ್ನು ತೆರೆಯಬಹುದು ಎಂದು ಹೇಳಲಾಗಿದ್ದು, ಕಡಿಮೆ ಪಾಸಿಟಿವ್ ಪ್ರಕರಣಗಳಿರುವ ಇತರೆ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

https://samajamukhi.net/2022/01/19/ac-devraj-puneet-cinema-inspiration/?fbclid=IwAR1r37CclkxkM9po9BfpN0Fmq4Sm7swKA

ತಜ್ಞರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ 2.5 ಗಂಟೆಗಳ ಕಾಲ ನಡೆದ ಸಭೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳಲು ನಿರ್ಧರಿಸಿತು. ಆದಾಗ್ಯೂ ಆಸ್ಪತ್ರೆ ದಾಖಲಾತಿ ಹೆಚ್ಚಾದರೆ ಮತ್ತೆ ವಾರಾಂತ್ಯದ ಕರ್ಫ್ಯೂ ಕುರಿತು ನಿರ್ಧರಿಸುವ ಸಾಧ್ಯತೆ ಇದೆ. 

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ತಜ್ಞರ ಸಲಹೆಗಳ ಪ್ರಕಾರ, ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವುದು ಶೇಕಡಾ ಐದಕ್ಕಿಂತ ಕಡಿಮೆ ಇದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು  ವಾರಾಂತ್ಯದ ಕರ್ಫ್ಯೂ ಹಿಂಪಡೆಯಲು ಸಿಎಂ ಅವರು ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ ಕೋವಿಡ್ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತವೆ, ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಹೆಚ್ಚಾದರೆ ಮಾತ್ರ ಮತ್ತೆ ವಾರಾಂತ್ಯದ ಕರ್ಫ್ಯೂ ಹೇರುವ ಕುರಿತು ಪರಿಶೀಲಿಸ ಬೇಕಾಗಬಹುದು ಎಂದು  ಅವರು ಹೇಳಿದರು.

ಇದೇ ವೇಳೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, 5 ವರ್ಷದಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಧನಾತ್ಮಕತೆಯ ಪ್ರಮಾಣ ಶೇ. ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ, ಹೆಚ್ಚಿನ ಜಿಲ್ಲೆಗಳು ಶೇಕಡಾ ಐದಕ್ಕಿಂತ ಕಡಿಮೆ ಹೊಂದಿವೆ. ಬೆಂಗಳೂರು ನಗರ ಶೇ.14.12 ರಷ್ಟಿದೆ ಎಂದು  ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *