deshpande 75- ೨೫ ರಿಂದ ೭೫ ರ ವರೆಗೆ ಚುರುಕಿನ ನಡಿಗೆ

ಆರ್.ವಿ.ದೇಶಪಾಂಡೆ ರಾಜ್ಯ ರಾಜಕಾರಣದ ಮಹತ್ವದ ಹೆಸರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಆರ್.ವಿ.ದೇಶಪಾಂಡೆ ತಿರುಗಿ ನೋಡಿದ್ದೇ ಇಲ್ಲ. ಕಾಂಗ್ರೆಸ್‌ ನಿಂದ ಜನತಾದಳ, ಲೋಕಶಕ್ತಿ,ಮರಳಿ ಕಾಂಗ್ರೆಸ್‌ ದೇಶಪಾಂಡೆ ಹೋದ ಕಡೆ ಅಧಿಕಾರ ಬರುತ್ತೋ,ಅಧಿಕಾರ ಅರಸಿ ದೇಶಪಾಂಡೆ ಹೋದಾಗಲೆಲ್ಲಾ ಅವಕಾಶ ದೊರೆಯುತ್ತೋ ಎನ್ನುವುದೇ ಒಗಟು. ಹಳಿಯಾಳದ ಯುವ ವಕೀಲ ರಘುನಾಥ ವಿಶ್ವನಾಥ ದೇಶಪಾಂಡೆ ೨೫ ರ ಹರೆಯದಲ್ಲೇ ರಾಜಕೀಯ ಪ್ರವೇಶಿಸಿದರು ಅಂದಿನಿಂದ ಈವರೆಗೆ ದೇಶಪಾಂಡೆ ೫ ದಶಕಗಳ ಕಾಲ ರಾಜ್ಯ ರಾಜಕಾರಣದ ಭಾಗವಾಗಿ ಈವರೆಗೆ ೮ ಬಾರಿ ಶಾಸಕರಾಗಿ, ಸಚಿವರಾಗಿ, ಪಕ್ಷದ ರಾಜ್ಯ ಅಧ್ಯಕ್ಷರಾಗಿ, ವಿರೋಧಪಕ್ಷದ ನಾಯಕರಾಗಿ ಚಾಪು ಮೂಡಿಸಿದ್ದಾರೆ.

೫೦ ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಅವಧಿಯಲ್ಲಿ ಹಲವು ಬಾರಿ ತಾವು ಬಯಸಿದ ಖಾತೆ ಪಡೆದು ಹೆಸರು ಮಾಡಿದ್ದಾರೆ. ಹಳಿಯಾಳ ಕ್ಷೇತ್ರ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಅಭಿವೃದ್ಧಿ ಕೆಲಸಗಳ ಕಾಮಗಾರಿ ಫಲಕಗಳ ಮೇಲೆ ತಮ್ಮ ಹೆಸರು ಛಾಪಿಸಿರುವ ದೇಶಪಾಂಡೆ ತಮ್ಮ ಗುರುವಿಗಾಗಿ ತಮ್ಮ ಕ್ಷೇತ್ರ-ಹುದ್ದೆಗಳನ್ನೆಲ್ಲಾ ಬಿಟ್ಟುಕೊಟ್ಟ ಧೀಮಂತ. ಜನತಾದಳದಿಂದ ರಾಮಕೃಷ್ಣ ಹೆಗಡೆಯವರನ್ನು ಉಚ್ಛಾಟಿಸಿದ್ದಾಗ ಗುರು ಹೆಗಡೆಯವರೊಂದಿಗೆ ಜನತಾದಳ ಬಿಟ್ಟುಬಂದ ದೇಶಪಾಂಡೆ ಗುರುವಿಗಾಗಿಮಿಡಿದ ಶಿಷ್ಯ.

ರಾಜಕೀಯ ಗರಡಿಯ ಬಿಗಿಪಟ್ಟುಗಳ ೫೦ ವರ್ಷದ ಸುವರ್ಣ ಅನುಭವಕ್ಕೂ ತಮ್ಮ ಬದುಕಿನ ಅಮೃತಮಹೋತ್ಸವಕ್ಕೂ ಸರಿಯಾಗಿ ೭೫ ವರ್ಷಗಳ ಅವಧಿಯಲ್ಲಿ ೫೦ ವರ್ಷ ನಿರಂತರ ರಾಜಕಾರಣ ಮಾಡಿರುವ ದೇಶಪಾಂಡೆ ಈಗಲೂ ದಣಿದಿಲ್ಲ. ಸರ್ಕಾರ ಬರಲಿ, ಅಧಿಕಾರ ಇರಲಿ, ಇಲ್ಲದಿರಲಿ ಸರ್ಕಾರ, ಪಕ್ಷದ ವಲಯದಲ್ಲಿ ವರ್ಚಸ್ವಿ ನಾಯಕರಾಗಿ ಹೆಸರುಮಾಡಿರುವ ಇವರ ವಿಶೇಶವೆಂದರೆ ಪಕ್ಷ,ಸಿದ್ಧಾಂತಗಳ ಬಗ್ಗೆ ಮಾತನಾಡುತ್ತಾರೆಯೆ ವಿನ: ದೇಶಪಾಂಡೆ ಯಾರ ವಯಕ್ತಿಕ ವಿಚಾರದಲ್ಲಿ ಮಾತನಾಡುವ ವ್ಯಕ್ತಿಯಲ್ಲ. ಜಿಲ್ಲೆಯ ತಂತ್ರಗಾರಿಕೆಯ ಮೇಲ್ವರ್ಗ, ಬಹುಸಂಖ್ಯಾತ ಹಿಂದುಳಿದ ವರ್ಗ ಎಲ್ಲರ ನಡುವೆ ಅಲ್ಪಸಂಖ್ಯಾತನಾಗಿ ಜನಪ್ರತಿನಿಧಿಯಾಗುತ್ತಾ ಎಲ್ಲರ ಅಚ್ಚರಿಗೆ ಕಾರಣವಾದ ದೇಶಪಾಂಡೆ ಈಗ ತಮ್ಮ ಮಗ ಪ್ರಶಾಂತ್‌ ದೇಶಪಾಂಡೆ ಮೂಲಕ ರಾಜಕೀಯ ಪ್ರಯೋಗಕ್ಕಿಳಿಯುವ ಯೋಚನೆಯಲ್ಲಿದ್ದಾರೆ. ನಿರಂತರ ಅಧಿಕಾರ,ಅನುಕೂಲಗಳ ಸುಖ ಕಂಡರೂ ಅದನ್ನು ಅಮಲಾಗಿಸಿಕೊಳ್ಳದ ದೇಶಪಾಂಡೆ ಈಗಲೂ ತಮ್ಮ ಸಂಸ್ಥೆ, ಟ್ರಸ್ಟ ಗಳ ಮೂಲಕ ಸಮಾಜಸೇವೆಯಲ್ಲಿದ್ದಾರೆ. ಕೋವಿಡ್‌ ಅವಧಿ, ಪ್ರವಾಹ ಪರಿಸ್ಥಿತಿಗಳಲ್ಲಿ ಪರ್ಯಾಯ ಸರ್ಕಾರದ ರೀತಿ ಕೆಲಸ ಮಾಡಿರುವ ದೇಶಪಾಂಡೆ ಅಪ್ಪ ಮಕ್ಕಳು ತಮ್ಮ ಕುಟುಂಬದ ೫ ದಶಕಗಳ ರಾಜಕೀಯ ಪರಂಪರೆಯ ಮುಂದುವರಿಕೆಗೆ ಪಣ ತೊಟ್ಟಂತಿದೆ. ಅಸಂಖ್ಯ ವರ್ಷಗಳ ರಾಜಕೀಯ ಶಕ್ತಿಯಿಂದ ತಮ್ಮ ವಲಯ ಬೆಳೆಸಿಕೊಂಡಿರುವ ಮಾಜಿ ಸಚಿವ ದೇಶಪಾಂಡೆ ಮಾರ್ಚ್‌ ೧೬ ರಂದು ತಮ್ಮ ೭೫ ನೇ ಜನ್ಮದಿನ ಆಚರಿಸಿಕೊಳ್ಳುತಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *