ಅವಘಡದ ಸಂದರ್ಭದಲ್ಲಿ ಬೆಂಕಿ ಆರಿಸುವಾಗ ಎಚ್ಚರಿಕೆ ಅಗತ್ಯ


ಸಿದ್ದಾಪುರ; ಬೆಂಕಿಯ ಅನಾಹುತಗಳು ಘಟಿಸಿದಾಗ ತಕ್ಷಣದಲ್ಲಿ ತೆಗೆದುಕೊಳ್ಳುವ ಕ್ರಮ ತೀರಾ ಮುಖ್ಯವಾಗುತ್ತದೆ. ಎಲ್ಲಾ ಬೆಂಕಿಯನ್ನು ಕೇವಲ ನೀರಿನಿಂದ ಆರಿಸಲು ಸಾಧ್ಯವಿಲ್ಲ.ಅವುಗಳಲ್ಲಿಯೂ ನಾಲ್ಕು ವಿಧಗಳಿವೆ. ಬೆಂಕಿ ಅವಘಡದ ಸಂದರ್ಭದಲ್ಲಿ ಅದನ್ನು ಆರಿಸುವಾಗ ಎಚ್ಚರಿಕೆ ಅಗತ್ಯ ಎಂದು ಸ್ಥಳೀಯ ಅಗ್ನಿಶಾಮಕದಳದ ಠಾಣಾಧಿಕಾರಿ ಗುರುನಾಥ ಐ.ನಾಯ್ಕ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ ಕಚೇರಿ, ಆಧಾರ ಸಂಸ್ಥೆ(ರಿ) ಸಿದ್ದಾಪುರ, ಇವುಗಳ ಆಶ್ರಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಾಹಿತಿಯನ್ನು ನೀಡಿ ಮಾತನಾಡಿದರು.ಎಲ್ಲಾ ಬೆಂಕಿಗಳನ್ನು ನೀರನ್ನು ಸುರಿದು ಆರಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನೀರನ್ನು ಹಾಕಿದರೆ ಬೆಂಕಿ ಸಿಡಿಯುತ್ತದೆ. ಎಣ್ಣೆ ಬಂಡಿಯಂತಹ ಅಡಿಗೆ ಪಾತ್ರಗೆ ಬೆಂಕಿ ಬಿದ್ದಾಗ ನೀರನ್ನು ಹಾಕಿದರೆ ಬೆಂಕಿ ಮೇಲಕ್ಕೆ ಬರುತ್ತದೆ. ಹಾಗೆ ವಿದ್ಯತ್ ಅವಘಡವಾದಾಗ ನೀರನ್ನು ಹಾಕುವಂತಿಲ್ಲ. ಅದಕ್ಕೆಲ್ಲ ಅದರದೇ ಆದ ರೀತಿಯಲ್ಲಿ ಬೇರೆಯ ಕ್ರಮಗಳನ್ನು ಬಳಸಿ ಬೆಂಕಿ ಆರಿಸಬೇಕು ಎಂದರು.


ಆಧಾರ ಸಂಸ್ಥೆಯ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ದೊಡ್ಡ ಬೆಂಕಿಯ ಅನಾಹುತಗಳು ಚಿಕ್ಕ ಕಿಡಿಯಿಂದಲ್ಲೆ ಹುಟ್ಟಿಕೊಳ್ಳುತ್ತವೆ. ಅದನ್ನು ಗಮನಿಸಿದ ತಕ್ಷಣದಲ್ಲಿ ಆರಿಸುವಂತಾಗಬೇಕು. ಆ ಕುರಿತು ನಮ್ಮಲ್ಲಿ ಅಗತ್ಯ ಜ್ಞಾನವನ್ನು ಮಾಹಿತಿಯ ಮೂಲಕ ಪಡೆದುಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಬೇಸಿಗೆಯ ಕಾಲದಲ್ಲಿ ತೆಗೆದುಕೊಂಡರೆ ನಮ್ಮ ಸುತ್ತ ಆಗಬಹುದಾದ ದೊಡ್ಡ ಬೆಂಕಿ ಅನಾಹುತ ತಪ್ಪಿಸಲು ಸಾಧ್ಯ ಎಂದರು.
ಅಗ್ನಿಶಾಮಕ ಪ್ರಸಾದ ಎನ್.ನಾಯ್ಕ ಬೆಂಕಿಯ ಕುರಿತು ಮತ್ತು ಅದರ ವಿಭಾಗಗಳ ಕುರಿತಾಗಿ ವಿವರಿಸಿದರು. ಅಗ್ನಿಶಾಮಕದಳದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು. ಶಿಬಿರದ ಮಕ್ಕಳೊಂದಿಗೆ ಸಂವಾದ ನಡೆಸಿದರು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸ್ಮೀತಾ, ಜಾನಪದ ಕಲಾವಿದ ಗೋಪಾಲ ಕಾನಳ್ಳಿ, ಅಗ್ನಿಶಾಮಕ ಸಿಬ್ಬಂದಿಗಳಾದ ಮಾಸ್ತಿ ಎಂ.ಗೊಂಡ, ಚಂದ್ರ ನಾಯ್ಕ ಎಂ, ಬಾಳೇಶ ತಳವಾರ, ಬಸವಂತ ಜಗತಾಪ, ಜಗದೀಶ ಕಾಮತ ಉಪಸ್ಥಿತರಿದ್ದರು.

ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಬೇಸಿಗೆ ಶಿಬಿರ ಪೂರಕ
ಸಿದ್ದಾಪುರ; ಇಂದಿನ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿರುತ್ತಾರೆ.ಪ್ರತಿಯೊಂದು ಮಗುವಿನಲ್ಲಿಯೂ ಒಂದು ಯಾವುದಾದರೂ ಪ್ರತಿಭೆ ಅಡಗಿರುತ್ತದೆ.ಅದನ್ನು ಬೆಳಕಿಗೆ ತರುವ ಕಾರ್ಯ ಆಗಬೇಕು. ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳ ಬೆಳವಣಿಗೆಗಳಿಗೆ ಪೂರಕವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಶೀಲಾ ಮೊಗೆರ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ ಕಚೇರಿ, ಆಧಾರ ಸಂಸ್ಥೆ(ರಿ) ಸಿದ್ದಾಪುರ, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕಳೆದ ಎರಡು ವರ್ಷಗಳಿಂದ ಇಲಾಖೆ ಕೋವಿಡ್ ಕಾರಣಕ್ಕೆ ಬೇಸಿಗೆ ಶಿಬಿರವನ್ನು ನಡೆಸಿರಲಿಲ್ಲ.ಶಿಬಿರದ ಪ್ರಯೋಜನವನ್ನು ಈ ಭಾಗದ ಮಕ್ಕಳು ಪಡೆದುಕೊಳ್ಳಬೇಕು. ಅಂಗಡಿಯ ತಿನಿಸುಗಳಿಗೆ ಆಕರ್ಷಿತರಾಗಿರದೆ ಪೌಷ್ಠಿಕ ಆಹಾರವನ್ನು ಹೆಚ್ಚು ಸೇವಿಸಬೇಕು. ಸದೃಢ ಆರೋಗ್ಯವನ್ನು ಹೊಂದುವಂತಾಗಬೇಕು ಎಂದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಿಕ್ಷಣ ಇಲಾಖೆಯ ಸಿ.ಆರ್.ಪಿ ರಾಮನಾಥ ನಾಯ್ಕ ಮಾತನಾಡಿ ಮಕ್ಕಳಿಗೆ ಪಠ್ಯದಿಂದ ಸಿಗುವುದು ಕೆಲವು ಮಾತ್ರ. ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ವಿವಿಧ ವಿಚಾರಗಳನ್ನು ಹೆಚ್ಚು ಅರಿಯಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿಯ ಸೂಪ್ತ ಪ್ರತಿಭೆ ಹೊರಬುರುವುದಕ್ಕೆ ವೇದಿಕೆಯಾಗುತ್ತದೆ ಎಂದರು. ಶಿಕ್ಷಕಿ ಸವಿತಾ ಹೆಗಡೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಫೇವಾರ್ಡ ಉತ್ತರ ಕನ್ನಡ ಅಧ್ಯಕ್ಷರಾದ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಮಗುವಿನ ಮನಸ್ಸಿನಲ್ಲಿ ಕ್ರೀಯಾತ್ಮಕ ಸೃಜನಾತ್ಮಕ ಭಾವನೆಗಳನ್ನು ಬಿತ್ತುವ ಶಿಬಿರಗಳು ಮುಂದಿನ ಸರ್ವತೋಮುಖ ಬೆಳವಣಿಗೆಗಳಿಗೆ ಕಾರಣವಾಗುತ್ತದೆ. ವಾಸ್ತವ ಪ್ರಪಂಚದ ಅರಿವು ಮೂಡುವುದಕ್ಕೆ ಸಹಕಾರಿಯಾಗುತ್ತದೆ. ಅವರ ವ್ಯಕ್ತಿತ್ವ ವಿಕಸನಗೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದರು.
ವೇದಿಕೆಯಲ್ಲಿ ಕರಾಠೆ ತರಬೇತಿ ಕೇಂದ್ರದ ಮುಖ್ಯಸ್ಥರಾದ ಆನಂದ ಕೆ.ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಮೇಲ್ವಿಚಾರಕಿ ನಾಗರತ್ನ ನಾಯ್ಕ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಾದ ಕು.ಮಾನ್ಯ, ಪ್ರಾರ್ಥನಾ, ಹರ್ಷಿತ ಪ್ರಾರ್ಥಿಸಿದರು. ಕು.ಭುವನ ಹಾಗೂ ಕು. ಪ್ರಥಮ ನಾಡಗೀತೆ ಹಾಡಿದರು. ಕು.ಸುವಾಸ್ ಸ್ವಾಗತಿಸಿದರು. ಕು.ಹರ್ಷಿಣಿ ಕಾರ್ಯಕ್ರಮ ನಿರ್ವಹಿಸಿದರು.ಕು.ರಾಜೇಶ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *