ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು. – ಹೆಚ್.ವಿಶ್ವನಾಥ್

ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕ ಬದಲಾಯಿಸುವುದು ಸರಿಯಲ್ಲ.. ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಮಕ್ಕಳು ಎಂದೂ ಏಕ ಪಕ್ಷದ ದೃಷ್ಟಿಕೋನದಲ್ಲಿ ಬೆಳೆಯಬಾರದು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಹೆಚ್​.ವಿಶ್ವನಾಥ್​ ಆಗ್ರಹಿಸಿದ್ದಾರೆ..

ಬೆಂಗಳೂರು : ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸಿ, ಶಿಕ್ಷಣವನ್ನು ಕೇಸರಿಕರಣ ಮಾಡುವುದರಿಂದ ತಪ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್​ ಸದಸ್ಯ ಅಡುಗೂರು ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಮಂಗಳವಾರ ಪ್ರೆಸ್​ಕ್ಲಬ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು.

ಅವರಲ್ಲಿ ಯಾರು ಸರಿಯಾದ ಶಿಕ್ಷಣ ತಜ್ಞರಲ್ಲ. ಅಲ್ಲದೇ, ಆ ಸಮಿತಿಯನ್ನು ಸ್ಥಾಪಿಸುವಾಗ ಆಗಲಿ ಅಥವಾ ಪುಸ್ತಕ ಪರಿಷ್ಕರಣೆ ಮಾಡುವಾಗ ಆಗಲಿ ಯಾವುದೇ ನಿಯಮಗಳನ್ನು ಪಾಲಿಸಿಲ್ಲ ಎಂದು ದೂರಿದರು.

.ಎಂಎಲ್​ಸಿ ಹೆಚ್​ ವಿಶ್ವನಾಥ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವುದು..

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಇದು ಮಕ್ಕಳ ಭವಿಷ್ಯದ ಪ್ರಶ್ನೆ. ಮಕ್ಕಳು ಎಂದೂ ಏಕ ಪಕ್ಷಾ ದೃಷ್ಟಿಕೋನದಲ್ಲಿ ಬೆಳೆಯಬಾರದು. ಅದು ಉತ್ತಮ ಬೆಳವಣಿಗೆ ಅಲ್ಲ. ಹಾಗಾಗಿ, ಈ ಪಠ್ಯವನ್ನು ರದ್ದುಗೊಳಿಸಬೇಕು ಎಂದರು.

ಪಠ್ಯ ಪುಸ್ತಕಗಳ ಪರಿಕ್ಷರಣೆ ತಪ್ಪಲ್ಲ: ಹಿಂದಿನ ಪಠ್ಯ ಪುಸ್ತಕಗಳು ಸಂಪೂರ್ಣವಾಗಿ ಸರಿ ಇದೆ ಎಂದು ಹೇಳುವುದಿಲ್ಲ. ಅದರಲ್ಲಿಯೂ ಅನೇಕ ತಪ್ಪಿತ್ತು. ಆದರೆ, ಅನೇಕ ಚರ್ಚೆಗಾಗಿ ನಂತರ ಆ ಪಠ್ಯ ಪುಸ್ತಕಗಳನ್ನು ಜಾರಿಗೆ ತರಲಾಗಿತ್ತು. ಇಲ್ಲಿ ಯಾವುದೇ ಒಂದು ನಿಯಮ, ಎನ್‌ಸಿಆರ್‌ಟಿ ವಿಷಯಗಳನ್ನು ಅನುಸರಿಸಿಲ್ಲ. ಅದು ತಪ್ಪು. ಹಾಗಾಗಿ, ಈ ಸಮಿತಿಯನ್ನು ರದ್ದು ಮಾಡಿ, ಉನ್ನತ ಮಟ್ಟದ ಸಮಿತಿ ರಚಿಸಿ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡಲಿ ಎಂದು ಆಗ್ರಹಿಸಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *