ಹಾಲಪ್ಪ, ಬೇಳೂರು ಧರ್ಮಸ್ಥಳ ದೇವರಾಣೆ ಪ್ರಸಂಗ!

ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ!

ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ.

Haratalu_Halappa_and_Beluru_Gopalakrishna1

ಶಿವಮೊಗ್ಗ: ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ 2011ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಎಚ್ ಡಿ ಕುಮಾರಸ್ವಾಮಿ ಧರ್ಮಸ್ಥಳದ ದೇವಾಲಯ ಮುಂಭಾಗ ಆಣೆ -ಪ್ರಮಾಣ ಮಾಡುವುದಾಗಿ ಹೇಳಿದ್ದರು. ಆದರೆ, ಯಡಿಯೂರಪ್ಪ ಅವರಿಗೆ ಬೇಡ ಎಂದು ಹೈಕಮಾಂಡ್ ಹೇಳಿದ್ದರಿಂದ ಅದು ನಡೆಯಲಿಲ್ಲ. ಈ ಬಾರಿ ಮಾಡಿ ಶಾಸಕರು ಆಣೆ-ಪ್ರಮಾಣದ ಮಾತುಗಳನ್ನಾಡಿದ್ದಾರೆ.

ಹೊಸನಗರದಲ್ಲಿ ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋಪಾಲಕೃಷ್ಣ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮರಳು ಲಾರಿ ಮಾಲೀಕರಿಂದ ಹಾಲಪ್ಪ ಕಮೀಷನ್ ಪಡೆಯುತ್ತಿದ್ದಾರೆ . ಒಂದು ವೇಳೆ ಕಮಿಷನ್ ನೀಡದಿದ್ದರೆ ಅಕ್ರಮವಾಗಿ ಮರಳು ಹೊರತೆಗೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.

 

ಒಂದು ವೇಳೆ ಹಾಲಪ್ಪ ಪ್ರಾಮಾಣಿಕರಾಗಿದ್ದು, ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದರೆ ದೇವರ ಮುಂದೆ ಬಂದು ಪ್ರಮಾಣ ಮಾಡಲಿ. ನನ್ನ ವಿರುದ್ಧ ಹೇಳಿಕೆ ನೀಡುವಂತೆ ಲಾರಿ ಮಾಲೀಕರಿಗೆ ಹಾಲಪ್ಪ ಎತ್ತುಕಟ್ಟುತ್ತಿದ್ದಾರೆ. ಅದರ ಬದಲು ಹಾಲಪ್ಪ ಸ್ವಯಂ ಪ್ರೇರಿತರಾಗಿ ದೇವರ ಮುಂದೆ ಬರಲಿ, ಹಾಲಪ್ಪ ಕಮೀಷನ್ ಪಡೆದಿರುವುದಾಗಿ ನಾನು ಕೂಡಾ ಪ್ರಮಾಣ ಮಾಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದರು.

ಗೋಪಾಲಕೃಷ್ಣ ಹೇಳಿಕೆಗೆ ಬುಧವಾರ ತಿರುಗೇಟು ನೀಡಿದ ಹಾಲಪ್ಪ, ದಿನಾಂಕ ನಿಗದಿಪಡಿಸಲಿ, ಮರಳು ಲಾರಿ ಮಾಲೀಕರಿಂದ ನಾನಗಲಿ ಅಥವಾ ನನ್ನ ಸಂಬಂಧಿಕರಾಗಲಿ ಕಮಿಷನ್ ಪಡೆದಿದ್ದರೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ತಿಳಿಸಿದರು. ಪೊಲೀಸರಿಂದಲೂ ನಾನು ಯಾವುದೇ ಹಣ ಪಡೆದಿಲ್ಲ. ಫೆಬ್ರವರಿ 13 ರೊಳಗೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ಹಾಲಪ್ಪ ಹೇಳಿದರು. 

ಆದಾಗ್ಯೂ, ಫೆಬ್ರವರಿ 13 ರಂದು ಕುಟುಂಬದ ಕಾರ್ಯಕ್ರಮವೊಂದು ಇರುವುದರಿಂದ ಫೆಬ್ರವರಿ 12 ರಂದು ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ಹಾಲಪ್ಪ ಶುಕ್ರವಾರ ಹೇಳಿದ್ದಾರೆ. ಫೆಬ್ರವರಿ 13 ರಂದು ದೇವರ ಮುಂದೆ ಪ್ರಮಾಣ ಮಾಡಲು ತಾವು ಕೂಡಾ ಸಿದ್ಧವಿರುವುದಾಗಿ ಗೋಪಾಲಕೃಷ್ಣ ಮಾಧ್ಯಮಗಳಿಗೆ ತಿಳಿಸಿದರು. ಶಾಸಕರು ಈಗ ದಿನಾಂಕವನ್ನು ಬದಲಾಯಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಶೀಘ್ರದಲ್ಲೇ ನನ್ನ ಹೇಳಿಕೆಯನ್ನು ನೀಡುತ್ತೇನೆ ಎಂದು ಅವರು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *