

ಹಿಜಾಬ್-ಕೇಸರಿ ಶಾಲು ಆಯ್ತು, ಈಗ ಸಿಂಧೂರ ಸಮರ, ವಿಜಯಪುರದಲ್ಲಿ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ
ಹಿಜಾಬ್ v/sಕೇಸರಿ ಶಾಲು ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಈಗ ಹಿಜಾಬ್ v/s ಸಿಂಧೂರಕ್ಕೆ ತಿರುಗಿದೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.



ವಿಜಯಪುರ: ಹಿಜಾಬ್ v/sಕೇಸರಿ ಶಾಲು ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಈಗ ಹಿಜಾಬ್ v/s ಸಿಂಧೂರಕ್ಕೆ ತಿರುಗಿದೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.
ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.


ಹಿಜಾಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸುವಾಗ ಹಣೆಗೆ ಕುಂಕುಮ, ಸಿಂಧೂರ ಹಚ್ಚಿಕೊಂಡು ಬರುವುದು ಕೂಡ ವಿವಾದಕ್ಕೆ ಮತ್ತಷ್ಟು ಸಮಸ್ಯೆ ಒಡ್ಡಿದಂತಾಗುತ್ತದೆ ಎಂದು ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೇಶಕರು ಸಲಹೆ ನೀಡಿದಾಗ ವಿದ್ಯಾರ್ಥಿಗಳು-ಉಪನ್ಯಾಸಕರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ.
ಹಿಜಾಬ್ ಮತ್ತು ಕೇಸರಿ ಶಾಲು ಹೊರತುಪಡಿಸಿ ಹಣೆಗೆ ಕುಂಕುಮ, ನಾಮ ಹಾಕಿಕೊಂಡು ಬರಬೇಡಿ ಎಂದರೆ ಹೇಗೆ, ಅದು ನಮ್ಮ ಪಾರಂಪರಿಕ ಸಾಂಸ್ಕೃತಿಕ ಗುರುತು ಸಿಂಧೂರ, ತಿಲಕಕ್ಕೆ ಏಕೆ ಅನುಮತಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿ ಪಟ್ಟು ಹಿಡಿದು ಕೇಳಿದ್ದಾರೆ. ಆಗ ಪೊಲೀಸರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಯ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






