ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!

ಗುರುವಾರದಿಂದಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.
ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.
ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್.  ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *