ಅಂಗೈಯಲ್ಲಿ ಉತ್ತರ ಕನ್ನಡ- ಪ್ರವಾಸಿಗರಿಗೆ ಸಿಗಲಿದೆ ಸಮಗ್ರ ಮಾಹಿತಿ…

ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್​ಸೈಟ್..

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ..

ಕಾರವಾರ(ಉತ್ತರಕನ್ನಡ) : ಕರಾವಳಿ ಜಿಲ್ಲೆ ಉತ್ತರಕನ್ನಡ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ಹತ್ತು ಹಲವು ಪ್ರವಾಸಿ ತಾಣಗಳು. ಆದರೆ, ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಿರಲಿಲ್ಲ. ಹೀಗಾಗಿ, ಈ ಸಮಸ್ಯೆಗೆ ಜಿಲ್ಲಾಡಳಿತ ಒಂದು ಪರಿಹಾರವನ್ನು ಕಂಡುಕೊಂಡಿದೆ.

ಉತ್ತರಕನ್ನಡ ಸಾಕಷ್ಟು ಪ್ರವಾಸಿ ತಾಣಗಳ ಆಗರವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಕರಾವಳಿಯಲ್ಲಿ ಓಂ, ಕುಡ್ಲೆ, ಟ್ಯಾಗೋರ್, ತೀಳಮಾತಿಯಂಥಹ ಕಡಲತೀರಗಳು, ಗೋಕರ್ಣ, ಮುರ್ಡೇಶ್ವರ, ಶಿರಸಿಯ ಮಾರಿಕಾಂಬೆಯ ದೇಗುಲದಂಥಹ ಧಾರ್ಮಿಕ ತಾಣಗಳು, ಟಿಬೇಟಿಯನ್ ಕಾಲೋನಿಯೆಂಬ ಸಂಸ್ಕೃತಿಯ ತಾಣ ಸೇರಿ ವಿಭಿನ್ನ ಸಮುದಾಯಗಳನ್ನು ಹೊಂದಿರುವ ಜಿಲ್ಲೆ ವಿವಿಧತೆಯಲ್ಲಿ ಏಕತೆ ಸಾರುತ್ತಿದೆ. ಆದರೆ, ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ತಾಣಗಳ ಕುರಿತು ಒಂದೆಡೆ ಸಂಪೂರ್ಣ ಮಾಹಿತಿ ಒದಗಿಸುವುದು ಇಷ್ಟು ವರ್ಷಗಳ ಕಾಲ ಸಾಧ್ಯವಾಗಿರಲಿಲ್ಲ.https://ac65fd70def5a68ee3ec7d2e60438ff6.safeframe.googlesyndication.com/safeframe/1-0-38/html/container.html

ನೂತನ ವೆಬ್​ಸೈಟ್ ​: ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೂತನ ಕ್ರಮಕ್ಕೆ ಮುಂದಾಗಿದ್ದಾರೆ. ದಾಂಡೇಲಿ, ಜೋಯಿಡಾದ ಅರಣ್ಯ ಪರಿಸರ ವೀಕ್ಷಿಸಿದವರು ಅನತಿ ದೂರದ ಕಾರವಾರ, ಹೊನ್ನಾವರ ಭಾಗದ ಪ್ರವಾಸಿ ತಾಣಗಳಿಗೂ ಭೇಟಿ ನೀಡುವಂತಾಗಬೇಕು. https://prod.suv.etvbharat.com/v2/smart_urls/61f3c2a971d60097bf96bf2a/embedplayer1?&

ಪ್ರವಾಸಿಗರ ಸಹಾಯಕ್ಕೆ ಮುಂದಾದ ಜಿಲ್ಲಾಡಳಿತ

ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ.

ವಾಸೋದ್ಯಮ ಇಲಾಖೆಯಡಿ ವೆಬ್​ಸೈಟ್ : ಈ ವೆಬ್‌ಸೈಟ್ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿದೆ. ಇದು ರೂಪುಗೊಳ್ಳುವಲ್ಲಿ ಮೂವರು ಯುವಕರ ತಂಡ ಶ್ರಮವಹಿಸಿದೆ. ಉರಗ ತಜ್ಞರಾದ ಓಂಕಾರ್ ಪೈ ವೆಬ್‌ಸೈಟ್‌ನಲ್ಲಿ ವೈಲ್ಡ್‌ಲೈಫ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರೆ, ಸಾತ್ವಿಕ್ ಭಟ್ ವೆಬ್‌ಸೈಟ್‌ ಡಿಸೈನ್ ಮಾಡಿದ್ದಾರೆ. ಗೋಪಿ ಜೋಲಿ ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದ ಅತ್ಯುತ್ತಮ ಫೋಟೋಗಳನ್ನು ನೀಡಿ ವೆಬ್‌ಸೈಟ್‌ನ ಇನ್ನಷ್ಟು ಅಂದಗೊಳಿಸಿದ್ದಾರೆ.

ವೆಬ್​ಸೈಟ್​ನೊಂದಿಗೆ ಈಗಾಗಲೇ ಜಿಲ್ಲೆಯ ಎಲ್ಲ ರೆಸಾರ್ಟ್ ಮಾಲೀಕರುಗಳಿಗೂ ಕಾರ್ಯಾಗಾರವನ್ನು ನಡೆಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕುರಿತು ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ವೆಬ್‌ಸೈಟ್ ಮೂಲಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳ ಭೇಟಿಗೆ ಅನುಕೂಲವಾಗುವಂತೆ ಮಾಡುವುದು ನಮ್ಮ ಗುರಿ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯ ಕಡಲತೀರಗಳಿಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ, ಪ್ರವಾಸಿಗರಿಗೆ ಅಕ್ಕಪಕ್ಕದ ಇತರೆ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ಸಮೀಪದ ಕೆಲವೇ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿರೋದು ಉತ್ತಮ ಬೆಳವಣಿಗೆ ಅಂತಾರೆ ಸ್ಥಳೀಯರು.

ಕೊರೊನಾ ಹೊಡೆತದಿಂದ ನಲುಗಿ ಹೋಗಿರುವ ಜಿಲ್ಲೆಯ ಪ್ರವಾಸೋದ್ಯಮವನ್ನು ತಾಂತ್ರಿಕತೆಯೊಂದಿಗೆ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿರೋದು ನಿಜಕ್ಕೂ ಉತ್ತಮ ಬೆಳವಣಿಗೆಯಾಗಿದೆ. (etbk)

ಹೆಚ್ಚಿನ ಮಾಹಿತಿ,ವಿವರಣೆ,ಅಧ್ಯಯನಕ್ಕೆ visit-samajamukhi.net,samaajamukhi youtube channel

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *