ಮಾವು ಖರೀದಿ… ಸಂಘದ ಹೇಳಿಕೆ ವಿರುದ್ಧ ವಿಶ್ವನಾಥ್‌,ಕೋಡಿಹಳ್ಳಿ ಗರಮ್

ಮುಸ್ಲಿಮರನ್ನು ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಿದರೆ ಮನೆಯಿಂದ ರದ್ದಿ ಖರೀದಿಸುವವರು ಯಾರು? ರೈತರ ಮಾವು ಖರೀದಿಸುವವರು ಯಾರು?

ಇತ್ತೀಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದು ಹೇಳಿದರು.‌

Vishwanath

ಮೈಸೂರು: ಬಲಪಂಥೀಯ ಸಂಘಟನೆಗಳಿಂದ ಪ್ರಚೋದನಕಾರಿ ಭಾಷಣಗಳ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಾತಿ ಮತ್ತು ಧರ್ಮದ ಬಗ್ಗೆ ಜಗಳವಾಡುವ ಬದಲು ಕಷ್ಟಪಟ್ಟು ದುಡಿದು ತಮ್ಮ ಸಂಪಾದನೆ ಹೆಚ್ಚಿಸಿಕೊಳ್ಳಬೇಕೆಂದು ಬಿಜೆಪಿ ಎಂಎಲ್ಸಿ ಎಎಚ್ ವಿಶ್ವನಾಥ್ ಜನರಿಗೆ ಸಲಹೆ ನೀಡಿದ್ದಾರೆ.

ಮೈಸೂರಿನ  ಹೊರವಲಯದ ಹೂಟಗಳ್ಳಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿ ನಡೆದ ‘ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದು ಹೇಳಿದರು.

ಜನರನ್ನು ಗಲಭೆಗೆ ಪ್ರಚೋದಿಸುವವರು ಪ್ರಾಣ ಕಳೆದುಕೊಂಡ ಉದಾಹರಣೆಗಳಿಲ್ಲ. ಅವರು ಪ್ರಚೋದನೆ ಕೊಟ್ಟು ಸುರಕ್ಷಿತವಾಗಿ ಇರುವರು. ಗಲಭೆಯಲ್ಲಿ ತೊಡಗುವ ತಳ ಸಮುದಾಯದ ಅಥವಾ ಬಡ ಕುಟುಂಬದ ಯುವಕರು ಪ್ರಾಣ ಕಳೆದುಕೊಳ್ಳುವರು. ಈ ಸತ್ಯವನ್ನು ಜನರು ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಪಟೇಲರು ಪ್ರಾಬಲ್ಯ ಹೊಂದಿರುವ ಗುಜರಾತ್‌ನಲ್ಲಿ ಸೂಕ್ಷ್ಮ ಸಮುದಾಯವಾಗಿರುವ ಗಾಣಿಗ ಜಾತಿಗೆ ಸೇರಿದವರು. ಅವರು ಮೂರು ಅವಧಿಗೆ ಮುಖ್ಯಮಂತ್ರಿಯಾದರು ಮತ್ತು ನಂತರ ಎರಡನೇ ಅವಧಿಗೆ ಪ್ರಧಾನಿಯಾದರು. ಅವರು ಎಂದಿಗೂ ಹಿಂದುತ್ವದ ಬಗ್ಗೆ ಮಾತನಾಡಿಲ್ಲ, ಬದಲಾಗಿ ದಲಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಚಯಿಸಿದರು.

ಆದರೆ ರಾಜ್ಯ ಸರಕಾರ ಕೇಂದ್ರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬದಲು ದೇವಸ್ಥಾನಗಳ ಬಳಿ ಮುಸ್ಲಿಮರು ಅಂಗಡಿಗಳನ್ನು ನಡೆಸಬೇಕೆ  ಅಥವಾ ಬೇಡವೇ ಎಂಬ ಚರ್ಚೆಯಲ್ಲಿ ಕಾಲಹರಣ ಮಾಡುತ್ತಿರುವುದು ಅಸಹ್ಯಕರ ಸಂಗತಿ,’’ ಎಂದು ಹೇಳಿದರು.

ಶತಮಾನಗಳಿಂದಲೂ ಮುಸ್ಲಿಮರು ದೇವಸ್ಥಾನಗಳ ಬಳಿ ಅಂಗಡಿಗಳನ್ನು ನಡೆಸುತ್ತಿದ್ದರು ಎಂದಿಗೂ ಸಮಸ್ಯೆಯಾಗಿರಲಿಲ್ಲ, ಮುಸ್ಲಿಮರನ್ನು ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಿದರೆ ಮನೆಯಿಂದ ರದ್ದಿ ವಸ್ತುಗಳನ್ನು ಖರೀದಿಸುತ್ತಾರೆ ಅಥವಾ ರೈತರಿಂದ ಮಾವು ಖರೀದಿಸುವವರು ಯಾರು ಎಂದು  ವಿಶ್ವನಾಥ್ ಪ್ರಶ್ನಿಸಿದರು. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *