ನಾರಾಯಣ ಗುರುಗಳಿಗೆ ಅನ್ಯಾಯ ಬೇಸರ

ಸಾಮಾಜಿಕ ಕ್ರಾಂತಿ ಮಾಡಿದ ನಾರಾಯಣ ಗುರುಗಳಿಗೆ ನ್ಯಾಯ ದೊರೆಯಲಿಲ್ಲ ಎಂದು ವಿಷಾದಿಸಿದ ಬೈಲೂರು ನಿಜಗುಣಾನಂದ ಸ್ವಾಮೀಜಿ ಎಲ್ಲರ ಒಳಿತಿಗೆ ದುಡಿದ ನಾರಾಯಣ ಗುರುಗಳನ್ನು ಅವರ ಸಮೂದಾಯ ಕೂಡಾ ಉಪೇಕ್ಷಿಸಿದ ಬಗ್ಗೆ ಸಾತ್ವಿಕ ಬೇಸರವಿದೆ ಎಂದಿದ್ದಾರೆ. ಶಿರಸಿಯಲ್ಲಿ ನಡೆದ ಸೌಹಾರ್ದ ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದ ಅವರು ಮನುಷ್ಯತ್ವ, ಮಾನವೀಯತೆ ಇಲ್ಲದ ಧರ್ಮ ಧರ್ಮವೇ ಅಲ್ಲ, ಎಲ್ಲಾ ಧರ್ಮಗಳೂ ಮಾನವೀಯತೆ,ಹೃದಯವಂತಿಕೆ ಬೋಧಿಸುತ್ತವೆ ಎಂದು ಪ್ರತಿಪಾದಿಸಿದರು.

ಧನ್ಯವಾದಗಳು

ವಕೀಲ ಮಂಜುನಾಥ ನಾಯ್ಕ ಸ್ವಾಗತಿಸಿದ ಸಮಾವೇಶದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬೋಧಿವರ್ಧನ ಪುರಸ್ಕೃತ ಚಿಂತಕ ಮಹೇಂದ್ರ ಕುಮಾರ ಮಾತನಾಡಿ ನಿಸರ್ಗ ನಿಯಮ ಅರಿತರೆ ಮಾನವೀಯತೆ ಅರ್ಥವಾಗುತ್ತದೆ. ಮನುಷ್ಯ ಪರಿಸರ,ನೆರೆಹೊರೆಯನ್ನು ಅರಿತು ಪ್ರೀತಿಸಿದರೆ ಶಾಂತಿ ಉದಭವಿಸುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಕೋಲಶಿರ್ಸಿ ಕನ್ನೇಶ್‌ ಮಾತನಾಡಿ ದೇಶದ ವರ್ತಮಾನ ಅರಿತುಕೊಳ್ಳಲು ಸ್ಥಳೀಯ ವರ್ತಮಾನಗಳನ್ನು ಅವಲೋಕಿಸಿದರೆ ಸಾಕು. ಮೂತ್ರ ಸಿಂಪಡಿಸುವ, ಉಪಾಯದಿಂದ ಧರ್ಮದ ಹೆಸರಿನಲ್ಲಿ ಜಾತಿ,ಶ್ರೀಮಂತಿಕೆಯ ಶ್ರೇಷ್ಠತೆ ಪ್ರತಿಪಾದಿಸುವ ಜನರು ದೇಶದ ಅಸಮಾನತೆ,ಅಶಾಂತಿಗೆ ಕಾರಣವಾಗಿದ್ದಾರೆ. ಈ ವಾಸ್ತವಗಳನ್ನು ತಿಳಿಸಲು ಇಂಥ ಸಮಾವೇಶಗಳ ಅಗತ್ಯವಿದೆ ಎಂದರು.

ಸಂಘಟಕರಾದ ಪ್ರಸನ್ನನಾಯ್ಕ ಮತ್ತು ಮಂಜುನಾಥ ನಾಯ್ಕರನ್ನು ಪ್ರಶಂಸಿಸಲಾಯಿತು. ಮುಸ್ಲಿಂ ಸಮೂದಾಯ, ಮುಕ್ರಿ ಸಮೂದಾಯಗಳು ಸೇರಿದಂತೆ ಕೆಲವರು ನಿಜಗುಣಾನಂದ ಶ್ರೀ ಗಳನ್ನು ಸನ್ಮಾನಿಸಿ ಗೌರವಿಸಿದರು. ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಸದಸ್ಯ ಸುಭಾಶ್‌ ಕಾನಡೆ ಅಧ್ಯಕ್ಷತೆ ವಹಿಸಿದ್ದರು. ಟ್ರೇಡ್‌ ಯೂನಿಯನ್‌ ಮುಖಂಡ ನಾಗಪ್ಪ ನಾಯ್ಕ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *