ನಂಬಿಕೆ,ಸೌಹಾರ್ದತೆಯ ಬೀರಗುಂಡಿ ಭೂತೇಶ್ವರ ಜಾತ್ರೆ

ಜಾತ್ರೆ,ಹಬ್ಬಗಳಲ್ಲಿ ಜನರಿಗೆ ರಕ್ಷಣೆ ಭದ್ರತೆ ನೀಡುವ ಪೊಲೀಸರು ಜಾತ್ರೆ ನಡೆಸಿದರೆ ಹೇಗಿರುತ್ತೆ ಎನ್ನುವ ಕತೂಹಲವಿದ್ದವರು ಈ ಸ್ಟೋರಿಯನ್ನು ಕಡ್ಡಾಯವಾಗಿ ಓದಲೇಬೇಕು. ಹೌದು ಇದು  ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಬೀರಗುಂಡಿ ಭೂತೇಶ್ವರ ಜಾತ್ರೆ, ಈ ಜಾತ್ರೆಯ ವಿಶೇಶವೆಂದರೆ ಇಲ್ಲಿ ಜಾತ್ರೆ ಸಂಘಟಕರು ಪೊಲೀಸರು.

ಈ ದಿನ ಇಲ್ಲಿ ಪೊಲೀಸರು ಸಮವಸ್ತ್ರ ತೊಡದೆ ಜಾತ್ರೆಯ ಭಜಕರಾಗಿ ಕೆಲಸಮಾಡುತ್ತಾರೆ. ಈ ಜಾತ್ರೆಯನ್ನು ಪೊಲೀಸರೇ ಯಾಕೆ ನಡೆಸುತ್ತಾರೆ ಎನ್ನುವ ಪ್ರಶ್ನೆ ಏಳುವುದು ಸಹಜ, ಅದಕ್ಕೂ ಒಂದು ಚರಿತ್ರೆಯಿದೆ. ಹಲವು ವರ್ಷಗಳ ಹಿಂದೆ ಈಗ ಪೊಲೀಸ್‌ ಠಾಣೆ ಇರುವ ಪ್ರದೇಶದಲ್ಲಿ ಈ ಭೂತೇಶ್ವರ ದೇವರಿದ್ದಿತ್ತಂತೆ ನಂತರ ಈ ಪ್ರದೇಶದಲ್ಲಿ ಪೊಲೀಸ್‌ ಠಾಣೆ ನಿರ್ಮಾಣವಾದ ಮೇಲೆ ಸ್ಥಳಾಂತರವಾದ ಭೂತೇಶ್ವರ ದೇವರಿಗೆ  ಪೂಜಿಸಿ ಹರಕೆ ಹೊತ್ತುಕೊಂಡರೆ ಕಳ್ಳರನ್ನು ಹಿಡಿಯುವುದು ಸೇರಿದಂತೆ ಪೊಲೀಸರ ಕೆಲಸಗಳೆಲ್ಲಾ ಸರಾಗವಾಗಿ ಆಗುತಿದ್ದವಂತೆ.
ಇಂಥ ನಂಬಿಕೆ ಕಾರಣಕ್ಕೆ ಪೊಲೀಸರು ಸಂಘಟಿಸಲು ಪ್ರಾರಂಭಿಸಿದ ಈ ಜಾತ್ರೆಗೆ ಈಗ ೩೦ ವರ್ಷ ಕಳೆದಿದೆ.

ಪ್ರತಿವರ್ಷ ಹೊಸವರ್ಷದ ಒಂದು ದಿನ ನಡೆಯುವ ಈ ಜಾತ್ರೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೂಡಾ ಮಾಡುತ್ತಾರೆ. ಇಂದು ನಡೆದ ಈ ಜಾತ್ರೆಯಲ್ಲಿ ಪಾಲ್ಗೊಂಡ ಪೊಲೀಸ್‌ ಅಧಿಕಾರಿಗಳು ಜಾತ್ರೆಗೆ ಬಂದವರಿಗೆ ಅಡಿಗೆ ಬಡಿಸಿ,ಜನರೊಂದಿಗೆ ತಾವೂ ಬೆರೆತು ಊಟ ಮಾಡಿದರು.
ಹೀಗೆ ದೇವರಿಗೆ ಪೂಜಿಸಿ, ಅನ್ನಸಂತರ್ಪಣೆ ಮಾಡಿ ಸಾರ್ವಜನಿಕರೊಂದಿಗೆ ಬೆರೆತರೆ ಜನಸ್ನೇಹಿ ಪೊಲೀಸ್‌ ಉದ್ದೇಶವೂ ಈಡೇರಿದಂತಾಗುತ್ತದೆ ಎನ್ನುವುದು ಇಲಾಖೆಯ ಅಭಿಮತ.ಪೊಲೀಸರೇ ನಡೆಸುವ ಈ ಜಾತ್ರೆಗೆ ಎಲ್ಲಾ ಸಹಕಾರ ನೀಡುವ ಸ್ಥಳಿಯರು ಪೊಲೀಸರು,ಅವರ ಕುಟುಂಬದೊಂದಿಗೆ ಬೆರೆತು ಸಂಬ್ರಮಿಸುತ್ತಾರೆ. ದಿನಂಪ್ರತಿ ಜಾತ್ರೆ, ಹಬ್ಬ,ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವ ಪೊಲೀಸರು ಈ  ಜಾತ್ರೆಯಲ್ಲಿ ಸಮವಸ್ತ್ರ,ಇಲಾಖೆಯ ರೀತಿ ರಿವಾಜುಗಳನ್ನು ಬಿಟ್ಟು ಜನಸಾಮಾನ್ಯರಂತೆ ಪಾಲ್ಗೊಳ್ಳುವುದರಿಂದ ಸ್ಥಳೀಯರಿಗೂ ಪೊಲೀಸರ ಬಗ್ಗೆ ಭಿನ್ನ ಭಾವ ಉಂಟಾಗುತ್ತದೆ. ನಂಬಿಕೆ,ಸಾಹಾರ್ದತೆ,ಸಮಾಧಾನಗಳ ಹಿನ್ನೆಲೆಯಲ್ಲಿ ಪೊಲೀಸರ ಸಂಘಟನೆಯಲ್ಲಿ ನಡೆಯುವ ಈ ಜಾತ್ರೆ ರಾಜ್ಯದ ಅಪರೂಪದ ಪೊಲೀಸ್‌ ಜಾತ್ರೆಗಳಲ್ಲಿ ಒಂದು ಎನ್ನಲಾಗಿದೆ. ಈ ಜಾತ್ರೆಯಲ್ಲಿ ಪೊಲೀಸರೊಂದಿಗೆ ಇತರ ಇಲಾಖೆಯ ಸಿಬ್ಬಂದಿಗಳೂ ಸಾರ್ವಜನಿಕರಂತೆ ಬೆರೆತು ಜಾತ್ರೆ ಆಚರಿಸುವುದು ಬೀರಗುಂಡಿ ಭೂತೇಶ್ವರ ಜಾತ್ರೆಯ ವಿಶೇಶ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *