rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ. (naanu gouri)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *