ನಂಬಿಕೆ,ಸೌಹಾರ್ದತೆಯ ಬೀರಗುಂಡಿ ಭೂತೇಶ್ವರ ಜಾತ್ರೆ

ಜಾತ್ರೆ,ಹಬ್ಬಗಳಲ್ಲಿ ಜನರಿಗೆ ರಕ್ಷಣೆ ಭದ್ರತೆ ನೀಡುವ ಪೊಲೀಸರು ಜಾತ್ರೆ ನಡೆಸಿದರೆ ಹೇಗಿರುತ್ತೆ ಎನ್ನುವ ಕತೂಹಲವಿದ್ದವರು ಈ ಸ್ಟೋರಿಯನ್ನು ಕಡ್ಡಾಯವಾಗಿ ಓದಲೇಬೇಕು. ಹೌದು ಇದು  ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಬೀರಗುಂಡಿ ಭೂತೇಶ್ವರ ಜಾತ್ರೆ, ಈ ಜಾತ್ರೆಯ ವಿಶೇಶವೆಂದರೆ ಇಲ್ಲಿ ಜಾತ್ರೆ ಸಂಘಟಕರು ಪೊಲೀಸರು.

ಈ ದಿನ ಇಲ್ಲಿ ಪೊಲೀಸರು ಸಮವಸ್ತ್ರ ತೊಡದೆ ಜಾತ್ರೆಯ ಭಜಕರಾಗಿ ಕೆಲಸಮಾಡುತ್ತಾರೆ. ಈ ಜಾತ್ರೆಯನ್ನು ಪೊಲೀಸರೇ ಯಾಕೆ ನಡೆಸುತ್ತಾರೆ ಎನ್ನುವ ಪ್ರಶ್ನೆ ಏಳುವುದು ಸಹಜ, ಅದಕ್ಕೂ ಒಂದು ಚರಿತ್ರೆಯಿದೆ. ಹಲವು ವರ್ಷಗಳ ಹಿಂದೆ ಈಗ ಪೊಲೀಸ್‌ ಠಾಣೆ ಇರುವ ಪ್ರದೇಶದಲ್ಲಿ ಈ ಭೂತೇಶ್ವರ ದೇವರಿದ್ದಿತ್ತಂತೆ ನಂತರ ಈ ಪ್ರದೇಶದಲ್ಲಿ ಪೊಲೀಸ್‌ ಠಾಣೆ ನಿರ್ಮಾಣವಾದ ಮೇಲೆ ಸ್ಥಳಾಂತರವಾದ ಭೂತೇಶ್ವರ ದೇವರಿಗೆ  ಪೂಜಿಸಿ ಹರಕೆ ಹೊತ್ತುಕೊಂಡರೆ ಕಳ್ಳರನ್ನು ಹಿಡಿಯುವುದು ಸೇರಿದಂತೆ ಪೊಲೀಸರ ಕೆಲಸಗಳೆಲ್ಲಾ ಸರಾಗವಾಗಿ ಆಗುತಿದ್ದವಂತೆ.
ಇಂಥ ನಂಬಿಕೆ ಕಾರಣಕ್ಕೆ ಪೊಲೀಸರು ಸಂಘಟಿಸಲು ಪ್ರಾರಂಭಿಸಿದ ಈ ಜಾತ್ರೆಗೆ ಈಗ ೩೦ ವರ್ಷ ಕಳೆದಿದೆ.

ಪ್ರತಿವರ್ಷ ಹೊಸವರ್ಷದ ಒಂದು ದಿನ ನಡೆಯುವ ಈ ಜಾತ್ರೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೂಡಾ ಮಾಡುತ್ತಾರೆ. ಇಂದು ನಡೆದ ಈ ಜಾತ್ರೆಯಲ್ಲಿ ಪಾಲ್ಗೊಂಡ ಪೊಲೀಸ್‌ ಅಧಿಕಾರಿಗಳು ಜಾತ್ರೆಗೆ ಬಂದವರಿಗೆ ಅಡಿಗೆ ಬಡಿಸಿ,ಜನರೊಂದಿಗೆ ತಾವೂ ಬೆರೆತು ಊಟ ಮಾಡಿದರು.
ಹೀಗೆ ದೇವರಿಗೆ ಪೂಜಿಸಿ, ಅನ್ನಸಂತರ್ಪಣೆ ಮಾಡಿ ಸಾರ್ವಜನಿಕರೊಂದಿಗೆ ಬೆರೆತರೆ ಜನಸ್ನೇಹಿ ಪೊಲೀಸ್‌ ಉದ್ದೇಶವೂ ಈಡೇರಿದಂತಾಗುತ್ತದೆ ಎನ್ನುವುದು ಇಲಾಖೆಯ ಅಭಿಮತ.ಪೊಲೀಸರೇ ನಡೆಸುವ ಈ ಜಾತ್ರೆಗೆ ಎಲ್ಲಾ ಸಹಕಾರ ನೀಡುವ ಸ್ಥಳಿಯರು ಪೊಲೀಸರು,ಅವರ ಕುಟುಂಬದೊಂದಿಗೆ ಬೆರೆತು ಸಂಬ್ರಮಿಸುತ್ತಾರೆ. ದಿನಂಪ್ರತಿ ಜಾತ್ರೆ, ಹಬ್ಬ,ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವ ಪೊಲೀಸರು ಈ  ಜಾತ್ರೆಯಲ್ಲಿ ಸಮವಸ್ತ್ರ,ಇಲಾಖೆಯ ರೀತಿ ರಿವಾಜುಗಳನ್ನು ಬಿಟ್ಟು ಜನಸಾಮಾನ್ಯರಂತೆ ಪಾಲ್ಗೊಳ್ಳುವುದರಿಂದ ಸ್ಥಳೀಯರಿಗೂ ಪೊಲೀಸರ ಬಗ್ಗೆ ಭಿನ್ನ ಭಾವ ಉಂಟಾಗುತ್ತದೆ. ನಂಬಿಕೆ,ಸಾಹಾರ್ದತೆ,ಸಮಾಧಾನಗಳ ಹಿನ್ನೆಲೆಯಲ್ಲಿ ಪೊಲೀಸರ ಸಂಘಟನೆಯಲ್ಲಿ ನಡೆಯುವ ಈ ಜಾತ್ರೆ ರಾಜ್ಯದ ಅಪರೂಪದ ಪೊಲೀಸ್‌ ಜಾತ್ರೆಗಳಲ್ಲಿ ಒಂದು ಎನ್ನಲಾಗಿದೆ. ಈ ಜಾತ್ರೆಯಲ್ಲಿ ಪೊಲೀಸರೊಂದಿಗೆ ಇತರ ಇಲಾಖೆಯ ಸಿಬ್ಬಂದಿಗಳೂ ಸಾರ್ವಜನಿಕರಂತೆ ಬೆರೆತು ಜಾತ್ರೆ ಆಚರಿಸುವುದು ಬೀರಗುಂಡಿ ಭೂತೇಶ್ವರ ಜಾತ್ರೆಯ ವಿಶೇಶ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *