ಹಿಜಾಬ್‌ ಪರ ನಿಂತ ಬ್ರಹ್ಮಾನಂದ ಸ್ವಾಮೀಜಿ.. ಮತೀಯ ರಾಜಕಾರಣಕ್ಕೆ ವಿರೋಧ

Thumbnail image

ಬಟ್ಟೆಗಳೇ ಧರ್ಮವಲ್ಲ, ಧರ್ಮದ ಅಂತರಾಳಕ್ಕೆ ಇಳಿಯಬೇಕು: ಬ್ರಹ್ಮಾನಂದ ಸರಸ್ವತಿ ಶ್ರೀ

ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್‌ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದು ಬ್ರಹ್ಮಾನಂದ ಸರಸ್ವತಿ ಶ್ರೀ ಹೇಳಿದರು.

ಕಾರವಾರ: ಬಟ್ಟೆಗಳನ್ನೇ ಧರ್ಮವೆಂದು ತಿಳಿದು ತಮಗೆ ಅನುಕೂಲವಾಗುವಂತಹ ಸಿದ್ಧಾಂತಗಳ ಮೇಲೆ ವಾದಗಳನ್ನು ಮಂಡಿಸಲಾಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸದಿದ್ದರೆ ದೇಶಪ್ರೇಮ ಏನಾಗಲಿದೆ ಎಂಬ ಬಗ್ಗೆ ಭಯವಾಗುತ್ತಿದೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಹೊನ್ನಾವರದಲ್ಲಿ ಮಾತನಾಡಿದ ಅವರು, ಧರ್ಮದ ನಿಟ್ಟಿನಲ್ಲಿ ಶಾಲೆಯ ಮಕ್ಕಳು ಕೇಸರಿ ಶಾಲು, ಟೋಪಿ, ಹಿಜಾಬ್‌ಗಳನ್ನು ಹಾಕಿಕೊಂಡು ಬಂದು ವಿವಾದ ಸೃಷ್ಟಿಯಾಗಿದೆ. ಹಾಗಿದ್ದರೆ ಧರ್ಮವೆಂದರೇನು? ಟೋಪಿ, ಮುಖವಾಡ, ಕೇಸರಿ ಶಾಲು ಇವು ಧರ್ಮವಲ್ಲ. ಧರ್ಮವೆಂದರೆ ಬದುಕಿನ ನಿಯಮ. ಸನ್ಯಾಸವೆಂದರೆ ಕೇಸರಿ ಬಟ್ಟೆಯೊಂದೇ ಅಲ್ಲ. ನಮಗೆ ನಾವೇ ಹಾಕಿಕೊಳ್ಳುವ ಕಟ್ಟುಪಾಡು ಎಂದು ಹೇಳಿದರು. ಕೇಸರಿ ಹಾಕಿದ ಮೇಲೆ ಯಾರ ಮನೆಗೂ ಹೋಗುವಂತಿಲ್ಲ, ಮಾರ್ಗದಲ್ಲಿ ನಿಂತು ತಿನ್ನುವಂತಿಲ್ಲ. ಧರ್ಮಕ್ಕೆ ವಿರುದ್ಧವಾದ ವಿಚಾರಗಳನ್ನೂ ಮಾಡುವಂತಿಲ್ಲ ಇಂತಹ ನೈತಿಕತೆಯ ಮಟ್ಟ ಹೆಚ್ಚಿಸುವುದೇ ಧರ್ಮ ಎಂದು ಹೇಳಿದರು.

ಬಟ್ಟೆಗಳೇ ಧರ್ಮವಲ್ಲ. ಧರ್ಮದ ಅಂತರಾಳಕ್ಕೆ ಇಳಿಯಬೇಕು. ವೇದ, ಉಪನಿಷತ್, ಅನ್ಯಧರ್ಮದ ಖುರ್- ಆನ್, ಬೈಬಲ್‌ಗಳ ಅಂತರಾಳಕ್ಕೆ ಹೋದಾಗ ಸತ್ಯದರ್ಶನವಾಗುತ್ತದೆ ಎಂದರು.

ನಮ್ಮ ನಾಯಕರುಗಳಿಗೆ ದೇಶೀಯತೆ ಬೇಕಿದೆಯೇ?, ಬೇಕಿದ್ದರೆ ಇಂಥ ಸ್ಥಿತಿ ನಿರ್ಮಾಣವಾಗುತ್ತಿತ್ತಾ? ರಾಷ್ಟ್ರೀಯತೆ, ದೇಶೀಯತೆ, ರಾಷ್ಟ್ರ- ಸಹೋದರತೆ ಕಟ್ಟಬೇಕು ಎಂಬ ಮನಸ್ಥಿತಿ ನಮ್ಮ ರಾಜಕೀಯ ನಾಯಕರುಗಳಿಗೆ ಇಲ್ಲ. ಯಾವುದೇ ದೇಶದಲ್ಲಿ ಜನಾಂಗೀಯ ಸಂಘರ್ಷಗಳು ಉಂಟಾದರೆ ಆ ದೇಶ ಉಳಿಯುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಮತೀಯ ಸಂಘರ್ಷಗಳು ಉಂಟಾದ ಯಾವ ದೇಶಗಳು ಉದ್ಧಾರವಾಗಿಲ್ಲ. ಉದ್ಧಾರವಾಗದಿದ್ದರೂ ಚಿಂತೆಯಿಲ್ಲ, ನನ್ನ ಪಕ್ಷ ಬರಬೇಕು ಎಂಬ ಮಾನಸಿಕತೆಯ ಜನರಿಂದಾಗಿ ಇಂತಹ ಘಟನೆ ಉಂಟಾಗುತ್ತಿರುವುದಾಗಿ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. (ಈಟಿ.ಬಿ.ಕೆ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *