rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ. (naanu gouri)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *