ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ.. ಮುಂದಕ್ಕೆ ಹಿಂಗಾಯ್ತು..

Thumbnail image

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು..

ಕಾರವಾರ : ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮದುವೆ ಆದ ನಂತರ ವಧು ಎಡಗೈಯಲ್ಲಿ ಊಟ ಮಾಡಿದ ಒಂದೇ ಕಾರಣಕ್ಕೆ ವರ ಈ ಹುಡುಗಿಯೇ ಬೇಡ ಎಂದು ಅಲ್ಲಿಂದ ಕಾಲ್ಕೀಳಲು ಮುಂದಾದ ಘಟನೆ ದಾಂಡೇಲಿಯ ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ಜರುಗಿದೆ.

ಜೊಯಿಡಾದ ಕಬೀರ್ ಕಾತು ನಾಯ್ಕ್ ಹಾಗೂ ಯಲ್ಲಾಪುರದ ವಧುವಿಗೆ ಮೂರು ದಿನಗಳ ಹಿಂದೆ ಮಾತುಕತೆ ನಡೆದು ಮದುವೆ ನಿಶ್ಚಯವಾಗಿತ್ತು. ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಂಗಲ್ಯ ಧಾರಣೆ ಬಳಿಕ ವಧು-ವರರು ಊಟಕ್ಕೆ ಕುಳಿತ ಸಂದರ್ಭದಲ್ಲಿ ವಧು ಎಡಗೈನಲ್ಲಿ ಊಟ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ವರ ಹಾಗೂ ಆತನ ಪೋಷಕರು ಆಕೆಯನ್ನು ಬಿಟ್ಟು ಕಾರನ್ನೇರಿ ಹೊರಡಲು ಮುಂದಾಗಿದ್ದಾರೆ.

ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು.

ವರನ ಕಡೆಯವರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಹಾಗೂ ಮಹಿಳಾ ಕೇಂದ್ರದ ಸಿಬ್ಬಂದಿ ಆಗಮಿಸಿ ವಧು-ವರರನ್ನು ಮಹಿಳಾ ಕೇಂದ್ರದ ಕಚೇರಿಗೆ ಕರೆದೊಯ್ದು ವರನಿಗೆ ಬುದ್ಧಿ ಹೇಳಿದ್ದಾರೆ.

ಬಳಿಕ ಮನ ಪರಿವರ್ತನೆ ಮಾಡಿದ ಪೊಲೀಸ್​ ಸಿಬ್ಬಂದಿ ವರನಿಂದ ಮುಚ್ಚಳಿಕೆ ಬರೆಯಿಸಿಕೊಂಡು ವಧು-ವರರಿಗೆ ದಾಂಪತ್ಯ ಜೀವನ ಮುಂದುವರಿಸುವಂತೆ ಸೂಚಿಸಿ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *