ಗುಪ್ತಚರ ಇಲಾಖೆ ವಿಫಲ,ಆತಂಕ!

Thumbnail image

ಗುಪ್ತಚರ ಇಲಾಖೆ ನಿಶಕ್ತವಾಗಿದೆ, ಬಲಪಡಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ: ಸ್ಪೀಕರ್ ಕಾಗೇರಿ ಆತಂಕ

ಗುಪ್ತಚರ ಇಲಾಖೆಯಲ್ಲಿ ಹೊಸಬರು ಇಲ್ಲ. ಇದ್ದವರು ಸೇವಾ ಅವಧಿ ಮುಗಿಯುವ ಹಂತದಲ್ಲಿದ್ದಾರೆ. ಟಿವಿಗಳ‌ ಹೆಡ್‌ಲೈನ್ಸ್ ಅನ್ನು ಗುಪ್ತಚರ ಇಲಾಖೆಯವರು ಬ್ರೀಫಿಂಗ್ ಕೊಟ್ಟು ಬಿಡುವ ಸ್ಥಿತಿಯಲ್ಲಿದ್ದಾರೆ -ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ.

ಬೆಂಗಳೂರು: ರಾಜ್ಯದಲ್ಲಿ ಗುಪ್ತಚರ ಇಲಾಖೆ ನಿಶಕ್ತವಾಗಿದ್ದು, ಅದನ್ನು ಬಲಪಡಿಸದೇ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕ ವ್ಯಕ್ತಪಡಿಸಿದರು. ಹಿಜಾಬ್ ವಿಚಾರವಾಗಿ ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಗುಪ್ತಚರ ಇಲಾಖೆ ನಿಷ್ಕ್ರಿಯವಾಗಿದೆ. ಇದನ್ನು ಸಶಕ್ತಗೊಳಿಸಬೇಕು. ಇದರ ಬಗ್ಗೆ ನಾನು ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದರು.

ಗುಪ್ತಚರ ಇಲಾಖೆಯಲ್ಲಿ ಹೊಸಬರು ಇಲ್ಲ. ಇದ್ದವರು ಸೇವಾ ಅವಧಿ ಮುಗಿಯುವ ಹಂತದಲ್ಲಿದ್ದಾರೆ. ಟಿವಿಗಳ‌ ಹೆಡ್‌ಲೈನ್ಸ್ ಅನ್ನು ಗುಪ್ತಚರ ಇಲಾಖೆಯವರು ಬ್ರೀಫಿಂಗ್ ಕೊಟ್ಟು ಬಿಡುವ ಸ್ಥಿತಿಯಲ್ಲಿ ಇದ್ದಾರೆ. ಮಿಲಿಟರಿ ಇಂಟೆಲಿಜೆನ್ಸ್ ಮಾದರಿಯ ಇಂಟೆಲಿಜೆನ್ಸ್ ನಮ್ಮಲ್ಲಿ ಬೇಕು ಎಂದರು. ಇದಕ್ಕೂ ಮುನ್ನ ರಮೇಶ್ ಕುಮಾರ್ ಮಾತನಾಡಿ, ಹಿಜಾಬ್ ವಿಚಾರದ ಬೆಳವಣಿಗೆಯಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ.

ಮಕ್ಕಳ ಮೈಂಡ್ ವಾಶ್ ಮಾಡುವ ಇಂತಹ ಘಟನೆಗಳ ಬಗ್ಗೆ ಎಚ್ಚೆತ್ತಕೊಂಡಿದ್ದರೆ, ಇಂತಹ ಅನಾಹುತಗಳು ಆಗುತ್ತಿತ್ತಾ?. ಗುಪ್ತಚರ ಇಲಾಖೆಯವರು ಮುಖ್ಯಮಂತ್ರಿಗಳಿಗೆ ಸಲಹೆ ಕೊಟ್ಟು ಕೊಟ್ಟು ಸಿಎಂಗಳು ಸೋತು ಮನೆಗೆ ವಾಪಸ್ ಬಂದಿದ್ದಾರೆ. ಇಂಟೆಲಿಜೆನ್ಸ್ ನವರು ಸರಿ ಇದ್ದಿದ್ದರೆ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನಿಲ್ಲುತ್ತಿದ್ದರಾ? ಇದೇ ಇಂಟಲಿಜೆನ್ಸ್ ನ ಪರಿಸ್ಥಿತಿ ಎಂದರು.

ಸಮಾಜದ ಶಾಂತಿ ಭಂಗ ಮಾಡುವವರನ್ನು ಪತ್ತೆ ಹಚ್ಚುಬೇಕು. ಹಾಗಾದಾಗ ಶಾಂತಿಯಿಂದ ಬದುಕಲು ಸಾಧ್ಯ. ಗುಪ್ತಚರ ಇಲಾಖೆಯ ಡಿಜಿ ಪ್ರತಿನಿತ್ಯ ಸಿಎಂಗೆ ಮಾಹಿತಿ ನೀಡುತ್ತಾರೆ. ಅವರಿಗೆ ಮಾಹಿತಿ ಕೊಡುವುದು ಅವರ ಕೆಳಗಿನ ಅಧಿಕಾರಿಗಳು. ನಮ್ಮೂರಲ್ಲಿ ಒಬ್ಬ ಇಂಟೆಲಿಜೆನ್ಸ್ ಇದ್ದಾರೆ. ಅವರು ನಿತ್ಯ ನನ್ನ ಕಾರು ಡ್ರೈವರ್ ಗೆ ಕರೆ ಮಾಡಿ ಸಾಹೇಬ್ರು ಎಲ್ಲಿ ಹೋಗ್ತಾರೆ ಎಂದು ವಿಚಾರಿಸುತ್ತಾರೆ. ನಾನು ಬೆಂಗಳೂರು ಬಿಟ್ಟರೆ ಮನೆಗೆ ಮನೆ ಬಿಟ್ಟರೆ ತೋಟಕ್ಕೆ ಹೋಗುತ್ತೇನೆ. ಅವನು ಕೊಡೋದೇ ಇಂಟೆಲಿಜೆನ್ಸ್ ಎಂದು ರಮೇಶ್ ಕುಮಾರ್ ವಿವರಿಸಿದರು.

ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಗುಪ್ತಚರ ಇಲಾಖೆಗೆ ಪ್ರತ್ಯೇಕ ಕೇಡರ್ ನೇಮಕ ಮಾಡಬೇಕು ಎಂಬ ಚಿಂತನೆ ಇದೆ. ಅವರಿಗೆ ವಿಶೇಷ ತರಬೇತಿ ನೀಡಬೇಕು ಎಂಬ ಚಿಂತನೆ ನಡೆಯುತ್ತಿದೆ ಎಂದರು. (ಇಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *