appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

Puneet Rajkumar in James

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

ಇದೀಗ ಚಿತ್ರತಂಡ ಅವರ ಅಗಲುವಿಕೆಯ ನೋವಿನಲ್ಲಿ ಚಿತ್ರೀಕರಣ ಮುಗಿಸಿದೆ. ಚೇತನ್ ಕುಮಾರ್ ನಿರ್ದೇಶನದ ಕಿಶೋರ್ ಪತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಅವರ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ತಮ್ಮನಿಗೆ ಗೌರವ ಸೂಚಿಸಿದ್ದಾರೆ, ಅಲ್ಲದೆ ಭಾವನಾತ್ಮಕತೆಯನ್ನು ತೋರಿಸಿದ್ದಾರೆ.

ಪುನೀತ್ ಭೌತಿಕವಾಗಿ ಅಗಲಿದರೂ ಭಾವನಾತ್ಮಕವಾಗಿ ಎಲ್ಲರ ಹೃದಯದಲ್ಲಿದ್ದಾರೆ ಎಂದು ತೋರಿಸುವ ರೀತಿಯಲ್ಲಿ ಅವರ ಫೋಟೋದ ಮುಂದೆ ಚಿತ್ರತಂಡದವರೆಲ್ಲರೂ ಸೇರಿ ಚಿತ್ರೀಕರಣದ ಕೊನೆಯ ದಿನ ಕುಂಬಳ ಕಾಯಿ ಒಡೆದು ನಮನ ಸಲ್ಲಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​  ಮೂರು ತಿಂಗಳಾಗುತ್ತಾ ಬಂದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಕಡಿಮೆಯಾಗುತ್ತಿಲ್ಲ. ಅಪ್ಪು ನಿಧನದ ಸುದ್ದಿಯನ್ನು ಇಂದಿಗೂ ಯಾರೂ ನಂಬಲು ಸಾಧ್ಯವಾಗುತ್ತಿಲ್ಲ. ಪುನೀತ್ ಅವರನ್ನು ನೋಡಲು ಇಂದಿಗೂ ಸಮಾಧಿ ಬಳಿ ಪ್ರತಿ ದಿನ ಸಾವಿರ ಸಾವಿರ ಮಂದಿ ಬರುತ್ತಲೇ ಇದ್ದಾರೆ. 

ಜೇಮ್ಸ್ ಚಿತ್ರದ ಕೊನೆಯ ದಿನದ ಶೂಟಿಂಗ್‌ ಸೆಟ್‌ನಲ್ಲಿ ಶಿವರಾಜ್‌ಕುಮಾರ್ , ರಾಘವೇಂದ್ರ ರಾಜ್‌ಕುಮಾರ್, ರಾಘಣ್ಣ ಪುತ್ರ ಯುವ ರಾಜ್‌ಕುಮಾರ್, ರಾಮ್‌ಕುಮಾರ್ ಪುತ್ರ ಧೀರೇನ್ ಹಾಗೂ ಡಾ. ರಾಜ್ ಕುಟುಂಬದ ಕೆಲ ಆಪ್ತರು ಕೊನೆಯ ದಿನದ ಶೂಟಿಂಗ್ ಸೆಟ್‌ನಲ್ಲಿ ಇದ್ದರು. 

ಚಿತ್ರದಲ್ಲಿ ಪುನೀತ್ ಅವರ ಧ್ವನಿಯ ಡಬ್ಬಿಂಗ್ ಕೆಲಸ ಆಗಬೇಕಿದೆ. ನಟ ಡಾ. ಶಿವರಾಜ್ ಕುಮಾರ್ (Shivarajkumar)​ ಅವರಿಂದ ಅಪ್ಪುಗೆ ಕಂಠದಾನ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ಬಿಡುಗಡೆಯಾಗುವ ಸಾಧ್ಯತೆಯಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *