ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ.. ಮುಂದಕ್ಕೆ ಹಿಂಗಾಯ್ತು..

Thumbnail image

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು..

ಕಾರವಾರ : ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮದುವೆ ಆದ ನಂತರ ವಧು ಎಡಗೈಯಲ್ಲಿ ಊಟ ಮಾಡಿದ ಒಂದೇ ಕಾರಣಕ್ಕೆ ವರ ಈ ಹುಡುಗಿಯೇ ಬೇಡ ಎಂದು ಅಲ್ಲಿಂದ ಕಾಲ್ಕೀಳಲು ಮುಂದಾದ ಘಟನೆ ದಾಂಡೇಲಿಯ ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ಜರುಗಿದೆ.

ಜೊಯಿಡಾದ ಕಬೀರ್ ಕಾತು ನಾಯ್ಕ್ ಹಾಗೂ ಯಲ್ಲಾಪುರದ ವಧುವಿಗೆ ಮೂರು ದಿನಗಳ ಹಿಂದೆ ಮಾತುಕತೆ ನಡೆದು ಮದುವೆ ನಿಶ್ಚಯವಾಗಿತ್ತು. ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಂಗಲ್ಯ ಧಾರಣೆ ಬಳಿಕ ವಧು-ವರರು ಊಟಕ್ಕೆ ಕುಳಿತ ಸಂದರ್ಭದಲ್ಲಿ ವಧು ಎಡಗೈನಲ್ಲಿ ಊಟ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ವರ ಹಾಗೂ ಆತನ ಪೋಷಕರು ಆಕೆಯನ್ನು ಬಿಟ್ಟು ಕಾರನ್ನೇರಿ ಹೊರಡಲು ಮುಂದಾಗಿದ್ದಾರೆ.

ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು.

ವರನ ಕಡೆಯವರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಹಾಗೂ ಮಹಿಳಾ ಕೇಂದ್ರದ ಸಿಬ್ಬಂದಿ ಆಗಮಿಸಿ ವಧು-ವರರನ್ನು ಮಹಿಳಾ ಕೇಂದ್ರದ ಕಚೇರಿಗೆ ಕರೆದೊಯ್ದು ವರನಿಗೆ ಬುದ್ಧಿ ಹೇಳಿದ್ದಾರೆ.

ಬಳಿಕ ಮನ ಪರಿವರ್ತನೆ ಮಾಡಿದ ಪೊಲೀಸ್​ ಸಿಬ್ಬಂದಿ ವರನಿಂದ ಮುಚ್ಚಳಿಕೆ ಬರೆಯಿಸಿಕೊಂಡು ವಧು-ವರರಿಗೆ ದಾಂಪತ್ಯ ಜೀವನ ಮುಂದುವರಿಸುವಂತೆ ಸೂಚಿಸಿ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *