ಎತ್ತರಕ್ಕೆ ಏರಿದವನ ಹೆಸರು ಸಚೇತ

Thumbnail image

ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್​

ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ 13 ವರ್ಷದ ಬಾಲಕನೋರ್ವ ಅಡಿಕೆ ಮರ ಏರಿ ಕೊನೆ ಕೊಯ್ಯುತ್ತಾನೆ.

ಕಾರವಾರ: ಆತ 13 ವರ್ಷದ ಪುಟ್ಟ ಬಾಲಕ.‌ ಕೈಯಲ್ಲಿ ಬ್ಯಾಟ್ ಬಾಲ್ ಹಿಡಿದು ಆಟ ಆಡಬೇಕಾದ ಪೋರ, ಇದೀಗ ಸಾಹಸಿ ಕೆಲಸವೊಂದರಲ್ಲಿ ತೊಡಗಿಕೊಳ್ಳುತ್ತಿದ್ದಾನೆ. ಶಾಲಾ ರಜಾ ಅವಧಿಗಳಲ್ಲಿ ಮನೆಯವರ ನೆರವಿಗೆ ನಿಲ್ಲುವ ಈ ಬಾಲಕ ಇದೀಗ ಎಲ್ಲರ ಗಮನ ಸೆಳೆದಿದ್ದಾನೆ.

ಒಂದು ಕೈಯಲ್ಲಿ ಕತ್ತಿ ಹಿಡಿದು ಮತ್ತೊಂದು ಕೈಯಲ್ಲಿ ಹಗ್ಗ ಹಿಡಿದು ತೋಟದಲ್ಲಿರುವ ಮೂವತ್ತು ಅಡಿಗೂ ಎತ್ತರದ ಅಡಕೆ ಮರ ಏರಿ ಕೊನೆ ಕೊಯ್ಯುತ್ತಾ ಒಂದು ಮರದಿಂದ ಮತ್ತೊಂದು ಮರಕ್ಕೆ ದಾಟುವ ಈ ಬಾಲಕನ ಹೆಸರು ಸಚೇತ ದಿವಸ್ಪತಿ ಹೆಗಡೆ. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಈತ, ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದನ್ನು ರೂಢಿ ಮಾಡಿಕೊಂಡಿದ್ದಾನೆ.

6ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಸದ್ಯ ಕೊರೊನಾ, ಲಾಕ್ ಡೌನ್ ಹೀಗೆ ಹತ್ತು ಹಲವು ಸಮಸ್ಯೆಗಳಿಂದಾಗಿ ಮಲೆನಾಡಿನಲ್ಲಿ ಅಡಕೆ ಕೊನೆ ಕೊಯ್ಯುವವರಿಲ್ಲದೇ ಅಡಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಹೀಗಿರುವಾಗ ತಮ್ಮ ತೋಟದಲ್ಲಿ ಈ ಹಿಂದೆ ಕೊನೆಗೌಡರು ಮರ ಏರುವುದನ್ನು ನೋಡಿ ಅವರಿಂದ ಒಂದಿಷ್ಟು ತರಬೇತಿ ಪಡೆದಿದ್ದ ಸಚೇತ, ಇದೀಗ ತಾನೇ ಸ್ವತಃ ಅಡಿಕೆ ಮರ ಏರುತ್ತಿದ್ದಾನೆ.

ಇದಕ್ಕಾಗಿ ಕೊನೆ ಕೊಯ್ಲಿಗೆ ಉಪಯೋಗಿಸುವ ವಸ್ತುಗಳನ್ನು ಸಿದ್ಧಪಡಿಸಿಕೊಂಡಿರುವ ಬಾಲಕ, 20 ರಿಂದ 50 ಅಡಿ ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೂಡ ಬೆಂಬಲವಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.

ಯಲ್ಲಾಪುರದ ಜಾಜಿ ಮನೆಯ ದಿವಸ್ಪತಿ ಹೆಗಡೆರವರಿಗೆ ಮೂರು ಎಕರೆ ಅಡಕೆ ತೋಟವಿದೆ. ಜನವರಿ ಕೊನೆಯ ತಿಂಗಳಲ್ಲಿ ಫಸಲು ಬಲಿತು ಕೊಯ್ಲಿಗೆ ಬಂದಿತ್ತಾದರೂ ಅಡಿಕೆ ಕೊಯ್ಯಲು ಜನರಿಲ್ಲದ ಪರಿಸ್ಥಿತಿ ಎದುರಾಗುತಿತ್ತು. ಅಲ್ಲದೆ ಒಬ್ಬ ವ್ಯಕ್ತಿ 3 ಸಾವಿರ ದಿನಕ್ಕೆ ಕೂಲಿ ತೆಗೆದುಕೊಳ್ಳುತ್ತಾರೆ.

ದುಬಾರಿ ಕೂಲಿ ಕೊಟ್ಟರೂ ಕೊನೆ ಕೊಯ್ಯಲು ಕೆಲಸದವರು ಸಿಗುವುದಿಲ್ಲ. ಹೀಗಾಗಿ ಪ್ರತಿ ವರ್ಷ ಕೆಲಸದವರಿಗಾಗಿ ಕಾದು ನಷ್ಟ ಅನುಭವಿಸಬೇಕಾದ ಸ್ಥಿತಿ ಇತ್ತು. ಹೀಗಿರುವಾಗ ಮಗ ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಯುವುದಾಗಿ ಕೊಯ್ಲು ಮಾಡಲು ಶುರು ಮಾಡಿದ್ದ. ಇದೀಗ ಒಂದಿಷ್ಟು ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕಾಯಕ ನಮಗೂ ಖುಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಆತನ ತಾಯಿ ಶ್ವೇತಾ ಹೆಗಡೆ.

ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಇಂದಿನ ತಲೆಮಾರಿನ ಜನ ಕೃಷಿಯಿಂದ ವಿಮುಖರಾಗುತ್ತಿರುವಾಗ ಈ ಪುಟ್ಟ ಬಾಲಕ ಕೃಷಿಯ ಬಗ್ಗೆ ಆಸಕ್ಕಿ ತೋರಿಸಿ ಕ್ಲಿಷ್ಟಕರವಾದ ಕೆಲಸ ಮಾಡುತ್ತಿರುವುದು ನಿಜವಾಗಿಯೂ ಶ್ಲಾಘನೀಯ. ಕೈ ಕೆಸರಾದರೇ ಬಾಯಿ ಮೊಸರು ಎನ್ನುವಂತೆ ಕಷ್ಟ ಪಟ್ಟರೇ ಎಂತದ್ದನ್ನು ಸಾಧಿಸಬಹುದು ಎನ್ನುವುದಕ್ಕೆ ಈ ಬಾಲಕ ಮಾದರಿಯಾಗಿದ್ದಾನೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *