ಅದ್ಧೂರಿ ವಿವಾಹ ನೆರವೇರಿಸಿದ ಕಾರವಾರ ಶಾಸಕಿ ರೂಪಾಲಿ

Thumbnail image

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು..

ಕಾರವಾರ : ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುತ್ತಾರೆ. ಆದರೆ, ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ತಮ್ಮ ಮಗನ ಮದುವೆಗಾಗಿ ಸ್ವರ್ಗವನ್ನೇ ಧರೆಗಿಳಿಸಿದ್ದರು.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ರ ಮುದ್ದಿನ ಮಗ, ಪರ್ಭತ್ ನಾಯ್ಕ್ ಇಂದು ಕಾರವಾರ ತಾಲೂಕಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ನಿವಳಿಯಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಮೈಸೂರಿನ ಬೆಡಗಿ ರೇಖಾಳ ಕೈ ಹಿಡಿದರು.

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣೋತ್ಸವ..

ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದ್ದ ಅದ್ಧೂರಿ ಮಂಟಪದಲ್ಲಿ, ಮೂವರು ವೈದಿಕರ ನೇತೃತ್ವದಲ್ಲಿ ನಡೆದ ಮದುವೆಯ ವಿಧಿ- ವಿಧಾನದಲ್ಲಿ ರೇಖಾಳೊಂದಿಗೆ ಪರ್ಭತ್ ಸಪ್ತಪದಿ ತುಳಿದರು.

ಮಂಗಳವಾದ್ಯ, ಮೈಸೂರಿನ ಇಂಗ್ಲಿಷ್ ಬ್ಯಾಂಡ್, ಹೊನ್ನಾವರ ಹಡಿನಬಾಳದ ಬ್ಯಾಂಡ್ ಸೆಟ್​​ಗಳ ಜೊತೆಗೆ ಖ್ಯಾತ ಬಹುಭಾಷಾ ಗಾಯಕ ವಿಜಯ ಪ್ರಕಾಶ್-ಅನುರಾಧಾ ಭಟ್ ಅವರ ಆರ್ಕೆಸ್ಟ್ರಾ ವಿವಾಹ ಮಹೋತ್ಸವದಲ್ಲಿ ಮೆರುಗು ನೀಡಿದವು.

ಈ ಅದ್ಧೂರಿ ವಿವಾಹಕ್ಕೆ ಹತ್ತಾರು ಸಚಿವ, ಶಾಸಕರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅತಿಥಿ, ಗಣ್ಯರು, ಕುಟುಂಬಸ್ಥರು, ಬಂಧು- ಬಾಂಧವರು, ಗ್ರಾಮಸ್ಥರು ಸಾಕ್ಷಿಯಾದರು.

ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಶಿವರಾಮ ಹೆಬ್ಬಾರ್, ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ್ ಪೂಜಾರಿ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತರಾಮ ಸಿದ್ದಿ, ಚಿತ್ರನಟಿ, ಬಿಜೆಪಿ ಮಹಿಳಾ ಮುಖಂಡೆ ತಾರಾ ಅನುರಾಧಾ, ಶಾಸಕ ಸುನೀಲ್ ನಾಯ್ಕ ಸೇರಿದಂತೆ ಅನೇಕರು ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡರು.

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು.

ಅಂಕೋಲಾ ಮತ್ತು ಕಾರವಾರದಿಂದ ಸಾರಿಗೆ ಬಸ್, ಖಾಸಗಿ ಬಸ್​​ಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ವಾಹನಗಳ ಪಾರ್ಕಿಂಗ್​​ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿಯ ಕಾರ್ಯಕರ್ತರು, ಸ್ಥಳೀಯ ಯುವಕರು ಸ್ವಯಂಸೇವಕರಾಗಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಬೀಳ್ಕೊಟ್ಟರು. ಕಾರವಾರ ನಗರದಿಂದ ರಸ್ತೆಯುದ್ದಕ್ಕೂ, ವಿವಾಹ ಮಹೋತ್ಸವದ ಮಂಟದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *