ಎತ್ತರಕ್ಕೆ ಏರಿದವನ ಹೆಸರು ಸಚೇತ

Thumbnail image

ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್​

ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ 13 ವರ್ಷದ ಬಾಲಕನೋರ್ವ ಅಡಿಕೆ ಮರ ಏರಿ ಕೊನೆ ಕೊಯ್ಯುತ್ತಾನೆ.

ಕಾರವಾರ: ಆತ 13 ವರ್ಷದ ಪುಟ್ಟ ಬಾಲಕ.‌ ಕೈಯಲ್ಲಿ ಬ್ಯಾಟ್ ಬಾಲ್ ಹಿಡಿದು ಆಟ ಆಡಬೇಕಾದ ಪೋರ, ಇದೀಗ ಸಾಹಸಿ ಕೆಲಸವೊಂದರಲ್ಲಿ ತೊಡಗಿಕೊಳ್ಳುತ್ತಿದ್ದಾನೆ. ಶಾಲಾ ರಜಾ ಅವಧಿಗಳಲ್ಲಿ ಮನೆಯವರ ನೆರವಿಗೆ ನಿಲ್ಲುವ ಈ ಬಾಲಕ ಇದೀಗ ಎಲ್ಲರ ಗಮನ ಸೆಳೆದಿದ್ದಾನೆ.

ಒಂದು ಕೈಯಲ್ಲಿ ಕತ್ತಿ ಹಿಡಿದು ಮತ್ತೊಂದು ಕೈಯಲ್ಲಿ ಹಗ್ಗ ಹಿಡಿದು ತೋಟದಲ್ಲಿರುವ ಮೂವತ್ತು ಅಡಿಗೂ ಎತ್ತರದ ಅಡಕೆ ಮರ ಏರಿ ಕೊನೆ ಕೊಯ್ಯುತ್ತಾ ಒಂದು ಮರದಿಂದ ಮತ್ತೊಂದು ಮರಕ್ಕೆ ದಾಟುವ ಈ ಬಾಲಕನ ಹೆಸರು ಸಚೇತ ದಿವಸ್ಪತಿ ಹೆಗಡೆ. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಈತ, ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದನ್ನು ರೂಢಿ ಮಾಡಿಕೊಂಡಿದ್ದಾನೆ.

6ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಸದ್ಯ ಕೊರೊನಾ, ಲಾಕ್ ಡೌನ್ ಹೀಗೆ ಹತ್ತು ಹಲವು ಸಮಸ್ಯೆಗಳಿಂದಾಗಿ ಮಲೆನಾಡಿನಲ್ಲಿ ಅಡಕೆ ಕೊನೆ ಕೊಯ್ಯುವವರಿಲ್ಲದೇ ಅಡಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಹೀಗಿರುವಾಗ ತಮ್ಮ ತೋಟದಲ್ಲಿ ಈ ಹಿಂದೆ ಕೊನೆಗೌಡರು ಮರ ಏರುವುದನ್ನು ನೋಡಿ ಅವರಿಂದ ಒಂದಿಷ್ಟು ತರಬೇತಿ ಪಡೆದಿದ್ದ ಸಚೇತ, ಇದೀಗ ತಾನೇ ಸ್ವತಃ ಅಡಿಕೆ ಮರ ಏರುತ್ತಿದ್ದಾನೆ.

ಇದಕ್ಕಾಗಿ ಕೊನೆ ಕೊಯ್ಲಿಗೆ ಉಪಯೋಗಿಸುವ ವಸ್ತುಗಳನ್ನು ಸಿದ್ಧಪಡಿಸಿಕೊಂಡಿರುವ ಬಾಲಕ, 20 ರಿಂದ 50 ಅಡಿ ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೂಡ ಬೆಂಬಲವಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.

ಯಲ್ಲಾಪುರದ ಜಾಜಿ ಮನೆಯ ದಿವಸ್ಪತಿ ಹೆಗಡೆರವರಿಗೆ ಮೂರು ಎಕರೆ ಅಡಕೆ ತೋಟವಿದೆ. ಜನವರಿ ಕೊನೆಯ ತಿಂಗಳಲ್ಲಿ ಫಸಲು ಬಲಿತು ಕೊಯ್ಲಿಗೆ ಬಂದಿತ್ತಾದರೂ ಅಡಿಕೆ ಕೊಯ್ಯಲು ಜನರಿಲ್ಲದ ಪರಿಸ್ಥಿತಿ ಎದುರಾಗುತಿತ್ತು. ಅಲ್ಲದೆ ಒಬ್ಬ ವ್ಯಕ್ತಿ 3 ಸಾವಿರ ದಿನಕ್ಕೆ ಕೂಲಿ ತೆಗೆದುಕೊಳ್ಳುತ್ತಾರೆ.

ದುಬಾರಿ ಕೂಲಿ ಕೊಟ್ಟರೂ ಕೊನೆ ಕೊಯ್ಯಲು ಕೆಲಸದವರು ಸಿಗುವುದಿಲ್ಲ. ಹೀಗಾಗಿ ಪ್ರತಿ ವರ್ಷ ಕೆಲಸದವರಿಗಾಗಿ ಕಾದು ನಷ್ಟ ಅನುಭವಿಸಬೇಕಾದ ಸ್ಥಿತಿ ಇತ್ತು. ಹೀಗಿರುವಾಗ ಮಗ ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಯುವುದಾಗಿ ಕೊಯ್ಲು ಮಾಡಲು ಶುರು ಮಾಡಿದ್ದ. ಇದೀಗ ಒಂದಿಷ್ಟು ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕಾಯಕ ನಮಗೂ ಖುಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಆತನ ತಾಯಿ ಶ್ವೇತಾ ಹೆಗಡೆ.

ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಕೊನೆ ಕೊಯ್ಯುವ ಕಾಯಕದಲ್ಲಿ 13 ವರ್ಷದ ಸಚೇತ ಹೆಗಡೆ

ಇಂದಿನ ತಲೆಮಾರಿನ ಜನ ಕೃಷಿಯಿಂದ ವಿಮುಖರಾಗುತ್ತಿರುವಾಗ ಈ ಪುಟ್ಟ ಬಾಲಕ ಕೃಷಿಯ ಬಗ್ಗೆ ಆಸಕ್ಕಿ ತೋರಿಸಿ ಕ್ಲಿಷ್ಟಕರವಾದ ಕೆಲಸ ಮಾಡುತ್ತಿರುವುದು ನಿಜವಾಗಿಯೂ ಶ್ಲಾಘನೀಯ. ಕೈ ಕೆಸರಾದರೇ ಬಾಯಿ ಮೊಸರು ಎನ್ನುವಂತೆ ಕಷ್ಟ ಪಟ್ಟರೇ ಎಂತದ್ದನ್ನು ಸಾಧಿಸಬಹುದು ಎನ್ನುವುದಕ್ಕೆ ಈ ಬಾಲಕ ಮಾದರಿಯಾಗಿದ್ದಾನೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *