ಶಿರಸಿಯಲ್ಲಿ ಮೂರು ಹಾವುಗಳೊಂದಿಗೆ ಆಟ ಆಡಿದ ಭೂಪ!

ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

Snake bites an youth in Sirsi: ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಉರಗಗಳನ್ನು ಕೂಡ ರಕ್ಷಿಸಿದ್ದಾನೆ. ಆದ್ರೆ ಈಗ ಭಂಡ ಧೈರ್ಯದಿಂದ ಎಡವಟ್ಟು ಮಾಡಿಕೊಂಡಿದ್ದಾನೆ.

ಶಿರಸಿ: ನಮ್ಮ ಮುಂದೆ ಒಂದು ಸಣ್ಣ ಹಾವಿನ ಮರಿ ಕಂಡರೆ ಸಾಕು ಕಿರುಚಾಡಿಕೊಂಡು ಸ್ಥಳದಿಂದ ಕಾಲ್ಕಿಳುವವರ ಮಧ್ಯೆ ಈ ಯುವಕ ಭಿನ್ನ. ಕಾರಣ ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ಆಟದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ನಾಗರ ಹಾವಿನೊಂದಿಗಿನ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದೇ ಜನ ಹೇಳುತ್ತಾರೆ. ಆದರೆ, ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. ಹಾಗೆ 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದ್ರೆ ಈ ಬಾರಿ ಭಂಡ ಧೈರ್ಯ ತೋರಿ ಎಡವಟ್ಟು ಮಾಡಿಕೊಂಡಿದ್ದಾನೆ.

ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

ಶಿರಸಿಯ ಮುಸ್ಲಿಂ ಗಲ್ಲಿಯ ಸೈಯದ್ (20) ಎಂಬ ಯುವಕ ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿದ ಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ.

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ಸಾವಿರಾರು ಹಾವುಗಳ ರಕ್ಷಣೆ ಮಾಡಿದ್ದ ಯುವಕ ಈಗ ಆಸ್ಪತ್ರೆಯಲ್ಲಿ

ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿ ಈ ರೀತಿಯಾಗಿ ಯುವಕ ಮಾಡಿದ್ದನ್ನು ವಿರೋಧಿಸಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲೆಯ ಪರಿಸರ ಹೋರಾಟಗಾರ ಜೋಸೆಫ್​ ಅವರು, ಅರಣ್ಯ ಇಲಾಖೆ ಇಂತಹವರ ಬಗ್ಗೆ ನಿಗಾ ಇಡಬೇಕು. ವನ್ಯ ಜೀವಿಗಳನ್ನು ಮುಟ್ಟುವ ಹಾಗಿಲ್ಲ ಎಂಬ ಆದೇಶ ಹೊರಡಿಸಬೇಕು. ಕೆಲವರು ಪಬ್ಲಿಷಿಟಿಗೆ ಏನೇನೋ ಸ್ಟಂಟ್​ ಮಾಡಲು ಹೋಗಿ ಈ ರೀತಿಯ ಅಚಾತುರ್ಯಗಳು ನಡೆಯುತ್ತವೆ ಎಂದಿದ್ದಾರೆ. https://59837408381f38a60271467c36d8d45e.safeframe.googlesyndication.com/safeframe/1-0-38/html/container.htmlhttps://prod.suv.etvbharat.com/v2/smart_urls/623358d771d60097bf975951/embedplayer1?

ಪರಿಸರ ಹೋರಾಟಗಾರರ ಅಭಿಪ್ರಾಯ

ಇನ್ನು ಉರುಗ ಪ್ರೇಮಿ ಮಹೇಶ್ ಮಾತನಾಡಿ, ವಿಡಿಯೋಗಳನ್ನು ನೋಡಿ ಹಾವುಗಳ ಜೊತೆ ಆಟವಾಡುವುದು ಮತ್ತು ತರಬೇತಿ ಇಲ್ಲದೇ ಹಾವುಗಳ ಸಂರಕ್ಷಣೆ ಮಾಡುವುದು ಅಪಾಯಕರ. ಈ ರೀತಿ ಯಾರೂ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *