ಶಿರಸಿ ಮಾರಿ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ!

ಗುರುವಾರದಿಂದಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.
ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.
ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್.  ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *