ಕಾನಸೂರು ಶಾಲೆ ದತ್ತು ಪಡೆದ ಉಪೇಂದ್ರ……

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಸೇವಾ ಸಹಾಕಾರಿ ಸಂಘದ ಸದಸ್ಯರಾಗಿ, ಗ್ರಾಮ ಕಮಿಟಿಯ ಸದಸ್ಯ ರಾಗಿ ಸೇವೆ ಸಲ್ಲಿಸಿದ್ದ ತಾಲೂಕಿನ ಕಡಕೇರಿಯ ರಾಮ ಮಾದ ನಾಯ್ಕ (79) ಇತ್ತೀಚೆಗೆ ನಿಧನರಾದರು. ಅವರು ಪತ್ನಿ, ಎರಡು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಕಾನಸೂರು ಕ್ಲಸ್ಟರ್ ಹಂತದ ಎಸ್ ಡಿ ಎಂ ಸಿ ತರಬೇತಿ ಕಾರ್ಯಾಗಾರ ಯಶಸ್ವಿ
ಒಂದು ಊರಿನ ಸರಕಾರಿ ಶಾಲೆ ಅಭಿವೃದ್ಧಿ ಹೊಂದಿದರೆ ದೇಶದ ಅಭಿವೃದ್ಧಿ ಸಾಧ್ಯ. ಮಕ್ಕಳ ಶಿಕ್ಷಣಕ್ಕೆ ಸಮುದಾಯದ ಪ್ರೋತ್ಸಾಹ ಅತ್ಯಂತ ಪ್ರೇರಕ. ಶಾಲೆಯ ಅಭಿವೃದ್ಧಿಯಲ್ಲಿ ಸರಕಾರದ ಜೊತೆಗೆ ಎಸ್ ಡಿಎಂಸಿ ಮತ್ತು ಸಮುದಾಯದವರು ಸದಾ ಸ್ಪಂದಿಸಬೇಕು, ಆಗಮಾತ್ರ ಸರಕಾರಿ ಶಾಲೆಗಳು ಉಳಿಯಲು ಮತ್ತು ಬೆಳೆಯಲು ಸಾಧ್ಯ ಎಂದು ಶಿಕ್ಷಣ ಪ್ರೇಮಿ ಉಪೇಂದ್ರ ಪೈ ಹೇಳಿದರು. ಇವರು ಕಾನಸೂರಿನಲ್ಲಿ ನಡೆದ ಎಸ್ ಡಿ ಎಂ ಸಿ ತರಬೇತಿ ಕಾರ್ಯಾಗಾರದಲ್ಲಿ ಕಾನಸೂರು ಶಾಲೆಯನ್ನು ದತ್ತು ತೆಗೆದುಕೊಂಡು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾನಸೂರು ಶಾಲೆಯ ಎಸ್ ಡಿ ಎಂಸಿ ಅಧ್ಯಕ್ಷರಾದ ಸುಭಾಸ್ ನಾಯ್ಕ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಅತ್ಯುತ್ತಮ ತರಬೇತಿ ಪಡೆದಿರುವ ಶಿಕ್ಷಕರು ಇರುತ್ತಾರೆ. ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ತಮ್ಮ ಬದುಕನ್ನು ಕಟ್ಟಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸುವ ಮೂಲಕ ಸರಕಾರಿ ಶಾಲೆಯ ಸಬಲೀಕರಣದಲ್ಲಿ ಸಮುದಾಯದವರು ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲೆಗೆ ನೀಡಲಾದ ಡೆಸ್ಕ್ ಮತ್ತು ಬೆಂಚ್ ಗಳನ್ನು ಸ್ವೀಕರಿಸಲಾಯಿತು. ವೇದಿಕೆಯಲ್ಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸವಿತಾ ಕಾನಡೆ ಅನಿತಾ ನಾಯ್ಕ ಯೋಜನಾಧಿಕಾರಿ ಪ್ರಭಾಕರ ನಾಯ್ಕ, ಶಿಕ್ಷಕರ ಸಂಘದ ಕಾರ್ಯದರ್ಶಿ ಗುರುರಾಜ ನಾಯ್ಕ, ಸಿ. ಆರ್. ಪಿ ಹೊಳೆ ಲಿಂಗ ಬಿ ಎಚ್, ಮೇಲ್ವಿಚಾರಕಿ ರೂಪ ನಾಯ್ಕ, ವಿವಿಧ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು, ಮುಖ್ಯಾಧ್ಯಾಪಕರು ಹಾಜರಿದ್ದರು. ಎಂಎಂ ದುಂಡಸಿ ಸ್ವಾಗತಿಸಿದರು. ಚಂದ್ರಶೇಖರ್ ಚಿಕ್ಕಮಠ ವಂದಿಸಿದರು. 40ಕ್ಕೂ ಹೆಚ್ಚಿನ ಎಸ್. ಡಿ. ಎಂ ಸಿ ಪದಾಧಿಕಾರಿಗಳು ತರಬೇತಿಯ ಪ್ರಯೋಜನ ಪಡೆದುಕೊಂಡರು.

I

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *