ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ ಕಾಗೇರಿ

ಶಿರಸಿ-ಸಿದ್ಧಾಪುರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದಿದ್ದು ಸಿದ್ದಾಪುರದಲ್ಲಿ ಗುತ್ತಿಗೆದಾರರ ಅಸಾಮರ್ಥ್ಯದಿಂದ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ ಈ ತೊಂದರೆಯಿಂದಾಗಿ ಸರ್ಕಾರದ ಅನುದಾನ ಮರಳುವ ಸಾಧ್ಯತೆಇದ್ದು ಅಧಿಕಾರಿಗಳು ಗುತ್ತಿಗೆದಾರರಿಂದ ಹೆಚ್ಚಿನ ಕೆಲಸ ಮಾಡಿಸುವ ಮೂಲಕ ಕ್ಷೇತ್ರಕ್ಕೆ ತಂದ ಅನುದಾನ ಮರಳಿ ಹೋಗದಂತೆ ಕೆಲಸ ಮಾಡಬೇಕು ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.

ಸಿದ್ಧಾಪುರ ಪರಿವೀಕ್ಷಣಾ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾನಗೋಡಿನ ಬಾಂದಾರಿನ ರಸ್ತೆ ಕೆಲಸ, ಹೊಸೂರು ಸ್ಮಶಾನದ ರಗಳೆ,ರವೀಂದ್ರನಗರದ ತೊಂದರೆ ಸೇರಿದಂತೆ ಕೆಲವು ಅಗತ್ಯ ಕೆಲಸಗಳನ್ನು ಶೀಘ್ರವಾಗಿ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ ಕಾಗೇರಿ ಶಿರಸಿ-ಸಿದ್ಧಾಪುರಕ್ಕೆ ಅನುದಾನದ ಕೊರತೆ ಇಲ್ಲ, ಮೋಜಣಿ ಇಲಾಖೆಯ ಸಿಬ್ಬಂದಿ ಕೊರತೆ ಸೇರಿದಂತೆ ಕ್ಷೇತ್ರದ ಸರ್ಕಾರಿ ಕೆಲಸಗಳು, ಅಭಿವೃದ್ಧಿ ಯೋಜನೆ ಸೇರಿದಂತೆ ಜನರ ಅಗತ್ಯಗಳಿಗೆ ಸ್ಫಂದಿಸುವ ಹಿನ್ನೆಲೆಯಲ್ಲಿ ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ. ಸಾರ್ವಜನಿಕರು ಅಧಿಕಾರಿಗಳು,ಗುತ್ತಿಗೆದಾರರು ಸಂಬಂಧಿಸಿದ ವ್ಯಕ್ತಿಗಳಿಂದ ಸೂಕ್ತ ಕೆಲಸ ಮಾಡಿಸಿಕೊಂಡು ಸಹಕರಿಸದಿದ್ದರೆ ನಮ್ಮ ಉದ್ದೇಶ, ಪ್ರಯತ್ನ ಸಫಲವಾಗುವುದಿಲ್ಲ.

ಗುತ್ತಿಗೆದಾರರು ಸೋಮಾರಿತನ, ರಾಜಕಾರಣ,ಕ್ಷುಲ್ಲಕ ವಿಷಯಗಳ ಸಣ್ಣತನಗಳಿಂದ ಹೊರಬಂದು ಉದ್ದೇಶಿತ ಅಭಿವೃದ್ಧಿಗೆ ಸಹಕರಿಸದಿದ್ದರೆ ಅದರ ಪರಿಣಾಮ ಕ್ಷೇತ್ರದ ಅಭಿವೃದ್ಧಿ ಮೇಲಾಗುತ್ತದೆ. ಅಂಥ ಅವ್ಯವಸ್ಥೆಯನ್ನು ಬದಲಿಸುವ ಶಕ್ತಿ ವ್ಯವ ಸ್ಥೆಗೆ,ಸರ್ಕಾರಕ್ಕಿದೆ ಸರ್ಕಾರದ ಕಾಮಗಾರಿ, ಅಭಿವೃಧ್ಧಿ ಕೆಲಸದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಎಚ್ಚರಿಸಿದ ಅವರು ಕ್ಷೇತ್ರದ ಸರ್ಕಾರಿ ವ್ಯವಸ್ಥೆ, ಸಾರ್ವಜನಿಕ ಸಹಕಾರ ಅಭಿವೃದ್ಧಿ ಪರವಾಗಿದ್ದರೆ ನಮ್ಮ ಗುರಿ ಸಾಕಾರವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *