ಹೊಸಳ್ಳಿ ಕೆರೆಗೆ ಸೇರುತ್ತಿದೆ ಕೆಮಿಕಲ್ ನೀರು: ವಿಷಕಾರಿಯಾದ ಹತ್ತಾರು ಹಳ್ಳಿಯ ಜೀವಜಲ

ಕಾರವಾರ: ಅದು ಸುತ್ತಲಿನ ಹತ್ತು ಹಳ್ಳಿಗಳಿಗೆ ಆಸರೆಯಾಗಿದ್ದ ಕೆರೆ. ಆ ಕೆರೆಯಿಂದಾಗಿ ಹಲವು ಬಾವಿಗಳ ಅಂತರ್ಜಲ ಮಟ್ಟ ಕಾಯ್ದಿರುವುದರ ಜೊತೆಗೆ ಅಲ್ಲಿನ ಜನ, ಜಾನುವಾರು, ಹೊಲಗದ್ದೆಗಳಿಗೆ ಅದೇ ನೀರನ್ನ ಬಳಕೆ ಮಾಡುತ್ತಿದ್ದರು. ಜೊತೆಗೆ ಮೀನು ಸಾಕಣೆ ಕೂಡ ಈ ಕೆರೆಯಲ್ಲೇ ಮಾಡಲಾಗುತ್ತಿತ್ತು. ಆದರೆ, ಊರಿನ ಜೀವ ಜಲವಾಗಿದ್ದ ಈ ಕೆರೆ ಪ್ರಸ್ತುತ ವಿಷಕಾರಿಯಾಗಿ ಬದಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್‌ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪನಿಗಳಿಂದ ಬಿಡುಗಡೆಯಾಗುತ್ತಿರುವ ಕೆಮಿಕಲ್ ಮಿಶ್ರಿತ ನೀರು ಹಾಗೂ ತ್ಯಾಜ್ಯದ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಸಂಪೂರ್ಣ ವಿಷವಾಗಿದೆ

ಹೌದು, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್‌ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪನಿಗಳಿಂದ ಬಿಡುಗಡೆಯಾಗುತ್ತಿರುವ ಕೆಮಿಕಲ್ ಮಿಶ್ರಿತ ನೀರು ಹಾಗೂ ತ್ಯಾಜ್ಯದ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಸಂಪೂರ್ಣ ವಿಷವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

https://prod.suv.etvbharat.com/v2/smart_urls/623822b171d60097bf976313/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-images/14786397_tkwr-

ವಿಷಕಾರಿಯಾದ ಹೊಸಳ್ಳಿ ಕೆರೆ

ಕೆರೆಗೆ ಸೇರುತ್ತಿರುವ ರಾಸಾಯನಿಕ ತ್ಯಾಜ್ಯದಿಂದಾಗಿ ಹೊಸಳ್ಳಿ ಕೆರೆಯ ಬಳಿ ಸುಳಿಯಲು ಕೂಡ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿ ಹೋಗಿದ್ದಾರೆ. ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷೆ ಮಾಡಲಾಗಿದ್ದು, ಕೆರೆಯ ನೀರಿನ ಪಿಎಚ್ ಪ್ರಮಾಣ ಹೆಚ್ಚಿದೆ. ಪ್ರತಿ 100 ಎಂಎಲ್ ನೀರಿನಲ್ಲಿ 1,800 ಪ್ರಮಾಣದಷ್ಟು ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ.

ಕೆರೆ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲಮಟ್ಟ ಕೂಡ ವಿಷವಾಗುತ್ತಿದೆ ಎಂಬ ಅಂಶ ಆತಂಕ ಮೂಡಿಸಿದೆ‌. ಇನ್ನು ಈ ಕೆರೆಯಲ್ಲಿ ಸ್ಥಳೀಯರು ಮೀನು ಸಾಕಣಿಕೆ ಮಾಡುತ್ತಿದ್ದು, ಆ ಮೀನುಗಳನ್ನು ಸೇವಿಸುವುದರಿಂದ ರೋಗಗಳು ಹರಡಬಹುದು ಎಂಬ ಭೀತಿ ಎದುರಾಗಿದೆ. ಆದರೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾರೊಬ್ಬರು ಇತ್ತ ಗಮನಹರಿಸುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.

ಹೊಸಳ್ಳಿ ಕೆರೆಯು ಸುಮಾರು 28 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ಸುತ್ತಲಿನ ಹಳ್ಳಿಯ ಜನರಿಗೆ ಉಪಯೋಗವಾಗುತ್ತಿತ್ತು. ಕೆರೆ ನೀರನ್ನು ಕುಡಿಯಲು, ದಿನ ಬಳಕೆಗೆ, ಹೊಲಗದ್ದೆಗಳಿಗೆ ಹಾಗೂ ಜಾನುವಾರುಗಳಿಗಾಗಿ ಜನರು ಬಳಕೆ ಮಾಡುತ್ತಿದ್ದರು. ಯಾವಾಗ ಈ ಖಾಸಗಿ ಕಾರ್ಖಾನೆಯಿಂದ ಕೆಮಿಕಲ್ ಮಿಶ್ರಿತ ನೀರು ಹಾಗೂ ಸ್ಥಳೀಯರಿಂದ ತ್ಯಾಜ್ಯ ಮಿಶ್ರಿತ ನೀರು ಈ ಕೆರೆಗೆ ಬರಲು ಪ್ರಾರಂಭವಾಯ್ತೋ ಅಂದಿನಿಂದ ಈ ಕೆರೆ ನೀರನ್ನು ಜನರು ಉಪಯೋಗಿಸುವುದನ್ನೇ ನಿಲ್ಲಿಸಿದ್ದಾರೆ.

ಕೆರೆಯ ಸುತ್ತಲೂ ಹಚ್ಚಹಸಿರಿನ ಹುಲ್ಲು ಬೆಳೆದಿರುವುದರಿಂದ ದನ – ಕರುಗಳು ಮೇಯಲು ಇಲ್ಲಿಗೆ ಬರುತ್ತವೆ. ಹುಲ್ಲು ತಿಂದ ಬಳಿಕ ಇದೇ ಕೆರೆಯ ನೀರನ್ನು ಕುಡಿಯುತ್ತವೆ. ಇದರಿಂದಾಗಿ ಜಾನುವಾರಗಳು ಕೂಡ ರೋಗಗಳಿಗೆ ತುತ್ತಾಗುತ್ತಿವೆ. ಅಷ್ಟೇ ಅಲ್ಲದೆ ಈ ನೀರನ್ನ ಜನ ಮುಟ್ಟಿದ್ರೆ ಸಾಕು ತುರಿಕೆ, ಕಜ್ಜಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಅನ್ನೋದು ಗ್ರಾಮಸ್ಥರ ಅಳಲು. ಇನ್ನು ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಕೇಳಿದರೆ, ಇದುವರೆಗೆ ಈ ಕೆರೆಯ ಬಗ್ಗೆ ಯಾವುದೇ ದೂರುಗಳು ಬಂದಿರಲಿಲ್ಲ. ನೀರಾವರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನ ಸ್ಥಳಕ್ಕೆ ಕಳುಹಿಸಿ ಪರೀಕ್ಷೆ ನಡೆಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಜನರಿಗೆ ಬಳಕೆಯಾಗಬೇಕಿದ್ದ ಕೆರೆ ನೀರು ಖಾಸಗಿ ಕೈಗಾರಿಕೆಯ ತ್ಯಾಜ್ಯದಿಂದಾಗಿ ಕಲುಷಿತಗೊಂಡು ಹಾಳಾಗುತ್ತಿರುವುದು ನಿಜಕ್ಕೂ ದುರಂತ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಕೆರೆಯನ್ನ ಬಳಕೆಗೆ ಯೋಗ್ಯ ಮಾಡಬೇಕಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *